ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಮಂಗಳೂರು ಇವರು ಜಿಲ್ಲಾ ಬಾಲಭವನ, ಕದ್ರಿ ಮಂಗಳೂರು ಇಲ್ಲಿ ಏರ್ಪಡಿಸಲಾದ ಜಿಲ್ಲಾಮಟ್ಟದ ಮಕ್ಕಳ ’ಕಲಾಶ್ರೀ ಪ್ರಶಸ್ತಿ’ ಆಯ್ಕೆ ಶಿಬಿರದ ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್ಎಸ್. – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಮತ್ತು ಉದಯವಾಣಿ ಆರ್ಟಿಸ್ಟ್ ಪಾರ್ಮ್(ರಿ) ಉದಯವಾಣಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲೂ ಈತ ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾನೆ.