ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ (ರಿ.) ಮಂಗಳೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಆಶ್ರಯದಲ್ಲಿ ನಾಟಕೋತ್ಸವ – 2019 ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಎಂಟನೇಯ ಮಕ್ಕಳ ನಾಟಕೋತ್ಸವದ ಉದ್ಫಾಟಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಗೌರವಾಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಶ್ರೀ ಮೂರ್ತಿ ದೇರಾಜೆ ಮಾತನಾಡಿ 40 ವರ್ಷಗಳ ಕಾಲ ರಂಗಭೂಮಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅನುಭವಗಳನ್ನು ವಿವರಿಸಿದರು. ವೇದಿಕೆಯಲ್ಲಿ ಮಕ್ಕಳ ಸಾಹಿತ್ಯ ಸಂಗಮದ ಸ್ಥಾಪಕ ಕಾರ್ಯದರ್ಶಿ ಬಿ. ಶ್ರೀನಿವಾಸ್ರಾವ್ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅಚ್ಯುತ ನಾಯಕ್, ಮುಖ್ಯಗುರು ಆಶಾ ಬೆಳ್ಳಾರೆ ಉಪಸ್ಥಿತರಿದ್ದರು.