ಪ್ರತಿಭಾಕಾರಂಜಿ – ಜಿಲ್ಲಾಮಟ್ಟದಲ್ಲಿ ಪರೀಕ್ಷಿತ್ ದ್ವಿತೀಯ

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಸುರತ್ಕಲಿನ ವಿದ್ಯಾಭೋದಿನಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯ ಹಿರಿಯರ ವಿಭಾಗದ ಯಕ್ಷಗಾನ ವೈಯಕ್ತಿಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪರೀಕ್ಷಿತ್ (7ನೇ ತರಗತಿ) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಶ್ರೀ ಪದ್ಮನಾಭ ಮತ್ತು ವನಿತಾರವರ ಪುತ್ರನಾಗಿದ್ದು ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಅವರ ಶಿಷ್ಯನಾಗಿದ್ದು ಶ್ರೀಚಂದ್ರಶೇಖರ ಸುಳ್ಯಪದವುರವರ ಸಂಯೋಜನೆಯಲ್ಲಿ ನಾಟ್ಯಾಭ್ಯಾಸ ಮಾಡುತ್ತಿದ್ದಾರೆ.

Pareekshith-

Highslide for Wordpress Plugin