ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 24-10-2018 ರಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ನಿವೃತ್ತ ಉಪನ್ಯಾಸಕರಾದ ಶ್ರೀಯುತ ರಾಧಾಕೃಷ್ಣ ಕಲ್ಚಾರು ಮಾತನಾಡಿ ವಾಲ್ಮೀಕಿ ಮಹರ್ಷಿಯ ಇತಿಹಾಸ ಮತ್ತು ರಾಮಾಯಣದ ಕಥೆಯನ್ನು ಸಂಕ್ಷಿಪ್ತವಾಗಿ ತಿಳಿಸಿಕೊಡುತ್ತಾ ಅವರ ಆದರ್ಶಗಳನ್ನು ತಾವೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಚ್ಯುತ್ ನಾಯಕ್ ಉಪಸ್ಥಿತರಿದ್ದರು.