ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ.) ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಪ್ರೌಢ ವಿಭಾಗದ ’ಜ್ಞಾನತುಂಗೆ’ ಪುಸ್ತಕಾಧಾರಿತ ಸ್ಪರ್ಧೆಯ ಭಾಷಣದಲ್ಲಿ ಪೃಥಾ ಆರ್. ರೈ (ಶ್ರೀ ರವೀಂದ್ರ ರೈ ಪಿ. ಮತ್ತು ಉಷಾ ರವೀಂದ್ರ ದಂಪತಿಗಳ ಪುತ್ರಿ)- ಪ್ರಥಮ, ಚಿತ್ರಕಲಾ ಸ್ಪರ್ಧೆಯಲ್ಲಿ ಗೌತಮ್ ಎಸ್. (ಗಣೇಶ್ ಪೂಜಾರಿ ಮತ್ತು ಮಮತಾ ದಂಪತಿಗಳ ಪುತ್ರ) – ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.