ಕೇಂದ್ರ ಕೈಗಾರಿಕೆ ಮತ್ತು ರಸಗೊಬ್ಬರ ಸಚಿವರಾಗಿದ್ದ ಶ್ರೀ ಎಚ್. ಎನ್. ಅನಂತ್ ಕುಮಾರ್ ಅವರಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಮೌನ ಪ್ರಾರ್ಥನೆ ಮಾಡುವ ಮೂಲಕ ಸಂತಾಪ ಸೂಚಿಸಲಾಯಿತು. ಶಾಲಾ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಹೇರಳೆ ಮೃತರಿಗೆ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಚ್ಯುತ್ ನಾಯಕ್, ಮುಖ್ಯಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.