ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 71 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹಣ ಗೈದು ಮಾತನಾಡಿದ ಶ್ರೀ ರಮಾನಂದ ನಾಯಕ್ರವರು, ನಾವು ಇಂದು ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವಂಥ ದಿನ. ಆದ್ದರಿಂದ ಭವಿಷ್ಯತ್ತಿನ ಮಕ್ಕಳಾದ ನೀವು ನಮ್ಮ ದೇಶವನ್ನು ರಕ್ಷಿಸಲು ಪಣತೊಡಬೇಕು ಎಂದು ಕರೆಯಿತ್ತರು. ಶ್ರೀಮತಿ ವಿಜಯರಮಾನಂದರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಮಕ್ಕಳು ಚೀನಾ ವಸ್ತುಗಳನ್ನು ನಿರ್ಬಂಧಿಸುವ ಪ್ರತಿಜ್ಞೆ ಮಾಡಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸರ್ವಸದಸ್ಯರು, ಶಿಕ್ಷಕ – ರಕ್ಷಕ ಸಂಘದ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಧನ್ಯವಾದವನ್ನು ಮುಖ್ಯಗುರು ಶ್ರೀಮತಿ ಆಶಾ ಬೆಳ್ಳಾರೆಯವರು ನೆರವೇರಿಸಿದರು. ಶಿಕ್ಷಕ ಚಂದ್ರಶೇಖರ್ ಸುಳ್ಯಪದವು ಕಾರ್ಯಕ್ರಮ ನಿರೂಪಿಸಿದರು.