ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ ನವದೆಹಲಿ, ಭಾರತ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯ ಬೆಂಗಳೂರು ಇದರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಿಲ್ಲಾ ಯೋಗ ಸ್ವಾಸ್ಥ್ಯ ಕೇಂದ್ರ, ಶ್ರೀ ವೇದವ್ಯಾಸ ಯೋಗ ಫೌಂಡೇಶನ್ ಮೈಸೂರು, ಉಡುಪಿ ಜಿಲ್ಲಾ ಯೋಗ ವೆಲ್ನೆಸ್ ಸೆಂಟರ್ ವತಿಯಿಂದ ನಡೆದ ಯೋಗ ಭೂಷಣ ಪ್ರಬೋಧ ಪರೀಕ್ಷೆಯಲ್ಲಿ ಶ್ರೀಮತಿ ಹರಿಣಾಕ್ಷಿ ಅವರು ಭೂಷಣ ಪ್ರಬೋಧ ಪತ್ರ ಹಾಗೂ ಬೆಳ್ಳಿ ಪದಕ ಗಳಿಸಿದ್ದಾರೆ. ಇವರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ.