ತಾಲೂಕು ಆರೋಗ್ಯಾಧಿಕಾರಿಯವರ ಕಛೇರಿ ಪುತ್ತೂರು ತಾಲೂಕು ಇವರ ಆಶ್ರಯದಲ್ಲಿ 2015-16 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ARSH ಅಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಹದಿಹರೆಯದಲ್ಲಿ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದಲಾವಣೆ ಸಂತಾನೋತ್ಪತ್ತಿ, ಲೈಂಗಿಕ ಆರೋಗ್ಯದ ಬಗೆಗಿನ ಸತ್ಯ ಮತ್ತು ಮಿಥ್ಯ ಈ ವಿಷಯದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲಾ ಹತ್ತನೆಯ ತರಗತಿಯ ವಿದ್ಯಾರ್ಥಿನಿ ಅಶ್ವಿನಿ. ಯು. ನಾಯಕ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಸಂಪ್ಯ ನಿವಾಸಿ ಉಪೇಂದ್ರ ನಾಯಕ್ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ನಳಿನಿ ವಾಗ್ಲೆಯವರ ಪುತ್ರಿಯಾಗಿರುತ್ತಾರೆ.