ವಿವೇಕಾನಂದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ 26-05-2016 ರಂದು ಮುಂಜಾನೆ ಗಣಹೋಮ ನಡೆಸಿ 2016-17 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಶಾಲೆಯ ಮಕ್ಕಳನ್ನು ಮಾತಾಜಿಯವರು ತಿಲಕವಿಟ್ಟು ಸಿಹಿ ನೀಡಿ ಸ್ವಾಗತಿಸಿದರು. ಎಲ್ಲಾ ಮಕ್ಕಳೂ ಭಾರತಾಂಬೆಯ ಚರಣಗಳಿಗೆ ನಮಸ್ಕರಿಸಿ ಪುಷ್ಪಾರ್ಚನೆಗೈದು ತಮ್ಮ ಮುಂದಿನ ವಿದ್ಯಾರ್ಜನೆಗೆ ಶುಭಾರಂಭಗೈದರು. ಶಾಲಾ ಆಡಳಿತ ಮಂಡಳಿ ಸಂಚಾಲಕರು, ಸದಸ್ಯರು, ಶಿಕ್ಷಕ – ರಕ್ಷಕ ಸಂಘದ ಪದಾಧಿಕಾರಿಗಳು, ಪೋಷಕರು – ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.




