ದಿನಾಂಕ 15-10-2016 ಹಾಗೂ 16-10-2016 ರಂದು ನಡೆದ ವಿದ್ಯಾಭಾರತಿಯ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯು ಬೆಂಗಳೂರಿನ ರಾಷ್ಟ್ರೊತ್ಥಾನ ವಿದ್ಯಾಕೇಂದ್ರದಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ -ನವಮಿ ಡಿ. (ದಾಮೋದರ್ ಆಚಾರ್ಯ ಮತ್ತು ಹರಿಣಿ ದಂಪತಿಗಳ ಪುತ್ರಿ), ವೈಶಾಲಿ (ಕೃಷ್ಣಪ್ಪಗೌಡ ಮತ್ತು ಪಾರ್ವತಿ ದಂಪತಿಗಳ ಪುತ್ರಿ), ಭರತ್ (ಪುಷ್ಪರಾಜ್ ಮತ್ತು ವಾರಿಜ ದಂಪತಿಗಳ ಪುತ) ರಾಜೇಶ್ (ಬಾಬು ಗೌಡ ಮತ್ತು ರೇವತಿ ದಂಪತಿಗಳ ಪುತ್ರ) ದ್ವಿತೀಯ ಸ್ಥಾನ ಪಡೆದಿದ್ದಾರೆ.
