ಕನ್ನಡ ಪತ್ರಿಕೋದ್ಯಮದಲ್ಲಿ ಹಲವು ದಾಖಲೆಗಳನ್ನು ಮಾಡಿರುವ ವಿಜಯ ಕರ್ನಾಟಕ ಪತ್ರಿಕೆಯು ನಡೆಸಿದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಏರ್ಪಡಿಸಿದ್ದ ದಕ್ಷಿಣಕನ್ನಡ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್, ಮುಖೇಶ್ ಕೃಷ್ಣ, ಅನಘಾ ಭಟ್, ಪೂಜಾ ಬಿ.ಎ ಮತ್ತು ಅಮಿತಾ ಎಸ್.ಎನ್. ಆಯ್ಕೆಯಾಗಿದ್ದು ಇವರಲ್ಲಿ 9 ನೇ ತರಗತಿ ವಿದ್ಯಾರ್ಥಿ ಗೌತಮ್ ಎಸ್. ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರು ನೆಹರು ನಗರ ಶೇವಿರೆ ನಿವಾಸಿ ಗಣೇಶ್ ಪೂಜಾರಿ ಮತ್ತು ಮಮತಾ ದಂಪತಿಗಳ ಪುತ್ರ.
