ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್ ಜೋಸೆಪ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆ ಸುಳ್ಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಚೆಸ್ ಪಂದ್ಯಾಟದ ಪ್ರಾಥಮಿಕ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಹಿತಾ ಶರ್ಮ ಬಿ.ಎಸ್ ಪ್ರಥಮ ಸ್ಥಾನ ಪಡೆದು ಮದುಗಿರಿಯಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ರಾಜೇಶ್ ಶರ್ಮ ಮತ್ತಿ ಸೀಮಾ ಶರ್ಮ ದಂಪತಿಗಳ ಪುತ್ರಿ.