ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ವಿವೇಕಾನಂದ ಜಯಂತಿ’ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪುಟಾಣಿ ಮಕ್ಕಳು ವಿವೇಕಾನಂದ ಉಡುಗೆ ಧರಿಸಿ ವಿವೇಕವಾಣಿ ಹೇಳಿದರು. ನಂತರ ಹಿರಿಯ ಶಿಕ್ಷಕಿ ಪೂರ್ಣಿಮಾ ಮಾತಾಜಿಯವರು ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನವನ್ನು ಸಾರ್ಥಕತೆಗೊಳಿಸಿಕೊಳ್ಳಬೇಕು ಎಂದು ಮಕ್ಕಳಿಗೆ ಹೇಳಿದರು. ಅನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.