ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು ಇಲ್ಲಿ ದಿನಾಂಕ 18-03-2013 ರಂದು ಎಸ್.ಎಸ್.ಯಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀಮತಿ ಶಶಿಕಲಾ ಅಮ್ಮನವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು ನಂತರ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದ ಅನಿಸಿಕೆಯನ್ನು ಹೇಳಿದರು. ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ರವೀಂದ್ರ.ಪಿ. ರವರು ಮಾತನಾಡಿ “ವಿದ್ಯಾರ್ಥಿ ಜೀವನ ನಿಂತನೀರಲ್ಲಿ ಅದು ಸದಾ ಪ್ರವಾಹಿಸುತ್ತಿರುವ ನೀರು” ಎಂದು ತಿಳಿಸಿ ಶುಭಹಾರೈಕೆಯನ್ನು ಹೇಳಿದರು, ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಪೂರ್ಣಿಮ ಹಾಗೂ ಮುಖ್ಯಗುರುಗಳಾದ ಶ್ರೀಮತಿ ಆಶಾಬೆಳ್ಳಾರೆ ರವರು ಸಾಂಧರ್ಬಿಕವಾಗಿ ಮಾತನಾಡಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಶ್ಯಾಮಪ್ರಸಾದ ಶಾಸ್ತ್ರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಗಳಾದ ಕು|ಸ್ವಾತಿ ಮತ್ತು ಈಶ್ವರ ಸಂದೇಶರವರು ನೆರವೇರಿಸಿದರು.