ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಂದ ನಡೆಸಲ್ಪಡುವ ಮನೆಂಯಂಗಳದಲ್ಲಿ ಭಜನಾ ಕಾರ್ಯಕ್ರದ ಅಂಗವಾಗಿ ತೆಂಕಿಲದ ಕಟ್ಟತ್ತಾರು ಶ್ರೀ ನಾಗರಾಜ.ಟಿ ಎಂಬವರ ಮನೆಯಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ಡಾ. ಶೋಭಿತಾ ಸತೀಶ್ ಇವರ ಶ್ರೀ ಶಾರದಾ ಸ್ತುತಿಯೊಂದಿಗೆ ಆರಂಭಗೊಂಡ ಮಕ್ಕಳ ಭಜನೆಯಲ್ಲಿ ಶಾಲಾ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು.