ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಗಳ ಕ್ಯಾಂಪಸ್‍ಗೆ ಆಗಮಿಸಿದ ಆದಿಯೋಗಿ ರಥದ ಶಿವಯಾತ್ರೆ

                                                                     

ಈಶ ಯೋಗ ಕೇಂದ್ರವು ಮಹಾಶಿವರಾತ್ರಿ ಶಿವಾಂಗ ಸಾಧನದ ಭಾಗವಾಗಿ ಉಡುಪಿಯಿಂದ ಕೊಯಂಬತ್ತೂರಿನ ಈಶ ಯೋಗ ಕೇಂದ್ರಕ್ಕೆ ಆದಿಯೋಗಿ ರಥದ 70ದಿನಗಳ ಶಿವಯಾತೆಯನ್ನು ಹಮ್ಮಿಕೊಂಡಿದೆ. ಈ ಯಾತ್ರೆಯು ಶಾಲೆಯ ಆವರಣಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಂತ್ರಪಠಣ, ಭಜನೆ, ಡೋಲುವಾದನ, ಶಂಖನಾದದೊಂದಿಗೆ ರಥವನ್ನು ಸ್ವಾಗತಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಮುಖ್ಯಗುರುಗಳು, ಶಿಕ್ಷಕರು, ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳೆಲ್ಲರೂ ಆದಿಯೋಗಿ ರಥಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಆರತಿ ಬೆಳಗಿ ಭಕ್ತಿಯಿಂದ ನಮಿಸಿದರು.

Highslide for Wordpress Plugin