ದಿನಾಂಕ 4-12-2014 ನೇ ಗುರುವಾರ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 95+ ಮಿಷನ್ ಇದರ ಪ್ರಾಯೋಜಕತ್ವದಲ್ಲಿ ಮುದ್ರಿತಗೊಂಡ ‘ದಾರಿದೀಪ, ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಸುವರ್ಣ, ಪೋಷಕರಾದ ರವಿನಾರಾಯಣ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನೀಶ್ ಬಡೆಕ್ಕಿಲ ಹಾಗೂ ಮುಖ್ಯೋಪಾಧ್ಯಾಯರಾದ ಆಶಾ ಬೆಳ್ಳಾರೆ ಉಪಸ್ಥಿತರಿದ್ದರು. ಶ್ರೀಮತಿ ರೇವತಿ ಮಾತಾಜಿ ಇವರು ಪ್ರಸ್ತಾವನೆಗೈದು ದಾರಿದೇಪ ಎಂಬ ವಿದ್ಯಾರ್ಥಿ ಸ್ನೇಹಿ ಕಲಿಕಾ ಮಾರ್ಗದರ್ಶಿ ಕೈಪಿಡಿಯು 2015 ನೇ ಎಪ್ರಿಲ್ ತಿಂಗಳಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಲು ದಾರಿದೀಪವಾಗಬಲ್ಲದು ಎಂದರು.