ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿನ ಶಾಲಾ ಸ್ಥಾಪಕಾಧ್ಯಕ್ಷರಾದ ಶಿವರಾಮ ಭಟ್ ಕರಿಯಾಲ ಇವರು ಶಾಲಾ ಗ್ರಂಥಾಲಯಕ್ಕೆ ಸುಮಾರು 5,000 ರೂ. ಗಳ ಪುಸ್ತಕಗಳ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಅಚ್ಯುತ ನಾಯಕ್, ಶಾಲಾ ಮುಖ್ಯಗುರುಗಳು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

