ಮಕ್ಕಳಲ್ಲಿ ಬೆಳಗಲು ಜ್ಞಾನದೀವಿಗೆ, ಹಿರಿಯರೇ ನೀಡಿರಿ ನಿಮ್ಮಯ ಕೊಡುಗೆ ಎಂಬ ಧ್ಯೇಯ ವಾಕ್ಯದೊಂದಿಗೆ 16-02-2015 ರಿಂದ 22-02-2015 ರವರೆಗೆ ನಡೆಯಲಿರುವ ಪುಸ್ತಕ ಸಪ್ತಾಹ ಕಾರ್ಯಕ್ರಮಕ್ಕೆ ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರು ದೀಪಬೆಳಗಿಸಿ ಪುಷ್ಪಾರ್ಚನೆಯೊಂದಿಗೆ ಚಾಲನೆ ನೀಡಿದರು.


ಶಾಲಾ ಅಧ್ಯಕ್ಷರಾದ ಡಾ| ಕೃಷ್ಣ ಭಟ್, ಸಂಚಾಲಕರಾದ ರವೀಂದ್ರ ಪಿ., ಶಿಕ್ಷ – ಶಿಕ್ಷಣ ಸಂಪನ್ಮೂಲ ಘಟಕದ ಸದಸ್ಯರಾದ ಶ್ರೀಮತಿ ವಂದನಾ, ಶ್ರೀಮತಿ ಉಷಾಕಿರಣ, ಉಪನ್ಯಾಸಕರಾದ ಶ್ರೀ ರೋಹಿಣಾಕ್ಷ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನೀಶ್ ಬಡೆಕ್ಕಿಲ, ಪೋಷಕ ಸಮಿತಿಯ ಅಧ್ಯಕ್ಷರಾದ ವಸಂತ ಸುವರ್ಣ, ಉಪಾಧ್ಯಕ್ಷರಾದ ಶ್ರೀಮತಿ ಅಂಬಿಕಾ ಇವರು ಉಪಸ್ಥಿತರಿದ್ದು ಶಾಲಾ ಪುಸ್ತಕ ಮಳಿಗೆಯಿಂದ ಪುಸ್ತಕಗಳನ್ನು ಖರೀದಿಸಿ ಶಾಲೆಗೆ ನೀಡಿರುತ್ತಾರೆ.

