ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ 2015-16 ನೇ ಸಾಲಿನ ಶಾಲಾ ಚುನಾವಣೆಯು ಮುಖ್ಯ ಗುರುಗಳ ಸಮ್ಮುಖದಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದ ನಾಯಕಿಯಾಗಿ ಕು. ಅಂಕಿತಾ ಮತ್ತು ಉಪನಾಯಕನಾಗಿ ಪ್ರಜ್ವಲ್ ಆಯ್ಕೆಯಾದರು.


ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಚೇತಕ್ ಟಿ.ಕೆ. ಮತ್ತು ಉಪನಾಯಕಿಯಾಗಿ ಕು. ಶೈಲಶ್ರೀ ಆಯ್ಕೆಯಾದರು. ಚುನಾವಣೆಯ ಉಸ್ತುವಾರಿಯನ್ನು ಶಿಕ್ಷಕರಾದ ಶ್ರೀಯುತ ವಿಶ್ವನಾಥ ಮುಡೂರು ವಹಿಸಿದರು ಎಲ್ಲಾ ಶಿಕ್ಷಕರು ಸಹಕರಿಸಿದರು.