ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಯಕ್ಷ ಚಿಣ್ಣರ ಬಳಗದಿಂದ ನಡೆಯುತ್ತಿರುವ ಯಕ್ಷಗಾನ ಕಾರ್ಯಾಗಾರದಲ್ಲಿ ಕಲಾವಿದ ಶ್ರೀ ಮಾಧವ ನೆಟ್ಟಣಿಗೆಯವರು ಭಾಗವಹಿಸಿ ವೇಷಭೂಷಣವನ್ನು ತೊಡುವ ಕ್ರಮ ಮತ್ತು ಯಕ್ಷಗಾನ ಬೆಳೆದು ಬಂದ ದಾರಿಯ ಬಗ್ಗೆ ಶಿಬಿರಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಯಕ್ಷ ಶಿಬಿರದ ನಿರ್ದೇಶಕರಾದ ಶ್ರೀ ಚಂದ್ರಶೇಖರ್ ಸುಳ್ಯಪದವು ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ದರು.

