ಶಾಲಾ ಪ್ರವೇಶೋತ್ಸವ ಕಾರ್ಯಕ್ರಮ

ದಿನಾಂಕ ೦೬-೦೬-೨೦೧೨ ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಇಲ್ಲಿ  ೨೦೧೨ – ೧೩ನೇ ಸಾಲಿನಲ್ಲಿ ಹೊಸದಾಗಿ ಸೇರಿರುವ ವಿದ್ಯಾರ್ಥಿಗಳ ಶಾಲಾಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉದ್ಫಾಟಕರಾಗಿ ಕ್ಷೇತ್ರಸಂಪನ್ಮೂಲಕೇಂದ್ರದ ಸಮನ್ವಯಾಧಿಕಾರಿಯಾದ ಶ್ರೀ ನಂದೀಶರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ವೇದವ್ಯಾಸರವರು ಶಾಲೆ ಮತ್ತು ವಿದ್ಯಾರ್ಥಿಗಳ ಶ್ರೇಯಸ್ಸಿಗೊಸ್ಕರ ಶಿಕ್ಷಕರೊಂದಿಗೆ ಪೋಷಕರ ಪಾತ್ರ ಹಿರಿದಾದುದು ಎಂಬುದಾಗಿ ಹೇಳಿ ಶುಭ ಹಾರೈಕೆಯನ್ನು ಮಾಡಿದರು.

ಸಭಾಧ್ಯಕ್ಷರಾಗಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ.ಬಂಗಾರಡ್ಕ ವಿಶ್ವೇಶ್ವರ ಭಟ್ ಉಪಸ್ಥಿತರಿದ್ದು ಸಂದರ್ಬೋಚಿತವಾಗಿ ಮಾತನಾಡಿದರು. ಪ್ರಾಸ್ತವಿಕವಾಗಿ ಹಿರಿಯ ಶಿಕ್ಷಕಿ ಕು| ಲೀಲಾವತಿ ಹಂದ್ರಟ್ಟರವರು ಮಾತನಾಡಿದರು. ಸ್ವಾಗತ ಪರಿಚಯವನ್ನು ಮುಖ್ಯಶಿಕ್ಷಕಿ ಶ್ರೀಮತಿ ಆಶಾಬೆಳ್ಳಾರೆ ಮಾಡಿದರು. ಧನ್ಯವಾದವನ್ನು ಕು| ಲಾವಣ್ಯ ಮಾತಾಜಿಯವರು ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ಶ್ರೀ ಚಂದ್ರಶೇಖರ್.ಬಿ ನೆರವೇರಿಸಿದರು.

Highslide for Wordpress Plugin