ವಿವಿಧ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಶಾರದಾ ವಿದ್ಯಾಲಯದಲ್ಲಿ ಶಾರದಾ ಮಹೋತ್ಸವದ ಅಂಗವಾಗಿ ಮಲ್ಟಿ ಡಿಸ್ಟಿಕ್ ಲೆವೆಲ್‌ನಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ರಾಮ ಪ್ರಸಾದ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿರುತ್ತಾನೆ. ಮತ್ತು ರೋಹಿಣಿ ಟೈಲರಿಂಗ್ ಮತ್ತು ಕ್ರಾಪ್ಟ್ ಸೆಂಟರ್ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರು ಇಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ.

1.-Ramprasadರಾಮ ಪ್ರಸಾದ್

 2.-AGAMYAಅಗಮ್ಯ  3.-Adithyanarayaಆದಿತ್ಯ ನಾರಾಯಣ ಪಿ.ಎಸ್.

ಈತ ರಾಧಾಕೃಷ್ಣ ಮಂದಿರದ ಬಳಿಯ ನಿವಾಸಿ ಕೆ.ಮಲ್ಲೇಶ್ ಕುಮಾರ್ ಮತ್ತು ಅನುರಾಧ ಕೆ ದಂಪತಿಗಳ ಪುತ್ರ. ಮತ್ತು ರೋಹಿಣಿ ಟೈಲರಿಂಗ್ ಮತ್ತು ಕ್ರಾಪ್ಟ್ ಸೆಂಟರ್ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರು ಇದರ ಪ್ರಾಯೋಜಕತ್ವದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿನಿ ಅಗಮ್ಯ (1 ರಿಂದ 6ನೇ ತರಗತಿ ವಿದ್ಯಾರ್ಥಿಗಳ ವಿಭಾಗದ ಸ್ಪರ್ಧೆಯಲ್ಲಿ) ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಈಕೆ ಬನ್ನೂರು ಗಣೇಶ್ ಆಚಾರ್ಯ ಮತ್ತು ಮಂಜುಳ ಗಣೇಶ್ ದಂಪತಿಗಳ ಪುತ್ರಿ. ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇವರು 70 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆದ ಚಿತ್ರಸ್ಪರ್ಧೆಯಲ್ಲಿ ’ನಮ್ಮ ಹಳ್ಳಿ’ ಚಿತ್ರ ಸ್ಪರ್ಧೆಯಲ್ಲಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಆದಿತ್ಯ ನಾರಾಯಣ ಪಿ.ಎಸ್ ಪ್ರಥಮ ಸ್ಥಾನ ಪಡೆದಿರುತ್ತಾನೆ. ಈತ ಪಡೀಲ್ ನಿವಾಸಿ ಶಂಕರ್ ಭಟ್ ಮತ್ತು ದೇವಕಿ ದಂಪತಿಗಳ ಪುತ್ರ.

Highslide for Wordpress Plugin