ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್ನಲ್ಲಿ ವಿವೇಕ ಉದ್ಯೋಗ ಮೇಳ 2017ನ್ನು ಆಯೋಜಿಸಿದೆ. ಇದರಲ್ಲಿ 100 ಕ್ಕೂ ಹೆಚ್ಚು ಪ್ರತಿಷ್ಠಿತ ಉದ್ಯೋಗ ಸಂಸ್ಥೆಗಳು ಭಾಗವಹಿಸಲಿವೆ. ಉದ್ಯೋಗಾಕಾಂಕ್ಷಿಗಳ ನೋಂದಣಿ ಕಛೇರಿಯು ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 3-12-2017 ನೇ ಶನಿವಾರದಂದು ಅಪರಾಹ್ನ 2.30ಕ್ಕೆ ಉದ್ಫಾಟನೆಗೊಳ್ಳಲಿದೆ. ಉದ್ಯೋಗಾಕಾಂಕ್ಷಿಗಳು ತಮ್ಮ ಸೂಕ್ತ ದಾಖಲೆ ಪತ್ರಗಳೊಂದಿಗೆ ಶನಿವಾರ ಅಪರಾಹ್ನ 2.30 ಕ್ಕೆ ಶಾಲಾ ಆವರಣದಲ್ಲಿ ಉಪಸ್ಥಿತರಿರಬೇಕಾಗಿ ವಿನಂತಿ.
