ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಸಹಯೋಗದೊಂದಿಗೆ ಏರ್ಪಡಿಸಲಾದ ಉಪಗ್ರಹ ಆಧಾರಿತ ತರಬೇತಿ ’ದೌರ್ಜನ್ಯ ಮುಕ್ತಿ’ ಕಾರ್ಯವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ವೀಕ್ಷಿಸಿ, ಕಾರ್ಯಕ್ರಮದಲ್ಲಿ ಹದಿಹರೆಯ ಮತ್ತು ಯುವ ಸಮುದಾಯದ ಅದರಲ್ಲೂ ಮುಖ್ಯವಾಗಿ ಹೆಣ್ಣುಮಕ್ಕಳಲ್ಲಿ ದೌರ್ಜನ್ಯದ ಕುರಿತು ತಿಳುವಳಿಕೆ ಹಾಗೂ ದೌರ್ಜನ್ಯದಿಂದ ಮುಕ್ತರಾಗುವ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶವನ್ನು ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಗುರುಗಳು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.



