ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 10 ನೇ ತರಗತಿಯ ಮಕ್ಕಳಿಗೆ ಆಯೋಜಿಸಲಾಗಿದ್ದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರ ಸಭಾ ಅಧ್ಯಕ್ಷರಾದ ಶ್ರೀಯುತ ಜೀವಂದರ್ ಜೈನ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ, ಲಸಿಕಾ ಅಭಿಯಾನದ ಮಹತ್ವ ತಿಳಿಸಿದರು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿರಾದ ಶ್ರೀಮತಿ ನಿಶಾ ಹಾಗೂ ಶ್ರೀಮತಿ ಮೀನಾಕ್ಷಿ, ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

