ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ’ಸುರಭಿ’ ಹಿಂದಿ ಭಾಷಾ ಸಂಘದಿಂದ ಆಯೋಜಿಸಲ್ಪಟ್ಟ ರಾಷ್ಟ್ರಭಾಷಾ ಪರೀಕ್ಷಾ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಆಗಮಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ಪ್ರಫುಲ್ಲಾ ಇವರು ಹಿಂದಿ ಪ್ರಚಾರ ಸಭಾ ವತಿಯಿಂದ ನಡೆಸಲ್ಪಡುವ ವಿವಿಧ ಪದವಿ ಕೋರ್ಸುಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುತ್ತಾ ಪರೀಕ್ಷಾ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು. ಹಿಂದಿ ಭಾಷಾ ಸಂಘದ ಸಂಯೋಜಕಿ ಶ್ರೀಮತಿ ದಾಕ್ಷಾಯಿಣಿಯವರು ಕಾರ್ಯಕ್ರಮ ಸಂಘಟಿಸಿದರು.

