ದಿನಾಂಕ 13-08-2022ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಹರ್ ಘರ್ ತಿರಂಗಾ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲಾ ಹಿರಿಯ ವಿದ್ಯಾರ್ಥಿ, ವೃತ್ತಿಯಲ್ಲಿ ವಕೀಲರು ಆದ ವಿರೂಪಾಕ್ಷ ಇವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಗುರುಗಳಾದ ಆಶಾ ಬೆಳ್ಳಾರೆ ಇವರು ಧ್ವಜಕ್ಕೆ ಕೊಡುವ ಗೌರವ ಅದರ ನೀತಿ ಸಂಹಿತೆ ಬಗ್ಗೆ ತಿಳಿಸಿದರು.
ವಿದ್ಯಾರ್ಥಿಗಳ ವಂದೇ ಮಾತರಂನೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.