“ಓಣಂ ಹಬ್ಬ ಸಮೃದ್ಧಿಯ ಸಂಕೇತ” – ವೀಣಾ ಸರಸ್ವತಿ. ಸಹ ಶಿಕ್ಷಕಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು.
ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬದ ಆಚರಣೆಯ ಅಂಗವಾಗಿ ಏರ್ಪಡಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹ ಶಿಕ್ಷಕಿ ವೀಣಾ ಸರಸ್ವತಿ ಇವರು ಬಲಿಚಕ್ರವರ್ತಿಯ ಕಥೆಯೊಂದಿಗೆ ಓಣಂ ಹಬ್ಬದ ಮಹತ್ವ ತಿಳಿಸಿದರು. ವೇದಿಕೆಯಲ್ಲಿ ಕಾಲೇಜು ಪ್ರಾಂಶುಪಾಲರಾದ ಶ್ರೀ ಪ್ರಸಾದ್ ಶ್ಯಾನ್ ಬಾಗ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.