ಯೋಗಾಸನ ಸ್ಪರ್ಧೆ ರಾಜ್ಯಮಟ್ಟಕ್ಕೆ ಆಯ್ಕೆ

ಯೋಗಾಸನ ಸ್ಪರ್ಧೆ  ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸರಸ್ವತಿ ವಿದ್ಯಾಲಯ ಕಡಬ ಇವರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ.
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಥಮ ಬಹುಮಾನ, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಥಮ ಸ್ಥಾನ ಕವಿತಾ (ರಿದಮಿಕ್) ದ್ವಿತೀಯ ಸ್ಥಾನ, ಮುಕುಂದ(ರಿದಮಿಕ್) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನೂ ರಾಜ್ಯಮಟ್ಟಕ್ಕೆ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ರಿತೇಶ್ ನಾಯಕ್ ದುರ್ಗಾಪ್ರಸಾದ್, ಸ್ಕಂದ ಬಳ್ಳಕ್ಕುರಾಯ, ಕೀರ್ತನ್ ಕುಲಾಲ್ (ರಿದಮಿಕ್), ಪ್ರೌಢ ಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಜ್ಞಾ ನಿಡ್ವಣ್ಣಾಯ, ಸಾಧನಾ ಆಯ್ಕೆಯಾಗಿದ್ದಾರೆ.

Highslide for Wordpress Plugin