ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಕಲಬುರಗಿ ಜಿಲ್ಲೆಯ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ಇಲ್ಲಿ ನಡೆದ ರಾಜ್ಯಮಟ್ಟದ ಗಣಿತ -ವಿಜ್ಞಾನ ಮೇಳದ ಮೂರ್ತಿಕಲಾ ರಚನಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ಕಿಶಾನ್(ಹರೀಶ್ ಗೌಡ ಮತ್ತು ಸವಿತಾ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು

ರಾಷ್ಟಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ ತರಬೇತಿ ನೀಡಿರುತ್ತಾರೆ.

Highslide for Wordpress Plugin