ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ – ಎಸ್.ಜಿ.ಎಫ್.ಐ ಗೆ ಆಯ್ಕೆ

ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ – ಎಸ್.ಜಿ.ಎಫ್.ಐ ಗೆ ಆಯ್ಕೆ

ಉತ್ತರ ಪ್ರದೇಶದ ಫತೆಪೂರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಶಾಲಾ ವಿದ್ಯಾರ್ಥಿನಿಯರಾದ ಪಿ ಕವನಶ್ರೀ (ಶ್ರೀ ಗೋಪಾಲಕೃಷ್ಣ ಮತ್ತು ಶೈಲಜಾ ದಂಪತಿಗಳ ಪುತ್ರಿ), ಪೂಜಾ (ಶ್ರೀ ಸುರೇಶ್ ಮತ್ತು ವನಿತಾ ದಂಪತಿಗಳ ಪುತ್ರಿ), ಮಾನಸ ಎಂ(ಶ್ರೀ ಜಯೇಶ್ ಮತ್ತು ಸುಮಿತ್ರ ದಂಪತಿಗಳ ಪುತ್ರಿ), ಸುಶಾ ಎಂ (ಶ್ರೀ ಕೃಷ್ಣಪ್ಪ ಎಂ ಮತ್ತು ಗೀತಾ ದಂಪತಿಗಳ ಪುತ್ರಿ), ಯಲ್ಲವ್ವ (ಶ್ರೀ ಹನುಮಂತ ಮತ್ತು ಲಕ್ಷ್ಮೀದಂಪತಿಗಳ ಪುತ್ರಿ), ಅಂಕಿತಾ (ಶ್ರೀ ರೇಗಪ್ಪ ಮತ್ತು ರೇಶ್ಮಾ ದಂಪತಿಗಳ ಪುತ್ರಿ) ಭಾಗವಹಿಸಿದ್ದರು.

ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ಶ್ರೀ ದಾಮೋದರ್ ಮತ್ತು ಶ್ರೀಮತಿ ಹರಿಣಾಕ್ಷಿ ಹಾಗೂ ಮನೋಹರ್ ತರಬೇತಿ ನೀಡಿದ್ದರು.

Highslide for Wordpress Plugin