ಜಿಲ್ಲಾಮಟ್ಟದ ಕ್ರೀಡಾಕೂಟ – ರುತಿಕ್ –ಪ್ರಥಮ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ 14ರ ವಯೋಮಾನದ ಬಾಲಕ – ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರುತಿಕ್(ಚಂದ್ರಶೇಖರ ಕರ್ಕೇರ ಮತ್ತು ಸುಮಿತ್ರ ದಂಪತಿಗಳ ಪುತ್ರ) ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಶ್ರದ್ಧಾ ಶೆಟ್ಟಿ ತರಬೇತಿ ನೀಡಿರುತ್ತಾರೆ.

Highslide for Wordpress Plugin