ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನ

                           “ಆಸಕ್ತಿ, ಕುತೂಹಲಗಳೇ ವಿಜ್ಞಾನದ ಹೊಸ ಆವಿಷ್ಕಾರಗಳಿಗೆ ಮೂಲ”- ಶ್ರೀಮತಿ ರಾಜಲಕ್ಷ್ಮೀ

“ಶಾಲಾ ಮಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ ವಿಜ್ಞಾನಕ್ಕೆ ಸಂಬಂಧಿಸಿದಂತೆ ನಾಟಕಗಳು, ಮಾದರಿ ತಯಾರಿ, ಸೆಮಿನಾರ್ ಇತ್ಯಾದಿಗಳಲ್ಲಿ ಸ್ಪರ್ಧೆಗಳು ಅಥವಾ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಅವರಿಗೆ ಹೊಸ ಸಂಶೋಧನೆಗಳನ್ನು ನಡೆಸಲು ಪ್ರೇರಣೆ, ಸ್ಪೂರ್ತಿ ದೊರೆಯುತ್ತದೆ. ವಿದ್ಯಾರ್ಥಿಗಳಲ್ಲಿ ಆಸಕ್ತಿಯಿದ್ದು ಹೊಸ ವಿಷಯಗಳನ್ನು ತಿಳಿಯುವ ಕುತೂಹಲವಿದ್ದಾಗ ವಿಜ್ಞಾನದ ಬೆಳವಣಿಗೆಯಾಗಿ ನೂತನ ಆವಿಷ್ಕಾರಗಳಿಗೆ ಕಾರಣವಾಗುತ್ತದೆ” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಅಭಿವೃದ್ಧಿ) ಶ್ರೀಮತಿ ರಾಜಲಕ್ಷ್ಮೀಯವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಸಾರ್ವಜನಿಕ ಶಿಕ್ಷಣ

ಇಲಾಖೆಯ ವತಿಯಿಂದ ನಡೆದ ಜಿಲ್ಲಾಮಟ್ಟದ ವಿಜ್ಞಾನ ಮಾದರಿ ತಯಾರಿ ಹಾಗೂ ಪ್ರದರ್ಶನದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

                                         

 

ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನದ ನೋಡಲ್ ಅಧಿಕಾರಿಗಳು ಹಾಗೂ ಉಪನ್ಯಾಸಕರೂ ಆಗಿರುವ ಶ್ರೀ ಶ್ರೀನಿವಾಸ ಅಡಿಗರವರು ಸ್ಪರ್ಧಾರ್ಥಿಗಳಾಗಿ ಆಗಮಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸ್ಪರ್ಧಾ ನಿಯಮಗಳನ್ನ್ ತಿಳಿಸುತ್ತಾ ಶುಭ ಹಾರೈಸಿದರು.
ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರಘುನಾಥ ಬಿ ಯವರು “ಪ್ರತಿ ವಿದ್ಯಾರ್ಥಿಯಲ್ಲಿಯೂ ‘ಅಬ್ದುಲ್ ಕಲಾಂ’ರಂತಹ ವಿಜ್ಞಾನಿಗಳಾಗುವ ಸಾಮಥ್ರ್ಯ ಅಡಗಿದೆ. ಅದನ್ನು ಬೆಳಕಿಗೆ ತರಲು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು, ಸಂಬಂಧಿಸಿದ ಸ್ಪರ್ಧೆಗಳಲ್ಲಿ ಹುರುಪಿನಿಂದ ಭಾಗವಹಿಸುವುದು ಅತ್ಯಗತ್ಯ” ಎಂದು ಹೇಳಿದರು.
ವೇದಿಕೆಯಲ್ಲಿ ಕಾರ್ಯಕ್ರಮ ಸಂಯೋಜಕಿ ಶ್ರೀಮತಿ ಅಮೃತಕಲಾ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ನವೀನ್ ವೇಗಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಅಬ್ರಾಹಾಂ ಜಾನ್ಸನ್ ಹಾಗೂ ಶಾಲಾ ಪ್ರೌಢವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಆಶಾಬೆಳ್ಳಾರೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಮಂಗಳದುರ್ಗಾ ಪ್ರಾರ್ಥಿಸಿ, ಸಹಶಿಕ್ಷಕರಾದ ಶ್ರೀಮತಿ ಪೂರ್ಣಿಮಾ ಸ್ವಾಗತಿಸಿ, ಶ್ರೀಮತಿ ಶ್ವೇತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಅಮೃತಕಲಾ ಧನ್ಯವಾದ ಸಮರ್ಪಿಸಿದರು. 

Highslide for Wordpress Plugin