“ಆಸಕ್ತಿ, ಕುತೂಹಲಗಳೇ ವಿಜ್ಞಾನದ ಹೊಸ ಆವಿಷ್ಕಾರಗಳಿಗೆ ಮೂಲ”- ಶ್ರೀಮತಿ ರಾಜಲಕ್ಷ್ಮೀ
“ಶಾಲಾ ಮಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ ವಿಜ್ಞಾನಕ್ಕೆ ಸಂಬಂಧಿಸಿದಂತೆ ನಾಟಕಗಳು, ಮಾದರಿ ತಯಾರಿ, ಸೆಮಿನಾರ್ ಇತ್ಯಾದಿಗಳಲ್ಲಿ ಸ್ಪರ್ಧೆಗಳು ಅಥವಾ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಅವರಿಗೆ ಹೊಸ ಸಂಶೋಧನೆಗಳನ್ನು ನಡೆಸಲು ಪ್ರೇರಣೆ, ಸ್ಪೂರ್ತಿ ದೊರೆಯುತ್ತದೆ. ವಿದ್ಯಾರ್ಥಿಗಳಲ್ಲಿ ಆಸಕ್ತಿಯಿದ್ದು ಹೊಸ ವಿಷಯಗಳನ್ನು ತಿಳಿಯುವ ಕುತೂಹಲವಿದ್ದಾಗ ವಿಜ್ಞಾನದ ಬೆಳವಣಿಗೆಯಾಗಿ ನೂತನ ಆವಿಷ್ಕಾರಗಳಿಗೆ ಕಾರಣವಾಗುತ್ತದೆ” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಅಭಿವೃದ್ಧಿ) ಶ್ರೀಮತಿ ರಾಜಲಕ್ಷ್ಮೀಯವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಸಾರ್ವಜನಿಕ ಶಿಕ್ಷಣ
ಇಲಾಖೆಯ ವತಿಯಿಂದ ನಡೆದ ಜಿಲ್ಲಾಮಟ್ಟದ ವಿಜ್ಞಾನ ಮಾದರಿ ತಯಾರಿ ಹಾಗೂ ಪ್ರದರ್ಶನದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.