ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ನುಡಿ ನಮನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ನಿರ್ದೇಶನದಂತೆ ಶಾಲೆಯಲ್ಲಿ ಭಾರತ ಮಾತೆಯ ಮಡಿಲಿಗೆ ತನ್ನ ಪ್ರಾಣತ್ಯಾಗ ಮಾಡಿದ ವೀರಯೋಧ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ರಾಷ್ಟ್ರಪತಿ ಸ್ಕೌಟ್ ಎಂ.ವಿ ಪ್ರಾಂಜಲ್ ಇವರಿಗೆ ನುಡಿನಮನ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಸ್ಕೌಟ್ ಮಾಸ್ಟರ್ ರಾಜೇಶ್ ನಂದಿಲ ತಮ್ಮ ಮಾತುಗಳಿಂದ ನುಡಿ ನಮನ ಸಲ್ಲಿಸಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ನಳಿನಿ ವಾಗ್ಲೆ ಮತ್ತು ಇತರ ಶಿಕ್ಷಕರು ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಫಾರ್ಚನೆಗೈದರು.

                                                                                                                           

ಸಂಸ್ಥೆಯ ಕಬ್ಸ್, ಬುಲ್ ಬುಲ್, ಸ್ಕೌಟ್ಸ್, ಗೈಡ್ಸ್ ಗಳು ಎಂ.ವಿ ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಫಾರ್ಚನೆಗೈದು, ಮೌನ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಗೈಡ್ ಕ್ಯಾಪ್ಟನ್ ಶ್ರೀಮತಿ ಹರಿಣಾಕ್ಷಿ, ಲೇಡಿ ಕಬ್ ಮಾಸ್ಟರ್‍ಗಳಾದ ಶ್ರೀಮತಿ ವೀಣಾ ಕುಮಾರಿ, ಶ್ರೀಮತಿ ಸೌಮ್ಯಶ್ರೀ ಉಪಸ್ಥಿತರಿದ್ದರು.

Highslide for Wordpress Plugin