ವಿದ್ಯಾಭಾರತಿ ಅಖಿಲಾ ಭಾರತೀಯ ಶಿಕ್ಷಾ ಸಂಸ್ಥಾನ, ಅಖಿಲಾ ಭಾರತೀಯ ಸಂಸ್ಕೃತಿ ಮಹೋತ್ಸವ ಮತ್ತು ಶ್ರೀಜಿ ಬಾಬಾ ಸರಸ್ವತಿ ವಿದ್ಯಾಮಂದಿರ, ಮಥುರಾ ಇಲ್ಲಿ ನಡೆದ ರಾಷ್ಟ್ರಮಟ್ಟದ ಮೂರ್ತಿಕಲಾ ರಚನಾ ಸ್ಪರ್ಧೆಯಲ್ಲಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಕಿಶಾನ್(ಹರೀಶ್ ಗೌಡ ಮತ್ತು ಸವಿತಾ ದಂಪತಿಗಳ ಪುತ್ರ) ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ, ಶ್ರೀ ರಂಗಪ್ಪ ಕಲಾದಗಿ ತರಬೇತಿ ನೀಡಿರುತ್ತಾರೆ.