ಇಲ್ಲಿನ ತೆಂಕಿಲದಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲಾ ವಾರ್ಷಿಕ ಕ್ರೀಡಾ ಕೂಟವನ್ನು ಜಿ.ಪಂ. ಸದಸ್ಯ ಕೇಶವ ಗೌಡ ಬಜತ್ತೂರು ಉದ್ಫಾಟಿಸಿದರು. ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಜೀವಂಧರ್ ಜೈನ್, ಶಾಲಾ ಆಡಳಿತ ಮಂಡಳಿ ಪ್ರಮುಖರಾದ ಬಂಗಾರಡ್ಕ ವಿಶ್ವೇಶ್ವರ ಭಟ್, ರವೀಂದ್ರ.ಪಿ, ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ಸತೀಶ್ ಉಜಿ ಮತ್ತಿತ್ತರು ಉಪಸ್ಥಿತರಿದ್ದರು.