ಗಾನ – ನೃತ್ಯ – ಯಕ್ಷ ಸಂಭ್ರಮ – 2024

ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪುತ್ತೂರು, ಗಾನ ಸರಸ್ವತಿ ಸಂಗೀತ ಶಾಲೆ ಪುತ್ತೂರು ಹಾಗೂ ಯಕ್ಷ ಚಿಣ್ಣರ ಬಳಗ ಪುತ್ತೂರು ಇವರ ಸಹಯೋಗದೊಂದಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಗಾನ-ನೃತ್ಯ-ಯಕ್ಷ ಸಂಭ್ರಮ-2024’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಪ್ರಸ್ತುತ ವೈದ್ಯ ವೃತ್ತಿಯಲ್ಲಿರುವ ಹಾಗೂ ಮೃದಂಗ ಕಲಾವಿದರೂ ಆದ ಶ್ರೀ ಅಕ್ಷಯ ನಾರಾಯಣ ಕಾಂಚನ ಪುತ್ತೂರು ರವರು ನೆರವೇರಿಸಿದರು. ವಿದ್ಯಾರ್ಥಿ ಜೀವನದಲ್ಲಿ ಪಠ್ಯಪೂರಕ ಚಟುವಟಿಕೆಗಳು ವಿದ್ಯಾರ್ಥಿಗಳ ಪಾಲಿಗೆ ಅವಶ್ಯಕ ಎಂಬುದಾಗಿ ತಿಳಿಸಿದರು.

ಸಭಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಜನ್ಮ ಪೌಂಢೇಶನ್ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ಹರ್ಷ ಕುಮಾರ್ ರೈ ಮಾಡಾವು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ವಿದುಷಿ ಶ್ರೀಮತಿ ರಾಜಶ್ರೀ ಉಳ್ಳಾಲರವರು ಮಾತನಾಡುತ್ತಾ, ‘ಸಂಗೀತ, ಭರತನಾಟ್ಯ, ಯಕ್ಷಗಾನ ಈ ಮಾದರಿಯ ಕಲೆಗಳು ಇಂದು ಜಗತ್ತಿನಾದ್ಯಂತ ಪ್ರಸಿದ್ಧಿಯನ್ನು ಪಡೆದಿದೆ ಆ ಸಂಸ್ಕಾರ ಭಾರತಿ ಕಲೆಯನ್ನು ಈ ಶಾಲೆಯಲ್ಲಿ ಮುಂದುವರಿಸುತ್ತಿರುವುದು ಸಂತಸದಾಯಕ ವಿಷಯ ಎಂದರು’.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರರವರು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಮುಖ್ಯಗುರು ಶ್ರೀಮತಿ ಆಶಾ ಬೆಳ್ಳಾರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಈ ಸಂದರ್ಭದಲ್ಲಿ ಭರತನಾಟ್ಯ ಗುರುಗಳಾದ ವಿದುಷಿ ಶ್ರೀಮತಿ ಪ್ರೀತಿಕಲಾ ದೀಪಕ್ ಕುಮಾರ್, ಯಕ್ಷಗಾನ ಗುರುಗಳಾದ ಶ್ರೀ ಚಂದ್ರಶೇಖರ್ ಸುಳ್ಯಪದವು, ಸಂಗೀತ ಗುರುಗಳಾದ ವಿದುಷಿ ಮಾಲಿನಿ ಕೃಷ್ಣ ಮೋಹನ್‍ರವರಿಗೆ ಗುರುವಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

Highslide for Wordpress Plugin