ಪ್ರಸಕ್ತ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ಮಕ್ಕಳ ಬೀಳ್ಕೋಡುಗೆ ಸಮಾರಂಭ ‘ದೀಪ ಪ್ರದಾನ’ ನೆರವೇರಿತು. ಕಾರ್ಯಕ್ರಮದ ಉದ್ಘಾಟಕರಾಗಿ ಪುತ್ತೂರಿನ ದಂತವೈದ್ಯರಾದ ಶ್ರೀಕೃಷ್ಣ ಭಟ್ ಆಗಮಿಸಿ ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ವಹಿಸಬೇಕಾದ ಪೂರ್ವಸಿದ್ಧತಾ ವಿಚಾರಗಳನ್ನು ತಿಳಿಸಿ ಶಾಲೆಯ ಧನಾತ್ಮಕ ಹಾಗೂ ಕ್ರಿಯಾತ್ಮಕ ಬೆಳವಣಿಗೆಯಲ್ಲಿ ಪೋಷಕರ ಹಾಗೂ ವಿದ್ಯಾರ್ಥಿಗಳ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
೧೦ನೇ ತರಗತಿಯ ಮಕ್ಕಳು, ೯ನೇ ತರಗತಿಯ ಮಕ್ಕಳಿಗೆ ದೀಪ ಪ್ರದಾನ ಮಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸಭಾಧ್ಯಕ್ಷತೆ ವಹಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ್ಚಂದ್ರ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಜಯಂತ ಪ್ರೌಢವಿಭಾಗದ ಮುಖ್ಯಗುರು ಆಶಾ ಬೆಳ್ಳಾರೆ, ಪ್ರಾಥಮಿಕ ವಿಭಾಗದ ಮುಖ್ಯಗುರು ನಳಿನಿ ವಾಗ್ಲೆ, ಆಡಳಿತ ಮಂಡಳಿ ಕೋಶಾಧಿಕಾರಿ ಅಶೋಕ್ ಕುಂಬ್ಳೆ, ಸದಸ್ಯರಾದ ವೀಣಾ ನಾಗೇಶ್ ತಂತ್ರಿ ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ದೇಶಭಕ್ತಿ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮವು ಶಾಂತಿ ಮಂತ್ರ ಹಾಗೂ ಸಾಮೂಹಿಕ ಸಹಭೋಜನದೊಂದಿಗೆ ಸಂಪನ್ನಗೊAಡಿತು.