ಗುಜರಾತಿನ ಸೂರತ್ ನಗರದಲ್ಲಿ All India Karate Fedaration ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸಾತ್ವಿಕ್ ಶರ್ಮ ಬಿ.ಎಸ್. 12 ವರ್ಷದ ಕೆಳಗಿನ ಕಟಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾನೆ. ಮತ್ತು 20 ಕೆ.ಜಿ. ಒಳಗಿನ ವಿಭಾಗದ ಕುಮಿಟೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಸಂಹಿತಾ ಶರ್ಮ ಬಿ.ಎಸ್. ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರಿನ ಷಿಹಾನ್ ಎಂ. ಸುರೇಶ್ ಇವರಲ್ಲಿ ಕರಾಟೆ ಕಲಿಯುತ್ತಿದ್ದಾರೆ.
