ಪುಟ್ಬಾಲ್ – ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
Tuesday, September 3rd, 2024ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಶಾಲೆಯ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಶಾಲೆಯ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದಿದ್ದು ಇದರಲ್ಲಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರೌಢ ವಿಭಾಗದಲ್ಲಿ ಸ್ಕಂದ ಬಳ್ಳಕ್ಕುರಾಯ – ಪ್ರಥಮ, ರಿತೇಶ್ – ತೃತೀಯ, ದುರ್ಗಾಪ್ರಸಾದ್ – ಚತುರ್ಥ. ಎಂಟನೇ ತರಗತಿಯ 14ರ ವಯೋಮಾನದ ವಿಭಾಗದಲ್ಲಿ ನಿಶಾಂತ್ – ದ್ವಿತೀಯ, ಪ್ರಾಥಮಿಕ ವಿಭಾಗದಲ್ಲಿ ಲಿಖಿತ್ ತೃತೀಯ, ಅಥ್ಲೆಟಿಕ್ಸ್ ಯೋಗಾಸನದಲ್ಲಿ ರಾಹುಲ್ -ಪ್ರಥಮ, ಮಲ್ಲಿಕಾರ್ಜುನ – ತೃತೀಯ, ಸಾಧನ – ದ್ವಿತೀಯ, ರಿದಮಿಕ್ ಯೋಗಾಸನದಲ್ಲಿ […]
ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ಶಾಲೆಯ ಕಿಶೋರ ವರ್ಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡದಲ್ಲಿ : ತರುಣ್, ದೇಶ್ಚಿತ್, ಲತೇಶ್, ಭಾಸ್ವತ್, ಲಿಖಿತ್, ಕೀರ್ತನ್, ವಿನೀತ್, ಭವಿತ್, ಮೇಘರಾಜ್, ಶ್ರವಣ್, ಚಂದನ್ ಮತ್ತು ದೀಪಕ್ ಭಾಗವಹಿಸಿದ್ದರು. ಬಾಲಕಿಯರ ತಂಡದಲ್ಲಿ : ಧನ್ಯಶ್ರೀ, ರಕ್ಷಾ, ನಳಿನಿ, ಪೃಥ್ವಿ, ವರ್ಷಾ, ದೃಷಾ, ಯೋಗ್ಯ, ಕೃತಿ, ಭೂಮಿಕಾ, […]
ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಹಾಸನದ ಮಂಗಳೂರು ಪಬ್ಲಿಕ್ ಸ್ಕೂಲ್ ಇಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿದ್ದ ಕ್ರೀಡಾಪಟುಗಳು ದೀಕ್ಷಿತಾ (ದೇವಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಬಿಂದುಶ್ರೀ (ಜನಾರ್ಧನ ಮತ್ತು ಶಶಿಕಲಾ ದಂಪತಿಗಳ ಪುತ್ರಿ), ನಿಖಿತಾ (ಸುಂದರ ಮತ್ತು ಗೀತಾ ದಂಪತಿಗಳ ಪುತ್ರಿ), ವಿನ್ಯಾ ರೈ (ಕೃಷ್ಣಪ್ರಸಾದ್ ರೈ ಮತ್ತು ರಾಜೀವಿ ರೈ ದಂಪತಿಗಳ ಪುತ್ರಿ), ಸುಶಾ ಎಂ ( ಕೃಷ್ಣಪ್ಪ […]
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇದರ ವತಿಯಿಂದ ನಡೆದ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗಕ್ಕೆ ಪ್ರಥಮ ಸಮಗ್ರ ಪ್ರಶಸ್ತಿ ಬಂದಿರುತ್ತದೆ. ಕಿರಿಯರ ವಿಭಾಗದಲ್ಲಿ :ಆಯುಷ್ ಬಿ – ಪ್ರಥಮ (ಚಿತ್ರಕಲೆ), ಮಾತಂಗಿ – ಪ್ರಥಮ(ಭಕ್ತಿಗೀತೆ), ಭಾರ್ಗವ ರಾಮ ಯು- ಪ್ರಥಮ (ಆಶುಭಾಷಣ), ಸನ್ಮಯ ಭಟ್ ವೈ – […]
“ನಾಟಕಗಳು ಶಾಲಾ ಹಂತದಿಂದಲೇ ಮೌಲ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿವೆ. ಆದ್ದರಿಂದ ಮಕ್ಕಳು ಸಂಗೀತ, ನೃತ್ಯ, ನಾಟಕಗಳಂತಹ ಪಠ್ಯಪೂರಕ ಕಲೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ತಮ್ಮಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಸಮಾಜದಲ್ಲೂ ಅದನ್ನು ಪ್ರತಿಬಿಂಬಿಸುವ ವ್ಯಕ್ತಿತ್ವನ್ನು ಬೆಳೆಸಿಕೊಳ್ಳಬೇಕು” ಎಂದು ಸರಕಾರಿ ಪ್ರೌಢಶಾಲೆ ಕೊಂಬೆಟ್ಟು ಇಲ್ಲಿನ ಪ್ರಾಂಶುಪಾಲರಾದ ಶ್ರೀ ವಸಂತ ಮೂಲ್ಯ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ […]
ಪುತ್ತೂರಿನ ತೆಂಕಿಲ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಧ್ವಜರೋಹಣ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಉದಯಶಂಕರ ಮಾಣಿ ಮುಖ್ಯ ಅತಿಥಿಗಳಾಗಿದ್ದು ಧ್ವಜಾರೋಹಣ ಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖ, ಮತ್ತು ತೆಂಕಿಲ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಮುಖ್ಯಗುರುಗಳು ಉಪಸ್ಥಿತರಿದ್ದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಳಿಕ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ […]
ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶಕ್ತಿ ವಿದ್ಯಾಸಂಸ್ಥೆ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ೧೭ವರ್ಷದೊಳಗಿನ ಬಾಲಕಿಯರ ಈಜುಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಅನನ್ಯ ಎ (ಶ್ರೀ ಅಪ್ಪು ಮತ್ತು ಜಯಲಕ್ಷಿ ದಂಪತಿಗಳ ಪುತ್ರಿ) ೫೦ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ಶ್ರೀ ಕೃಷ್ಣ ಬಿ (ಶ್ರೀ ವೆಂಕಟೇಶ್ ಪ್ರಸಾದ್ ಮತ್ತು ಮಂಗಳ ಗೌರಿ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಉಡುಪಿ ಜಿಲ್ಲೆಯ ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾಂತ್ ಬಾಲವರ್ಗದ ಬಾಲಕರ ವಿಭಾಗದ ತಂಡದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುತ್ತಾನೆ. ಮತ್ತು ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ಶೃಜನ್ ಜೆ ರೈ, ದುರ್ಗಾಪ್ರಸಾದ್, ರಿತೇಶ್, ಸ್ಕಂದ ಬಳ್ಳಕ್ಕುರಾಯ ಇವರ ತಂಡ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಶಿಕ್ಷಕಿಯರಾದ ಶ್ರೀಮತಿ ಅನುರಾಧ ಮತ್ತು ಶ್ರೀಮತಿ ನಮಿತಾ ಕೆ.ಕೆ ತರಬೇತಿ ನೀಡಿದ್ದರು.
ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಕಿಶೋರ ವಿಭಾಗ ಮತ್ತು ಬಾಲವರ್ಗ ಈ ಎರಡೂ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ನಿಶಾಂತ್ –(ಚಂದ್ರಶೇಖರ ಮತ್ತು ಸವಿತಾ ದಂಪತಿಗಳ ಪುತ್ರ) ಪ್ರಥಮ, ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಹುಲ್ (ಚಂದ್ರಕಾ0ತ್ ಮತ್ತು ಲಕ್ಷಿ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಿಶೋರ ವರ್ಗದ […]
ಸುಖ ಜೀವನ, ಹಣಕ್ಕಿಂತ ದೇಶ ದೊಡ್ಡದು – ಲೆ. ಕ. ಅಶೋಕ್ ಕಿಣಿ ಜನ್ಮ ನೀಡಿದ ಭೂಮಿಯನ್ನು ಸ್ವರ್ಗಕ್ಕಿಂತ ಮೇಲು ಎಂದು ಭಾವಿಸುವ ನಾವು ಸುಖದ ಜೀವನ, ಸಂಪತ್ತುಗಳಿಸುವುದಕ್ಕಿAತ ದೇಶ ದೊಡ್ಡದು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಂತಹ ದೇಶವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಕೇವಲ ಸೈನಿಕರಲ್ಲದೇ ನಮ್ಮೆಲ್ಲರಲಿದೆ ಎಂದು ಮಾಜಿ ರಾಷ್ಟçಪತಿ ಎಪಿಜೆ ಅಬ್ದುಲ್ ಕಲಾಂರವರ ರಕ್ಷಣಾಪಡೆಯಲ್ಲಿ ಅಧಿಕಾರಿಯಾಗಿದ್ದ ಕೇಂದ್ರದ ರಕ್ಷಣಾ ರಾಜ್ಯ ಸಚಿವರ ಮಾಜಿ ಭದ್ರತಾ ಸಲಹೆಗಾರ ಲೆ.ಕ ಅಶೋಕ್ ಕಿಣಿ ಎಚ್ ಹೇಳಿದರು. ಕಾರ್ಗಿಲ್ […]
ಶಾರದಾ ವಿದ್ಯಾಲಯ ಮಂಗಳೂರು ಇದರ ವತಿಯಿಂದ ನಡೆದ ‘ಶಾರದಾ ಮಹೋತ್ಸವ’ ಜಿಲ್ಲಾಮಟ್ಟದ ಸಾಂಸ್ಕತಿಕ ಸ್ಪರ್ಧೆಯಲ್ಲಿ ಶಾಲೆಯ ಅದ್ವಿತ್.ಜಿ ಬಾಲವರ್ಗದ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ ಸ್ಥಾನ ಮತ್ತು ಶ್ರೀರಕ್ಷಾ ಕಿಶೋರವರ್ಗದ ಗೀತಕಂಠಪಾಠ ಸ್ಪರ್ಧೆಯಲ್ಲಿ – ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬAಧಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಶಿಶುವಾಟಿಕ ಆಚಾರ್ಯ ಪ್ರಶಿಕ್ಷಣ ವರ್ಗವನ್ನು ಸರಸ್ವತಿ ವಿದ್ಯಾಮಂದಿರ ನರಿಮೊಗರು ಇದರ ಅಧ್ಯಕ್ಷರಾದ ಅವಿನಾಶ್ ಕೊಡಂಕಿರಿಯವರು ದೀಪ ಪ್ರಜ್ವಲಿಸಿ ಉದ್ಘಾಟಿಸುತ್ತಾ ಶಿಶುಮಂದಿರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾತಾಜಿಯವರು ಅಧ್ಯಯನ ಶೀಲ, ವಿವೇಚನಾ ಸಹಿತ, ವಿಮರ್ಶಾ ಗುಣವನ್ನು ಹೊಂದಿರಬೇಕು. ಶಿಕ್ಷಕರ ಈ ಮನೋ ವೃತ್ತಿಯು ಮಕ್ಕಳ ಕ್ರಿಯಾಶೀಲತೆಯನ್ನು ಪೋಷಿಸಲು ಸಹಕಾರಿಯಾಗಿದೆ. ಮನೆ – ಶಾಲೆ ಹಾಗೂ ವಾತಾವರಣ ಅವರ ಮೇಲೆ ಧನಾತ್ಮಕ ಪರಿಣಾಮ ಬೀರುವಂತೆ ಶಿಕ್ಷಣ ನೀಡುವ ಜವಾಬ್ದಾರಿ […]
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಸರಕಾರು ಸಾರ್ವಜನಿಕ ಆಸ್ಪತ್ರೆ ಪುತ್ತೂರು ದ.ಕ ಇವರ ಆಶ್ರಯದಲ್ಲಿ ನಮ್ಮ ಶಾಲೆಯಲ್ಲಿ ನಡೆದ ಹದಿಹರೆಯ ಮಾಹಿತಿ ಕಾರ್ಯಾಗಾರದಲ್ಲಿ ಸರಕಾರಿ ಆಸ್ಪತ್ರೆ ಪುತ್ತೂರು ಇಲ್ಲಿನ ಆಪ್ತಸಮಾಲೋಚಕರಾದ ಡಾ. ಸುಶ್ಮಿತಾ ಇವರು ಹದಿಹರೆಯಕ್ಕೆ ಕಾಲಿಡುತ್ತಿರುವ ಕಿಶೋರಿಯರು ತಮ್ಮಲ್ಲಾಗುತ್ತಿರುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳನ್ನು ತಿಳಿದುಕೊಂಡಿರಬೇಕು. ಜೊತೆಯಲ್ಲಿ ತಮ್ಮ ಮನೆ, ಸುತ್ತಲ ಪರಿಸರದಲ್ಲಿ ಕೆಲವೊಮ್ಮೆ ಎದುರಾಗಬಲ್ಲ ಸಮಸ್ಯೆಗಳ ಬಗ್ಗೆ ಅರಿವನ್ನು ಹೊಂದಿರಬೇಕು ಎಂದರು. ಸಾರ್ವಜನಿಕ ಆರೋಗ್ಯ ಇಲಾಖಾ ವತಿಯಿಂದ ಹೆಣ್ಣು ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳು […]
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಪ್ರವರ್ತಿತ ತೆಂಕಿಲ ವಿವೇಕ ನಗರ ಆವರಣದ ವಿದ್ಯಾಸಂಸ್ಥೆಗಳಾದ ವಿವೇಕಾನಂದ ಪ್ರಶಿಕ್ಷಣ ಮಹಾವಿದ್ಯಾಲಯ ,ನರೇಂದ್ರ ಪದವಿ ಪೂರ್ವ ಕಾಲೇಜು, ವಿವೇಕಾನಂದ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲಾ ಸಹಯೋಗದೊಂದಿಗೆ ತೆಂಕಿಲ ಆವರಣದಲ್ಲಿ ಹಸಿರು – ಪರಿಸರ ಕಲ್ಪನಾಧಾರಿತ ಸಸ್ಯ – ಸಂಜೀವಿನಿ ಯೋಜನೆಗೆ ಗಿಡ ನೆಡುವುದರ ಮೂಲಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಸತೀಶ್ ರಾವ್ ಇವರು ಚಾಲನೆ ನೀಡಿದರು. ಶ್ರೀಯುತರು ಮಾತನಾಡುತ್ತಾ ಪರಿಸರ ಉಳಿಸಿ, ಬೆಳೆಸಿ, ಕಾಪಾಡುವ ದೃಷ್ಟಿಯಿಂದ ವಿದ್ಯಾವರ್ಧಕ ಸಂಘದಿಂದ […]
ಶಾಲಾ ‘ಸಮನ್ವಯ’ ಸಮಾಜ ವಿಜ್ಞಾನ ಸಂಘದ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಚುನಾವಣೆ ಹಾಗೂ ಮಂತ್ರಿಮಂಡಲ ರಚನಾ ಪ್ರಕ್ರಿಯೆ ನಡೆಯಿತು. ಸಾರ್ವತ್ರಿಕ ಚುನಾವಣಾ ಪ್ರಕ್ರಿಯೆಯ ಸಾಮಾನ್ಯ ಪ್ರಜ್ಞೆಯನ್ನು ಮೂಡಿಸುವ ನೆಲೆಯಲ್ಲಿ ಇ.ವಿ.ಎಂ ಮತಯಂತ್ರದ ಮೂಲಕ 2024-25ನೇ ಸಾಲಿನ ಚುನಾವಣೆಯನ್ನು ನಡೆಸಲಾಯಿತು. ಪ್ರೌಢಶಾಲಾ ವಿಭಾಗದ ನಾಯಕನಾಗಿ ಚಿರಂತನ್ ಕೆ.ವಿ ಮತ್ತು ಉಪನಾಯಕನಾಗಿ ಧನ್ವಿತ್ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಅದ್ವಿತ್ ಜಿ ಮತ್ತು ಉಪನಾಯಕನಾಗಿ ಸುಭಾಷ್ ಹೆಚ್.ಎನ್ ಆಯ್ಕೆಯಾದರು
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು ತಾಲೂಕು ಮತ್ತು ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆಯ ಅಂಗವಾಗಿ ನಡೆದ ಪುತ್ತೂರು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಶಾಲೆಯ ಅದ್ವಿತ್ ಜಿ -ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ – ದ್ವಿತೀಯ, ಗಾನವಿ ಎನ್ – ಪ್ರಾಥಮಿಕ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಶಾಲೆಯಲ್ಲಿ ಯೋಗೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಸಂಪನ್ನಗೊoಡವು. ಅಂತರಾಷ್ಟಿಯ ಯೋಗ ದಿನೋತ್ಸವ ಸಮಿತಿ, ಆಯುಷ್ ಇಲಾಖೆ, ಪ್ರವಾಸೋದ್ಯಮ ಇಲಾಖೆ ಬಿಡುಗಡೆಗೊಳಿಸಿದ ೪೫ ನಿಮಿಷಗಳ ಯೋಗಾಭ್ಯಾಸ ಪಟ್ಟಿ ಒಳಗೊಂಡಿರುವ ಯೋಗ ಮಂತ್ರ, ಸೂಕ್ಷ ವ್ಯಾಯಾಮ, ಸರಳ ಆಸನಗಳು, ಪ್ರಾಣಾಯಮ, ಅಷ್ಟಾಂಗ ಯೋಗ ಪರಿಚಯ ಅಭ್ಯಾಸಗಳನ್ನು ೬ರಿಂದ ೧೦ನೇ ತರಗತಿಯ ಮಕ್ಕಳಿಗೆ ಜೂನ್ ೧೦ರಿಂದ ೨೧ರವರೆಗೆ ನಡೆಸಲಾಯಿತು. ಜೂನ್ ೨೧ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಸಂತ ಸುವರ್ಣ ಇವರ ಸಭಾಧ್ಯಕ್ಷತೆಯಲ್ಲಿ ವಿವೇಕಾನಂದ […]
ಶಾಲೆಯಲ್ಲಿ ಸಾಮ್ರಾಟ್ ಛತ್ರಪತಿ ಶಿವಾಜಿಯವರ ಪಟ್ಟಾಭಿಷೇಕದ ದಿನವಾದ ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು. ಆಶಯ ಮಾತಿಗಾಗಿ ಆಗಮಿಸಿದ ವಿವೇಕಾನಂದ ಪದವಿ ಕಾಲೇಜಿನ ವಿದ್ಯರ್ಥಿಯಾದ ಅಭಿರಾಮ್ ಭಟ್ ಇವರು ಹಿಂದವಿ ಸಾಮ್ರಾಜ್ಯ ನರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರ ಕರ್ಯ-ಸಾಹಸ- ನಾಯಕತ್ವ ಗುಣಗಳನ್ನು ಘಟನೆಗಳನ್ನು ಓದಿ – ಕೇಳಿ ತಿಳಿಯಬೇಕಿದೆ. ಇತಿಹಾಸ ಪ್ರಸಿದ್ಧ ನಾಯಕರು ನಮಗೆ ನಾಯಕರಾಗಬೇಕು ಎಂದು ತಿಳಿಸಿದರು. ಶಾಲಾ ಪೆÇೀಷಕರಾದ ಶ್ರೀಮತಿ ಶಶಿಕಲಾ ಇವರು ದೀಪಪ್ರಜ್ವಲಿಸಿ ಶುಭಾರಂಭಗೊಳಿಸಿದರು. ಆಡಳಿತ ಮಂಡಳಿ ಕೋಶಾಧಿಕಾರಿಗಳಾದ ಅಶೋಕ ಕುಂಬಳೆ, […]
ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ‘ಪರಿಣಾಮಕಾರಿ ಪೋಷಕತ್ವ’ ಕಾರ್ಯಗಾರದಲ್ಲಿ ಟ್ರಸ್ಟಿನ ವ್ಯವಸ್ಥಾಪಕರಾದ ಡಾ. ಶ್ರೀಶ ಭಟ್ […]
‘ಮಕ್ಕಳ ಕಲಿಕಾ ಪ್ರಕ್ರಿಯೆಯಲ್ಲಿ ಪೋಷಕರೂ ಮಕ್ಕಳಾಗಬೇಕು’- ಜಯಪ್ರಕಾಶ್-ವಕೀಲರು ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷ ೧೦ನೇ ತರಗತಿಯ ಪೋಷಕರ ಸಭೆಗೆ ದೀಪಬೆಳಗಿಸಿ ಶಾಲಾ ಪೋಷಕರಾದ ಜಯಪ್ರಕಾಶ್ ಚಾಲನೆ ನೀಡಿದರು. ೨೦೨೪-೨೫ರ ಶೈಕ್ಷಣಿಕ ವರ್ಷದ ಪಠ್ಯ-ಪಠ್ಯಪೂರಕ ಚಟುವಟಿಕೆಗಳ ಕಾರ್ಯಯೋಜನೆಗಳನ್ನು ಸಭೆಗೆ ತಿಳಿಸಿದ ಸಹಶಿಕ್ಷಕರಾದ ರಾಮ್ ನಾಯ್ಕ್ ಇವರು ಶಾಲಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೋಷಕರು – ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವ ಮಹತ್ವದ್ದಾಗಿದೆ ಎಂದು ತಿಳಿಸಿದರು. ಪೋಷಕರೊಂದಿಗೆ ನಡೆದ ಸಂವಾದದಲ್ಲಿ ಆಂಗ್ಲಭಾಷಾ ಸಂವಹನ, ಆಂತರಿಕ […]
ಕೃಷಿ ಚಟುವಟಿಕೆ ಮರುಹುಟ್ಟು ನೀಡಿದೆ – ದೀಪ್ತಿ ರಘುನಾಥ್ ಶಾಲೆಯಲ್ಲಿ ಪ್ರಸಕ್ತ ವಿಶ್ವ ಪರಿಸರ ವರ್ಷದ ಧ್ಯೇಯ “ನಮ್ಮ ಭೂಮಿ – ನಮ್ಮ ಭವಿಷ್ಯ- ನಾವು ಪರಿಸರದ ಪುನರುತ್ಥಾನದ ಪೀಳಿಗೆ ಆಧಾರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಂಗವಾಗಿ ಅಭ್ಯಾಗತರಾಗಿ ಆಗಮಿಸಿದ ದೀಪ್ತಿ ರಘುನಾಥ್ ಮಾತನಾಡಿ ನಮ್ಮ ಹಿರಿಯರು ಪರಿಸರದ ಅವಿಭಾಜ್ಯ ಅಂಗವಾಗಿದ್ದರು.ಇಂದು ಸ್ವಾರ್ಥದ ಬದುಕಿನಲ್ಲಿ ವೈಯುಕ್ತಿಕ ಸುಖಕ್ಕೆ ಮಹತ್ವ ನೀಡುತ್ತಾ ಪರಿಸರವನ್ನು ಮರೆಯುತ್ತಿದ್ದೇವೆ. ಪ್ರತಿದಿನವೂ ಪರಿಸರ ದಿನವಾದಾಗ ಸ್ವಚ್ಛ-ಸುಂದರ ಬಾಳಿನ […]
“ಮಗುವಿನ ಹುಟ್ಟಿನಿಂದ ಕೊನೆಯವರೆಗೆ ಸಾಧನೆ ನಡೆಯುತ್ತಾ ಇರುತ್ತದೆ.ಸಾಧನೆ ಹಂತ ಹಂತವಾಗಿ ವಿಭಿನ್ನವಾಗಿ ಇರುತ್ತದೆ ಹಾಗೂ ಅಭಿನಂದನೆಗೂ ಅರ್ಹವಾಗಿರುತ್ತದೆ”. ಡಾ.ಕೃಷ್ಣ ಭಟ್ ಕೊಂಕೋಡಿ. ಶಾಲೆಯಲ್ಲಿ 2023- 24 ರ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಗೌರವಿಸುವ ಸಾಧನಾಭಿವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ವಿದ್ಯಾರ್ಥಿಗಳು ತಾನು ಕಲಿತ ಶಾಲೆಯ ಜೊತೆ ಯಾವಾಗಲೂ ಸಂಪರ್ಕವನ್ನು ಇಟ್ಟುಕೊಳ್ಳಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ ಎಂ ಕೃಷ್ಣ ಭಟ್ ದೀಪ ಬೆಳಗಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶಾಲೆಯ ಹಿರಿಯ […]
2024-25ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಹೊಸ ಸೇರ್ಪಡೆಗೊಂಡಿರುವ ಹಾಗೂ ಮರು ಸೇರ್ಪಡೆಗೊಂಡಿರುವ ಮಕ್ಕಳ ಹಾಗೂ ಅವರ ಪೋಷಕರಿಗೆ ಶಾಲಾ ಪುನರಾರಂಭದಂದು ಗಣಹೋಮ ನಡೆಸಿ ಸ್ವಾಗತಿಸಲಾಯಿತು. ಶಾಲಾ ಮಾತೃಭಾರತಿ ಸಂಘದ ಅಧ್ಯಕ್ಷರಾದ ಶ್ರೀಮತಿ ಮಂಗಳ ಗೌರಿ ಮತ್ತು ವೆಂಕಟೇಶ್ ದಂಪತಿಗಳು ಪ್ರಧಾನರ್ಚಕರ ಸಮ್ಮುಖದಲ್ಲಿ ದೈವೀ ಕಾರ್ಯ ನೆರವೇರಿಸಿದರು. ಬಂದಂತಹ ಮಕ್ಕಳಿಗೆ ತಿಲಕವಿರಿಸಿ ಆರತಿ ಬೆಳಗಿ ಶುಭ ಕೋರಲಾಯಿತು. ಶಾಲಾ ಆಡಳಿತ ಮಂಡಳಿ, ಅಧ್ಯಕ್ಷರು, ಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಪ್ರಸಕ್ತ ಶೈಕ್ಷಣಿಕ ವರ್ಷದ ಪೂರ್ವಾರಂಭ ಯೋಜನೆಯಾದ ಶಿಕ್ಷಕರ ಕಲಿಕಾ ಕಾರ್ಯಾಗಾರ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದವರು ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯಗುರುಗಳಾದ ಸತೀಶ್ ಭಟ್ ಬಿಳಿನೆಲೆ ಇವರು. ಶಾಲಾ ಶೈಕ್ಷಣಿಕ ವರ್ಷದ ಯೋಜನೆಯ ಗುರಿ, ಉದ್ದೇಶ, ಕಾರ್ಯ ಸಾಧನೆಗಳ ಬಗ್ಗೆ ತಿಳಿಸುತ್ತಾ “ ಶಿಕ್ಷಕರಾದ ನಾವು ಮಕ್ಕಳಲ್ಲಿರುವ ವೈಯಕ್ತಿಕ ವಿಭಿನ್ನತೆಗನುಗುಣವಾಗಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶೈಕ್ಷಣಿಕ ಯೋಜನೆಯನ್ನು ರೂಪಿಸಬೇಕಾದ ಅಗತ್ಯತೆಯನ್ನು ತಿಳಿಸಿದರು. ಎರಡನೇ ಅವಧಿಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ| ಶಿಲ್ಪಾ ಹೆಗ್ಡೆ […]
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ,ಬೆಂಗಳೂರು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ,ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ ಶಾಲೆಯ 9 ನೇ ತರಗತಿಯ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಇವರು ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನ ೧೦ನೇ ಹಾಗೂ ೭ನೇ ತರಗತಿಯ ಮಕ್ಕಳ ಮನೆ – ಮನ ಭೇಟಿ -ಸಾನಿಧ್ಯದಲ್ಲಿ ಶಾಲಾ ಸಹಶಿಕ್ಷಕ ವೃಂದದ ಸಕ್ರಿಯ ಪಾಲ್ಗೊಳ್ಳುವಿಕೆ ಸೌಹಾರ್ದತೆ ಹಾಗೂ ವಿದ್ಯಾರ್ಥಿ ವಿಕಾಸದ ಮೂಲ ಉದ್ದೇಶದಿಂದ ನಡೆಯಬೇಕಿದೆ – ರಮೇಶ್ಚಂದ್ರ (ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು) ಪ್ರತೀ ವರ್ಷ ಶಾಲೆಯ ಮಕ್ಕಳ ಮನೆ ಭೇಟಿಯ ಸಂದರ್ಭ ಶಾಲೆಯ ಎಲ್ಲಾ ಶಿಕ್ಷಕ ವೃಂದ ಈ ಯೋಜನೆಯಲ್ಲಿ ಸಕ್ರಿಯರಾಗಿದ್ದು, ಶಾಲೆ – ಮನೆಯ ನಡುವಿನ ಸಂಬoಧ ಧನಾತ್ಮಕವಾಗುವಲ್ಲಿ ಸಹಕಾರಿಯಾಗುತ್ತಿದೆ ಎಂದು ಪೋಷಕರು ಅಭಿಪ್ರಾಯ […]
ಪ್ರಸಕ್ತ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ಮಕ್ಕಳ ಬೀಳ್ಕೋಡುಗೆ ಸಮಾರಂಭ ‘ದೀಪ ಪ್ರದಾನ’ ನೆರವೇರಿತು. ಕಾರ್ಯಕ್ರಮದ ಉದ್ಘಾಟಕರಾಗಿ ಪುತ್ತೂರಿನ ದಂತವೈದ್ಯರಾದ ಶ್ರೀಕೃಷ್ಣ ಭಟ್ ಆಗಮಿಸಿ ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ವಹಿಸಬೇಕಾದ ಪೂರ್ವಸಿದ್ಧತಾ ವಿಚಾರಗಳನ್ನು ತಿಳಿಸಿ ಶಾಲೆಯ ಧನಾತ್ಮಕ ಹಾಗೂ ಕ್ರಿಯಾತ್ಮಕ ಬೆಳವಣಿಗೆಯಲ್ಲಿ ಪೋಷಕರ ಹಾಗೂ ವಿದ್ಯಾರ್ಥಿಗಳ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಪ್ರಮುಖ ಅಂಗವಾದ ‘ಮಾತೃವಂದನೆ’ ಮಹತ್ವ ಹಾಗೂ ವಿಧಾನವನ್ನು ತಿಳಿಸಿದವರು ಉಡುಪಿಯ ವಿದ್ವಾನ್ ದಾಮೋದರ ಶರ್ಮಾ ಇವರು. ಭಾರತೀಯ ಸಂಸ್ಕತಿಯಲ್ಲಿ ತಾಯಿ-ತಂದೆ, ಗುರು-ಹಿರಿಯರ ಸ್ಥಾನಮಾನ, […]
ಪ್ರತಿ ವರ್ಷ ಹೊಸತನವನ್ನು ಪಡೆಯುವ ಸೂರ್ಯನನ್ನು ನೋಡಿ ನಾವು ಬದುಕಲ್ಲಿ ಹೊಸತನವನ್ನು ಪಡೆಯಬೇಕು. […]
ವಲ್ರ್ಡ್ ರಾಮಾಯಣ ಚಾಂಪಿಯನ್ ಶಿಪ್ – 2023 ನಡೆಸಿದ ಆನ್ಲೈನ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ತ್ರಿಸ್ಥಾ ಭಟ್ ತೃತೀಯ ಸ್ಥಾನ ಪಡೆದಿದ್ದಾಳೆ
ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪುತ್ತೂರು, ಗಾನ ಸರಸ್ವತಿ ಸಂಗೀತ ಶಾಲೆ ಪುತ್ತೂರು ಹಾಗೂ ಯಕ್ಷ ಚಿಣ್ಣರ ಬಳಗ ಪುತ್ತೂರು ಇವರ ಸಹಯೋಗದೊಂದಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಗಾನ-ನೃತ್ಯ-ಯಕ್ಷ ಸಂಭ್ರಮ-2024’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಪ್ರಸ್ತುತ ವೈದ್ಯ ವೃತ್ತಿಯಲ್ಲಿರುವ ಹಾಗೂ ಮೃದಂಗ ಕಲಾವಿದರೂ ಆದ ಶ್ರೀ ಅಕ್ಷಯ ನಾರಾಯಣ ಕಾಂಚನ ಪುತ್ತೂರು ರವರು ನೆರವೇರಿಸಿದರು. ವಿದ್ಯಾರ್ಥಿ ಜೀವನದಲ್ಲಿ ಪಠ್ಯಪೂರಕ ಚಟುವಟಿಕೆಗಳು ವಿದ್ಯಾರ್ಥಿಗಳ ಪಾಲಿಗೆ ಅವಶ್ಯಕ ಎಂಬುದಾಗಿ ತಿಳಿಸಿದರು. ಸಭಾ […]
ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಶ್ರೀಕೃಷ್ಣ (ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ – ಪ್ರಥಮ) ಸಾಯೀಶ್ವರಿ (ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ-ದ್ವಿತೀಯ) ದರ್ಶಿನಿ ಎಂ (ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ – ದ್ವಿತೀಯ) ಪೂಜಾ (ಪ್ರೌಢಶಾಲಾ ವಿಭಾಗದ ಚಿತ್ರಕಲೆಯಲ್ಲಿ – ದ್ವಿತೀಯ)ಸ್ಥಾನ ಪಡೆದುಕೊಂಡಿದ್ದಾರೆ.
ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಮಾರ್ಷಲ್ ಆಟ್ರ್ಸ್ ಇವರು ನಡೆಸಿದ ಜಿಲ್ಲಾ ಮಟ್ಟದ ಐ.ಕೆ.ಎಂ.ಎ ಕಪ್ 2023 8ನೇ ಇಂಟರ್ ಡೋಜೋ ಕರಾಟೆ ಚಾಂಪಿಯನ್ ಶಿಪ್ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅದ್ವಿತ್ ಪಿ 14 ವರ್ಷದೊಳಗಿನ ಕಟಾ ಮತ್ತು ಕುಮಿಟೆ ಕೆಟಗರಿಯಲ್ಲಿ ಪ್ರಥಮ ಸ್ಥಾನ ಹಾಗೂ ಲಿತಿನ್ […]
ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕನಗರ ತೆಂಕಿಲ ಸಂಕೀರ್ಣದಲ್ಲಿರುವ ವಿದ್ಯಾಸಂಸ್ಥೆಗಳಾದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲಮಾಧ್ಯಮ, ನರೇಂದ್ರ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿದ್ಯಾಸಂಸ್ಥೆಗಳ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಘೋಷ್ ವೃಂದದೊಂದಿಗೆ ವೇದಿಕೆಗೆ ಆಗಮಿಸಿದ ಅತಿಥಿಗಳು ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು ಭಾರತೀಯ ಸೇನಾಪಡೆಯ ಯೋಧ ಶ್ರೀ ಜಯ ನಾಯಕ್ ಧ್ವಜಾರೋಹಣಗೈದರು, ನಿವೃತ್ತ ಯೋಧ ಬಾಲಕೃಷ್ಣ ಪಟ್ಟೆ ಗಣರಾಜ್ಯೋತ್ಸವದ ಸಂದೇಶ […]
ಕ್ರೀಡಾಭಾರತಿ ವತಿಯಿಂದ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈಸೂರಿನಲ್ಲಿ ರಾಜ್ಯಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾಕೂಟ ನಡೆದಿದ್ದು ರಾಜ್ಯದ ವಿವಿಧ ಭಾಗದಿಂದ ಒಟ್ಟು 14 ತಂಡಗಳು ಭಾಗವಹಿಸಿದ್ದವು ಈ ಸ್ಪರ್ಧೆಯಲ್ಲಿ ಶಾಲೆಯ ತಂಡ 8ನೇ ಸ್ಥಾನ ಪಡೆದುಕೊಂಡಿದೆ.
ಬಾಲರಾಮದೇವರ ಪ್ರಾಣ ಪ್ರತಿಷ್ಠಾಪನೆ ಸಂಭ್ರಮವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಚರಿಸಿದ ಕ್ಷಣಕ್ಕೆ ಶಾಲಾ ಶಿಕ್ಷಕ ಪೂರಕ ಶಿಕ್ಷಕ ವೃಂದ ವಿದ್ಯಾರ್ಥಿ ವೃಂದ ಸಾಕ್ಷಿಯಾಯಿತು. ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರು ಶ್ರೀರಾಮ ತಾರಕ ಮಂತ್ರವನ್ನು ಪಠಿಸುತ್ತಾ ರಾಮ ಭಜನೆಯನ್ನು ಸ್ತುತಿಸಿದರು. ಆನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಭು ರಾಮನೂರಿನ […]
ರಾಮೋತ್ಸವದ ಅಂಗವಾಗಿ ಶಾಲೆಯಲ್ಲಿ ಅಯೋಧ್ಯಾ ಹೋರಾಟದ ಅನುಭವಗಳನ್ನು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಹಂಚಿಕೊಂಡವರು ವಿವೇಕಾನಂದ ವಿದ್ಯಾವರ್ಧಕ ಸಂಘದ ನೈತಿಕ ಹಾಗೂ ಆಧ್ಯಾತ್ಮಿಕ ಶಿಕ್ಷಣ ಪರಿವೀಕ್ಷಕರಾದ ಮೀನಾಕ್ಷಿ ಮಾತಾಜಿ ಇವರು. ರಾಮಜನ್ಮಭೂಮಿ ಹೋರಾಟ ದೇಶದ ಜನತೆಯ ಐಕ್ಯತೆ, ಧಾರ್ಮಿಕ ಪ್ರಜ್ಞೆ ಹಾಗೂ ದೇಶದ ಸಾಂಸ್ಕೃತಿಕ ಉಳಿವಿಗೆ ಕೈಗನ್ನಡಿಯಾಗಿದೆ. ಈ ದಿಶೆಯಲ್ಲಿ ಹಿರಿಯರು ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ದೇಶದ ಭಕ್ತಿ, ಶ್ರದ್ಧಾ ಕೇಂದ್ರವಾದ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕರಾಳ ದಿನಗಳು ಅವಿಸ್ಮರಣೀಯ ಎಂದ ಮೀನಾಕ್ಷಿ ಮಾತಾಜಿ ಇವರು ತಾವೂ ಕರಸೇವೆಯಲ್ಲಿ […]
ಸ್ವಾಮಿ ವಿವೇಕಾನಂದರ ಜೀವನದ ಘಟನೆಗಳೇ ನಮಗೆ ಮಾರ್ಗದರ್ಶನ – ಶ್ರೀಮತಿ ವೀಣಾಸರಸ್ವತಿ ತುಂಟ ಬಾಲಕ ನರೇಂದ್ರ ಮುಂದೆ ಪ್ರಖರ ವ್ಯಕ್ತಿತ್ವದ ಸ್ವಾಮಿ ವಿವೇಕಾನಂದ ಜಗದ್ವಿಖ್ಯಾತರಾಗಿ ಭಾರತ ದೇಶದ ಹಿರಿಮೆಯನ್ನು ಎತ್ತಿ ಹಿಡಿದಂತಹ ಶ್ರೀ ರಾಮಕೃಷ್ಣ ಪರಮಹಂಸರ ಪ್ರಿಯ ಶಿಷ್ಯ ವಿವೇಕಾನಂದರ ಜೀವನದಲ್ಲಿ ನಡೆದ ಪ್ರತಿ ಘಟನೆಯ ಒಳ ತಿರುಳು ನಮ್ಮ ಜೀವನಕ್ಕೆ ಸೂಕ್ತವಾದ ಮಾರ್ಗದರ್ಶನ ನೀಡುತ್ತದೆ ಎಂದು ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ವೀಣಾಸರಸ್ವತಿಯವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಜರುಗಿದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ನುಡಿದರು. […]
ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಜೊತೆ ಪೋಷಕರೂ ಕೈ ಜೋಡಿಸಿ- ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಓದುವಿಕೆ ಮಾತ್ರ ಮುಖ್ಯ ಅಲ್ಲ, ಮಹಾನ್ ಸಾಧಕರ ಜೀವನ ಚರಿತ್ರೆ ಓದಲು ಪ್ರೋತ್ಸಾಹಿಸಬೇಕು. ಓದಿನ ಜೊತೆಗೆ ದೊಡ್ಡ ಸಾಧನೆಗಳನ್ನು ಮಾಡಲು ಪ್ರೋತ್ಸಾಹ ಕೊಡಬೇಕು ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಹೇಳಿದರು. ಅವರು ಶಾಲೆಯ ವಾರ್ಷಿಕೋತ್ಸವದ ಸಾಂಸ್ಕöÈತಿಕ ಸಮನ್ವಯ – ೨೦೨೩ ವರ್ಷದ ಹರ್ಷ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕು. ನೀವೆಲ್ಲಾ […]