ಗಣರಾಜ್ಯೋತ್ಸವ ಆಚರಣೆ

ಗಣರಾಜ್ಯೋತ್ಸವ ಆಚರಣೆ

Tuesday, January 28th, 2020

ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ ಶಾಲೆಗಳು. ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಬಿ. ಎಡ್‌. ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸೇನಾಧಿಕಾರಿ ಕರ್ನಲ್‌ ಡಿ. ಜಿ. ಭಟ್‌ ಇವರು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಕೆ.ಎಸ್.ಆರ್.ಪಿ. ರಾಮದಾಸ್‌ ಗಣರಾಜ್ಯೋತ್ಸವದ ಸಂದೇಶವನ್ನು ಸಾರಿದರು. ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾರಂಭದಲ್ಲಿ ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಮೂಹಿಕ […]

ಚಿತ್ರಕಲಾ ಸ್ಪರ್ಧೆ - ಶಾಲೆಗೆ ಹಲವು ಪ್ರಶಸ್ತಿ

ಚಿತ್ರಕಲಾ ಸ್ಪರ್ಧೆ – ಶಾಲೆಗೆ ಹಲವು ಪ್ರಶಸ್ತಿ

Monday, January 27th, 2020

ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ತಾಲೂಕು ಬಾಲಭವನ ಸಮಿತಿ ಪುತ್ತೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ. ಕ., ಶಿಶು ಅಭಿವೃದ್ಧಿ ಯೋಜನೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದ ಅಂಗವಾಗಿ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದಿರುತ್ತಾರೆ. 5 ರಿಂದ-8 ವರ್ಷ ವಯೋಮಿತಿಯ ವಿಭಾಗದಲ್ಲಿ : ವಿಘ್ನೇಶ್ ವಿಶ್ವಕರ್ಮ- (ದ್ವಿತೀಯ), ಅದ್ವೀತ್ ಜಿ. – […]

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ - ಜಿಲ್ಲಾ ಮಟ್ಟದಲ್ಲಿ ಪ್ರಥಮ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ – ಜಿಲ್ಲಾ ಮಟ್ಟದಲ್ಲಿ ಪ್ರಥಮ

Monday, January 27th, 2020

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ವಿಭಾಗದ ಜ್ಞಾನ ಮಂಜೂಷಾ ಪುಸ್ತಕಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಗಮ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಶ್ರೀ ಗಣೇಶ್‌ ಆಚಾರ್ಯ ಮತ್ತು ಶ್ರೀಮತಿ ಮಂಜುಳಾ ಗಣೇಶ್ ದಂಪತಿಗಳ ಪುತ್ರಿ.

ತಡೆಗೋಡೆ ಲೋಕಾರ್ಪಣೆ

ತಡೆಗೋಡೆ ಲೋಕಾರ್ಪಣೆ

Tuesday, January 21st, 2020

ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ರೂ. 10 ಲಕ್ಷ ಅನುದಾನದಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ಬಳಿ ತಡೆಗೋಡೆ ನಿರ್ಮಾಣದ ಲೋಕಾರ್ಪಣಾ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಂಜೀವ ಮಠಂದೂರು ಇವರು ಲೋಕಾರ್ಪಣೆಗೊಳಿಸಿದರು. ವೇದಿಕೆಯಲ್ಲಿ ಇಂಜಿನಿಯರ್ ಹರೀಶ್‌ ಕುಮಾರ್, ನಗರಸಭಾ ಕೌನ್ಸಿಲರ್‌ ಜಗನ್ನೀವಾಸ್‌ ರಾವ್ ಶಾಲಾ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ, ಸಂಚಾಲಕರಾದ ಶ್ರೀ ರವಿ ನಾರಾಯಣ, ಖಜಾಂಚಿ ವಸಂತ ಸುವರ್ಣ ಉಪಸ್ಥಿತರಿದ್ದರು.

ಕುಸುಮಸಾರಂಗ ನಾಟಕ ಹಬ್ಬ 2020 ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು

ಕುಸುಮಸಾರಂಗ ನಾಟಕ ಹಬ್ಬ 2020 ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು

Wednesday, January 15th, 2020

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ನಡೆದ ಕುಸುಮಸಾರಂಗ ನಾಟಕ ಹಬ್ಬ 2020 ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ’ಗೊರವರ ಮೈಲಾರ’ ನಾಟಕ ಪ್ರದರ್ಶನಗೊಂಡಿತು.

ವಿವೇಕಾನಂದರ ಜೀವನವೇ ನಮಗೆ ಪ್ರೇರಣೆಯಾಗಲಿ - ಶ್ರೀ ರಮೇಶ್ಚಂದ್ರ

ವಿವೇಕಾನಂದರ ಜೀವನವೇ ನಮಗೆ ಪ್ರೇರಣೆಯಾಗಲಿ – ಶ್ರೀ ರಮೇಶ್ಚಂದ್ರ

Tuesday, January 14th, 2020

ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಯುತ ರಮೇಶ್ಚಂದ್ರ ನುಡಿದರು. ವಿವೇಕಾನಂದರ ಬಾಲ್ಯ ಹಾಗೂ ಅವರ ಮೇಲೆ ಗುರು ರಾಮಕೃಷ್ಣ ಪರಮಹಂಸರ ಪ್ರಭಾವವನ್ನು ಪ್ರಹಸನದ ಮೂಲಕ ವಿದ್ಯಾರ್ಥಿಗಳು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ರವಿನಾರಾಯಣ, ಪ್ರಾಥಮಿಕ […]

ತಾಯಿ ಒಂದು ಪ್ರೇರಣಾ ಶಕ್ತಿ - ಸಾವಿತ್ರಿ ಮಾತಾಜಿ

ತಾಯಿ ಒಂದು ಪ್ರೇರಣಾ ಶಕ್ತಿ – ಸಾವಿತ್ರಿ ಮಾತಾಜಿ

Wednesday, January 8th, 2020

ಜೀವ-ಜೀವನ ನೀಡುವವಳು ಮಾತೆ. ನಿಸ್ವಾರ್ಥ ಸೇವೆಗೆ ಇನ್ನೊಂದು ಹೆಸರೇ ತಾಯಿ. ತಾಯಿ ಆಕೆ ಒಂದು ಶ್ರೇಷ್ಠ ಹಾಗೂ ಪ್ರೇರಣಾಶಕ್ತಿ ಎಂದು ವಿದ್ಯಾಭಾರತಿ ಕರ್ನಾಟಕ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಮಾತೃಭಾರತಿ ಜಿಲ್ಲಾ ಸಮಾವೇಶದಲ್ಲಿ ಉದ್ಘಾಟನಾ ಸಮಾರಂಭದ ದಿಕ್ಸೂಚಿ ಮಾತುಗಳಲ್ಲಿ ಮೈತ್ರೇಯಿ ಗುರುಕುಲದ ಸಾವಿತ್ರಿ ಮಾತಾಜಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ|ಕಮಲ ಪ್ರಭಾಕರ ಭಟ್, ಇವರು ಸ್ತ್ರೀಶಕ್ತಿಯ ಕುರಿತಾದ ಹಲವು ಪ್ರೇರಣೆ ನೀಡುವ ಕಥೆಗಳನ್ನು ಹೇಳಿ ಎಲ್ಲರೊಂದಿಗೆ ಪ್ರೀತಿ, ಗೌರವದಿಂದ ವರ್ತಿಸಬೇಕು ಎಂದು ತಿಳಿಸಿದರು. […]

ಚಿತ್ರಕಲಾ ಸ್ಪರ್ಧೆ - ಪ್ರಶಸ್ತಿ

ಚಿತ್ರಕಲಾ ಸ್ಪರ್ಧೆ – ಪ್ರಶಸ್ತಿ

Monday, December 23rd, 2019

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ವತಿಯಿಂದ ಕೆಯ್ಯೂರು ಜಯಕರ್ನಾಟಕ ಸಭಾಭವನ ಆವರಣದಲ್ಲಿ ಪುತ್ತೂರು ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. ಈ ಸಮ್ಮೇಳನದ ಪ್ರಯುಕ್ತ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಅವನಿ ಬೆಳ್ಳಾರೆ (7ನೇ ತರಗತಿ)- ದ್ವಿತೀಯ, ಅಗಮ್ಯ (7ನೇ ತರಗತಿ) ತೃತೀಯ, ಪ್ರಣಾಮ್ (7ನೇ ತರಗತಿ)- ಸಮಾಧಾನಕರ ಬಹುಮಾನ ಪಡೆದಿರುತ್ತಾರೆ. ಪ್ರೌಢ ವಿಭಾಗದಲ್ಲಿ ಶಿಶಿರ್ […]

ಡ್ರಾಯಿಂಗ್‌ಗ್ರೇಡ್ ಪರೀಕ್ಷೆ - ಶಾಲೆಗೆ 100% ಫಲಿತಾಂಶ

ಡ್ರಾಯಿಂಗ್‌ಗ್ರೇಡ್ ಪರೀಕ್ಷೆ – ಶಾಲೆಗೆ 100% ಫಲಿತಾಂಶ

Tuesday, December 17th, 2019

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು 2019-20 ನೇ ಸಾಲಿನಲ್ಲಿ ನಡೆಸಿದ ಡ್ರಾಯಿಂಗ್‌ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಿಂದ ಲೋವರ್‌ಗ್ರೇಡ್‌ನಲ್ಲಿ 14 ಮಕ್ಕಳು ಹಾಜರಾಗಿದ್ದು ಈ ಪೈಕಿ 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ ಮತ್ತು 2 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹೈಯರ್‌ಗ್ರೇಡ್‌ನಲ್ಲಿ 15 ಮಕ್ಕಳು ಹಾಜರಾಗಿದ್ದು 13 ಮಕ್ಕಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು 2 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಲೋವರ್‌ಗ್ರೇಡ್‌ನಲ್ಲಿ ಡಿಸ್ಟಿಂಕ್ಷನ್ ಪಡೆದವರು: ದೀಕ್ಷಿತಾ, ಧನುಷ್‌ಕುಮಾರ್ ವಿ, ಕೆ. ಪ್ರಾಪ್ತಿ, ಸೃಜನ್ ಕೆ, ಮಿಥುನ್ ವಿ. ಕೆ., ಲಕ್ಷ್ಮೀ ಸಾಗರ್, ಶಿವಾನಿ ಕೆ, […]

ಆವಿಷ್ಕಾರ ಮೇಕಥಾನ್ - ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ದ್ವಿತೀಯ

ಆವಿಷ್ಕಾರ ಮೇಕಥಾನ್ – ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ದ್ವಿತೀಯ

Monday, December 16th, 2019

ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದರಾಷ್ಟ್ರೀಯ ಮಟ್ಟದ ’ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್‌ ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್. ಭಟ್ ಮತ್ತು ಪ್ರಮಥ ಎಮ್. ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್‌ನ ಮಾಲಕರೂ ಆದ ಶ್ರೀ ರವಿನಾರಾಯಣ ಮತ್ತು ಶ್ರೀಮತಿ ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.

ವಿವೇಕೋತ್ಸವ 2019

ವಿವೇಕೋತ್ಸವ 2019

Monday, December 16th, 2019

ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜೊತೆಗೆ ಬದುಕಿನ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶಾಲೆಯಲ್ಲಿ ಡಿಸೆಂಬರ್ 8 ರಂದು ನಡೆದ ಶಾಲಾ ವಾರ್ಷಿಕೋತ್ಸವ ’ವಿವೇಕೋತ್ಸವ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭಾಷೆಗಳು ನಾಶವಾದಾಗ ಸಂಸ್ಕೃತಿಗಳು ನಾಶವಾದಂತೆ. ನಮ್ಮ ತನವನ್ನು ಉಳಿಸಿಕೊಳ್ಳಲು ನಾವು ಪ್ರಯತ್ನಿಸಬೇಕು ಎಂದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಲಾ ಹಿರಿಯ ವಿದ್ಯಾರ್ಥಿನಿ, ಕರ್ನಾಟಕ ಬ್ಯಾಂಕ್ ಉದ್ಯೋಗಿ ಶ್ರೀಮತಿ ಕೃಪಾಶಂಕರಿ ಮಾತನಾಡಿ, ಕನ್ನಡ ಮಾಧ್ಯಮ ದ ಬಗ್ಗೆ ಯಾರಿಗೂ ಹಿಂಜರಿಕೆ ಬೇಡ. […]

ಆಮಂತ್ರಣ : ವಿವೇಕೋತ್ಸವ 2019

ಆಮಂತ್ರಣ : ವಿವೇಕೋತ್ಸವ 2019

Thursday, December 5th, 2019
ರಾಜ್ಯಮಟ್ಟದ ಕ್ರೀಡಾಕೂಟ :  5 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಕ್ರೀಡಾಕೂಟ : 5 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Friday, November 22nd, 2019

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯಜಿಲ್ಲೆಯ ನಾಗಮಂಡಲ ತಾಲೂಕಿನ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನವೆಂಬರ್ 11 ರಿಂದ 14 ರ ತನಕ ನಡೆದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದ 4×100 ಮೀ ರಿಲೇ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯರಾದ ಪೂರ್ಣಲಕ್ಷ್ಮೀ (ಸಂಪ್ಯ ಬೈಲಾಡಿ ನಿವಾಸಿ ರವಿ ಮತ್ತು ಶೀಲಾವತಿ ದಂಪತಿಗಳ ಪುತ್ರಿ), ನಿಶಾ ಬಿ.ಎಮ್ (ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡ ಮತ್ತು […]

ಅಟಲ್ ಟಿಂಕರಿಂಗ್ ಫೆಸ್ಟ್ - ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಅಟಲ್ ಟಿಂಕರಿಂಗ್ ಫೆಸ್ಟ್ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

Wednesday, November 20th, 2019

ಶಾರದ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ತಲಪ್ಪಾಡಿ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ 2019-20 ನೇ ಸಾಲಿನ ಅಟಲ್ ಟಿಂಕರಿಂಗ್ ಫೆಸ್ಟ್‌ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಚಿನ್ಮಯ ಮಜಿ ’ಅಗ್ರಿಕಲ್ಚರ್ ಟೆಕ್ನೋಲಜಿ’ ವಿಷಯದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಪ್ರಣವ ಎಂ ಭಟ್ ಮತ್ತು ಪ್ರತೀಕ್ ಇವರ ತಂಡ ’ಸೃಜನಾತ್ಮಕ’ ವಿಷಯದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಹಾಗೆಯೇ ಶಿಶಿರ್ ಮತ್ತು ಆದರ್ಶ್ ಇವರ ತಂಡ ’ಸಂಪನ್ಮೂಲ ನಿರ್ವಹಣೆ’ ವಿಷಯದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಕನಕ ಜಯಂತಿ ಆಚರಣೆ

ಕನಕ ಜಯಂತಿ ಆಚರಣೆ

Friday, November 15th, 2019

ಕನಕದಾಸರ ಕಾವ್ಯ ಪರಂಪರೆಯಲ್ಲಿ ಜನಜೀವನದ ಭಾಷೆಯನ್ನು ಕಾಣಬೇಕು- ವೀಣಾಸರಸ್ವತಿ ವಿವೇಕಾನಂದ ಕನ್ನಡ ಶಾಲೆಯಲ್ಲಿ ’ಮಹತಿ’ ಕನ್ನಡ ಸಂಘದ ವತಿಯಿಂದ ಕನಕದಾಸರ ಜಯಂತಿ ಆಚರಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಮತಿ ವೀಣಾಸರಸ್ವತಿ ಇವರು ಕನಕದಾಸರ ಹಾಡುಗಳನ್ನು ಮಕ್ಕಳಿಂದ ಹಾಡಿಸುತ್ತಾ ಅರ್ಥ ವ್ಯಾಖ್ಯಾನದೊಂದಿಗೆ ಕಥೆ ಹೇಳುತ್ತಾ ಅವರ ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಜ್ಞಾನಮಾರ್ಗವು ನಮಗೆಲ್ಲಾ ಸ್ಪೂರ್ತಿಯಾಗಿದೆ ಎಂದರು.

’ಕ್ರೀಡಾಸ್ಪೂರ್ತಿ ನಿತ್ಯ ನಿರಂತರವಾಗಲಿ’ - ಸಹನಾ ಭವಿನ

’ಕ್ರೀಡಾಸ್ಪೂರ್ತಿ ನಿತ್ಯ ನಿರಂತರವಾಗಲಿ’ – ಸಹನಾ ಭವಿನ

Friday, November 15th, 2019

ಪ್ರತಿಯೊಬ್ಬ ವಿದ್ಯಾರ್ಥಿ ತನ್ನಲ್ಲಿರುವ ಕ್ರೀಡಾಸ್ಫೂರ್ತಿಯ ಸದ್ಭಳಕೆ ಮಾಡಿಕೊಂಡು ಜೀವನದಲ್ಲಿ ಮುನ್ನಡೆಯುವ ಶಕ್ತಿ ಪಡೆದುಕೊಂಡರೆ ಕ್ರೀಡಾ ದಿನಚರಿಯು ಅರ್ಥಪೂರ್ಣವಾಗುತ್ತದೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಾರ್ಷಿಕ ಕ್ರೀಡಾಕೂಟದ ಉದ್ಘಾಟಕರಾಗಿ ಆಗಮಿಸಿದ ಪುತ್ತೂರಿನ ಉದ್ಯಮಿಗಳಾದ ಶ್ರೀ ಕೂಡ್ಗಿ ಶ್ರೀಕಾಂತ್ ಶೆಣೈಯವರು ಮಾತನಾಡಿದರು. ಪುತ್ತೂರು ಇನ್ನರ್ ವೀಲ್ ಕ್ಲಬ್‌ನ ಸಹಯೋಗದೊಂದಿಗೆ ನಡೆದ ಶಾಲಾ ಕ್ರೀಡಾಕೂಟದ ಧ್ವಜವಂದನೆ ಸ್ವೀಕಾರ ಮಾಡಿದ ಶ್ರೀಮತಿ ಸಹನಾ ಭವಿನ್ ಇವರು ಮಕ್ಕಳ ದಿನಾಚರಣೆಗೆ ಶುಭಕೋರುತ್ತಾ ಮಕ್ಕಳ ಕ್ರೀಡಾಸ್ಫೂರ್ತಿ ನಿತ್ಯ ನಿರ೦ತರವಾಗಲಿ ಎಂದು ಶುಭ ಹಾರೈಸಿದರು. ಅಭ್ಯಾಗತರಾಗಿ […]

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ 7 ಕ್ರೀಡಾಪಟುಗಳು ಆಯ್ಕೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ 7 ಕ್ರೀಡಾಪಟುಗಳು ಆಯ್ಕೆ

Saturday, November 9th, 2019

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 17 ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಅಮೀರ್- ಹರ್ಡಲ್ಸ್‌ನಲ್ಲಿ – ಪ್ರಥಮ, ಷಣ್ಮುಖ- ಎತ್ತರ ಜಿಗಿತದಲ್ಲಿ ದ್ವಿತೀಯ ಹಾಗೂ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಪೂರ್ಣಲಕ್ಷ್ಮೀ ಉದ್ದಜಿಗಿತ – ಪ್ರಥಮ, 100 ಮೀ – ದ್ವಿತೀಯ, 200 ಮೀ- ದ್ವಿತೀಯ, 4×100 ಮೀ ರಿಲೇ ಪ್ರಥಮ ಹಾಗೂ ಮನ್ವಿತಾ – 4×100 ಮೀ […]

ಕಲಾಶ್ರೀ - ರಾಜ್ಯಮಟ್ಟಕ್ಕೆ ಆಯ್ಕೆ

ಕಲಾಶ್ರೀ – ರಾಜ್ಯಮಟ್ಟಕ್ಕೆ ಆಯ್ಕೆ

Friday, November 8th, 2019

ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾಮಟ್ಟದ ’ಕಲಾಶ್ರೀ’ ಆಯ್ಕೆ ಶಿಬಿರದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶ್ರೇಯಾ ಆಚಾರ್ ’ಸೃಜನಾತ್ಮಕ ಪ್ರದರ್ಶನ’ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ’ಕಲಾಶ್ರೀ’ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಅಲ್ಲದೆ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾಕಾರಂಜಿ ವೈಯಕ್ತಿಕ ಯಕ್ಷಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಈಕೆ ಯಕ್ಷಗಾನ ಅಭ್ಯಾಸವನ್ನು ಶಾಲಾ ಸಹಶಿಕ್ಷಕರಾದ ಶ್ರೀ ಚಂದ್ರಶೇಖರ ಸುಳ್ಯಪದವು ಹಾಗೂ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಇವರಿಂದ […]

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ - ಜಿಲ್ಲಾಮಟ್ಟಕ್ಕೆ ಆಯ್ಕೆ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ – ಜಿಲ್ಲಾಮಟ್ಟಕ್ಕೆ ಆಯ್ಕೆ

Friday, November 8th, 2019

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ದ.ಕ., ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಗಮ್ಯ – ಪ್ರಾಥಮಿಕ ವಿಭಾಗದ ಜ್ಞಾನ ಮಂಜೂಷಾ ಪುಸ್ತಕಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಪ್ರೌಢಶಾಲಾ ವಿಭಾಗದ ಜ್ಞಾನ ಪೀಯೂಷಾ ಪುಸ್ತಕಾಧಾರಿತ ಭಾಷಣ […]

ಭರತನಾಟ್ಯ - ಗಾನ- ವೈಭವ

ಭರತನಾಟ್ಯ – ಗಾನ- ವೈಭವ

Thursday, November 7th, 2019

ಯಾವುದೇ ಕಲೆಯ ಕಲಿಕೆ- ಅವಿರತ ಶ್ರಮ ಮತ್ತು ಕ್ರಿಯಾತ್ಮಕತೆಯನ್ನು ಅಪೇಕ್ಷಿಸುತ್ತದೆ. ವ್ಯಕ್ತಿಯನ್ನು ಅರಳಿಸುವ ಕೆಲಸ ಕಲೆಯಿಂದಾಗುತ್ತದೆ. ಆದ್ದರಿಂದ ಅದಕ್ಕೆ ತೆರೆದುಕೊಳ್ಳುವ ಮನಸ್ಸು ಮತ್ತು ಬುದ್ಧಿ ನಮ್ಮದಾಗಬೇಕು ಎಂದವರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರು ಹಾಗೂ ಶ್ರೀ ಶಾರದಾ ಕಲಾ ಶಾಲೆ ಪುತ್ತೂರು ಇದರ ನೃತ್ಯಗುರುಗಳಾದ ವಿದ್ವಾನ್ ಸುದರ್ಶನ್ ಎಮ್.ಎಲ್ ಇವರು. ವಿವೇಕಾನಂದ ಕನ್ನಡ ಶಾಲೆಯ ಭರತನಾಟ್ಯ ಹಾಗೂ ಸಂಗೀತ ವಾರ್ಷಿಕೋತ್ಸವ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದರು. ಶಾಲೆಯ ಅಧ್ಯಕ್ಷರಾದ ಅಚ್ಯುತ ನಾಯಕ್ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಶಾಲೆಯಲ್ಲಿ […]

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ - ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ – ರಾಜ್ಯಮಟ್ಟಕ್ಕೆ ಆಯ್ಕೆ

Thursday, November 7th, 2019

ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ ಮತ್ತು ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ, ಬಂಟ್ವಾಳ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ನಡೆದಂತಹ ದಕ್ಷಿಣಕನ್ನಡ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2019-20 ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಶಿರ್ ಎಸ್, ಕೌಶಿಕ್ ಎ.ಜಿ, ಸಮೀಕ್ಷಾ, ಮುಖೇಶ್ ಕೃಷ್ಣ ಇವರ ತಂಡ ಕಲೋತ್ಸವ ದೃಶ್ಯ ಕಲೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತದೆ. ಮತ್ತು ಪ್ರೌಢಶಾಲಾ ವೈಯಕ್ತಿಕ ಯಕ್ಷಗಾನ ಸ್ಪರ್ಧೆಯಲ್ಲಿ ಕು. ಶ್ರೇಯಾ ಪ್ರಥಮ ಸ್ಥಾನ ಹಾಗೂ […]

ವಿನೂತನ ರೀತಿಯಲ್ಲಿ ರಾಜ್ಯೋತ್ಸವ ಆಚರಣೆ

ವಿನೂತನ ರೀತಿಯಲ್ಲಿ ರಾಜ್ಯೋತ್ಸವ ಆಚರಣೆ

Friday, November 1st, 2019

10 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತು ಇದೀಗ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಂತಹ ಶಾಲಾ ಹಿರಿಯ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆದಂತಹ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕದ ಬಾವುಟ ನೀಡುವ ಮೂಲಕ ಉದ್ಘಾಟಿಸಲಾಯಿತು. ಸಂಗೀತ ಕ್ಷೇತ್ರದಲ್ಲಿರುವ ಶ್ರೀಮತಿ ಶ್ರೇಯಾ ಕೊಳತ್ತಾಯ, ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವ ಅನೀಶ್ ಬಡೆಕ್ಕಿಲ, ಉಪನ್ಯಾಸಕಿಯಾಗಿರುವ ಶ್ರೀಮತಿ ಚೈತ್ರಾ, ಯೋಗ ತರಗತಿಗಳನ್ನು ನಡೆಸುತ್ತಾ ಸ್ವಉದ್ಯೋಗ ಕ್ಷೇತ್ರದಲ್ಲಿರುವ ಶ್ರೀಮತಿ ಮಾನಸ, ಕೃಷಿಕ್ಷೇತ್ರದಲ್ಲಿರುವ ಶ್ರೀಮತಿ ಪ್ರಾರ್ಥನಾ, ಕ್ರೀಡಾಕ್ಷೇತ್ರದಲ್ಲಿರುವ ಕಾರ್ತಿಕ್, ವಕೀಲ ವೃತ್ತಿಯಲ್ಲಿರುವ ವಿರೂಪಾಕ್ಷ, ಸಹಕಾರಿ ಕ್ಷೇತ್ರದಲ್ಲಿರುವ ಅಶ್ವಥ್ ಇವರು ಶಾಲಾ […]

ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ

ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ

Thursday, October 31st, 2019
ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಷ್ಟ್ರಮಟ್ಟಕ್ಕೆ ಆಯ್ಕೆ

Tuesday, October 29th, 2019

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯ 14 ರ ವಯೋಮಾನದ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಸಂಹಿತಾ ಶರ್ಮ ಬಿ.ಎಸ್‌. ಇವರು ಸ್ಟೇಟ್‌ ಚಾಂಪಿಯನ್ ಆಗಿ ರಾಷ್ಟ್ರ ಮಟ್ಟ (S.G.F.I) ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಟೀಮ್‌ ಕ್ಯಾಪ್ಟನ್ ಆಗಿ ರಾಷ್ಟ್ರಮಟ್ಟದಲ್ಲಿ ಇವರ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ರಾಜೇಶ್‌ಕೃಷ್ಣ ಪ್ರಸಾದ್ ಮತ್ತು ಸೀಮಾ ಶರ್ಮ ದಂಪತಿಗಳ ಪುತ್ರಿ.

ವಾಲಿಬಾಲ್-  ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ ಗೆ ಆಯ್ಕೆ

ವಾಲಿಬಾಲ್-  ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ ಗೆ ಆಯ್ಕೆ

Thursday, October 24th, 2019

ವಿದ್ಯಾಭಾರತಿ ವತಿಯಿಂದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ಜ್ವಾಲಾದೇವಿ ಸರಸ್ವತಿ ವಿದ್ಯಾಮಂದಿರ ಪ್ರಯಾಗ್‌ರಾಜ್‌ ಉತ್ತರಪ್ರದೇಶದಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಜ್ಞಾ, ಪೂಜಾಶ್ರೀ, ಪೂರ್ಣಿಮಾ, ಶ್ರೀಲತಾ, ಸ್ವಸ್ತಿಕ ಇವರ ವಾಲಿಬಾಲ್‌ ತಂಡವು ಪ್ರಥಮ ಸ್ಥಾನ ಪಡೆದು ಸ್ಕೂಲ್‌ ಗೇಮ್ಸ್ ಫೆಡರೇಶನ್‌ ಆಫ್‌ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.

ತಾಲೂಕು ಮಟ್ಟದ ಕ್ರೀಡಾಕೂಟ : ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

ತಾಲೂಕು ಮಟ್ಟದ ಕ್ರೀಡಾಕೂಟ : ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

Wednesday, October 23rd, 2019

ತಾಲೂಕು ಮಟ್ಟದ ಕ್ರೀಡಾಕೂಟ- ‘ವಿವೇಕ ಕ್ರೀಡಾ ಸಂಭ್ರಮ’ದಲ್ಲಿ 3 ಚಿನ್ನದ ಪದಕಗಳೊಂದಿಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಗಳಿಸಿದ ಮಹಮ್ಮದ್ ಆದಿಲ್  ದ.ಕ.ಜಿ.ಪಂ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟವು ವಿವೇಕಾನಂದ ವಿದ್ಯಾಸಂಸ್ಥೆ ತೆಂಕಿಲದ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ವಿವರ  17ರ ವಯೋಮಾನದ ಬಾಲಕರ ವಿಭಾಗದಲ್ಲಿ 1. ಮಹಮ್ಮದ್ ಆದಿಲ್ -100ಮೀ, 2೦೦ಮೀ, ಉದ್ದಜಿಗಿತ, ರಿಲೇ – ಪ್ರಥಮ ಮತ್ತು […]

ಜ್ಞಾನ - ವಿಜ್ಞಾನ ಮೇಳ : ರಾಜ್ಯಮಟ್ಟದಲ್ಲಿ ಪ್ರಥಮ

ಜ್ಞಾನ – ವಿಜ್ಞಾನ ಮೇಳ : ರಾಜ್ಯಮಟ್ಟದಲ್ಲಿ ಪ್ರಥಮ

Wednesday, October 23rd, 2019

ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜೈ ಗೋಪಾಲ ಗರೋಡಿಯಾ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಣವ ಎಂ. ಭಟ್ ಮತ್ತು ಪ್ರಮಥ ಎಮ್. ಭಟ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಮತ್ತು 10 ನೇ ತರಗತಿ ವಿದ್ಯಾರ್ಥಿ ಶಿಶಿರ್ ಗಣಿತ ಮಾದರಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣ ಮಧ್ಯ ಕ್ಷೇತ್ರೀಯದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.

ವಿಜ್ಞಾನ ಮಾದರಿ ಸ್ಪರ್ಧೆ : ಜಿಲ್ಲಾಮಟ್ಟಕ್ಕೆ ಆಯ್ಕೆ

ವಿಜ್ಞಾನ ಮಾದರಿ ಸ್ಪರ್ಧೆ : ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, October 22nd, 2019

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸಂತ ವಿಕ್ಟರ್ ಪ್ರೌಢಶಾಲೆಯಲ್ಲಿ ನಡೆದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಪ್ರಣವ ಭಟ್ ವಿಜ್ಞಾನ ಮಾದರಿಯಲ್ಲಿ ಪ್ರಥಮ ಮತ್ತು 10 ನೇ ತರಗತಿಯ ಶಿಶಿರ್ ಮತ್ತು ಆದರ್ಶ ಗಣಿತ ಮಾದರಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ

ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ

Friday, October 4th, 2019

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 4-10-2019 ರಂದು ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಜಯರಾಮ್ ಭಟ್ ನೇತೃತ್ವದಲ್ಲಿ ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ ಪೂಜಾ ವಿಧಿ – ವಿಧಾನಗಳನ್ನು ನೆರವೇರಿದವು. ಸರಸ್ವತಿ ಪೂಜೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಅಕ್ಷರಾಭ್ಯಾಸದ ಮೂಲಕ ತಮ್ಮ ಜ್ಞಾನಾರಂಭಕ್ಕೆ ಸುಮಾರು ಪುಟಾಣಿಗಳು ಶುಭ ಮೂಹೂರ್ತವಿರಿಸಿದರು. ಮಕ್ಕಳಿಗೆ ಆರತಿ ಎತ್ತಿ ಶಾರದ ಮಾತೆಗೆ ಪುಷ್ಫ ನಮನವನ್ನು ಸಲ್ಲಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಮುಖ್ಯ ಗುರುಗಳೂ, ಶಿಕ್ಷಕ- ಶಿಕ್ಷಕೇತರ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನವದಂಪತಿ ಸಮಾವೇಶ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನವದಂಪತಿ ಸಮಾವೇಶ

Tuesday, October 1st, 2019

ಬದಲಾಗುತ್ತಿರುವ ಕುಟುಂಬ ಚಿತ್ರಣದಲ್ಲಿ ಸಕರಾತ್ಮಕ ನಂಬಿಕೆ ದೃಷ್ಟಿಕೋನವನ್ನು ಬೆಳೆಸುವ ನಿಟ್ಟಿನಲ್ಲಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅನ್ಯಾನ್ಯ ವಿದ್ಯಾಸಂಸ್ಥೆಗಳ ಸಹಯೋಗದೊಂದಿಗೆ ನವದಂಪತಿ ಸಮಾವೇಶ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಹಿರಿಯ ದಂಪತಿ ಕೆ. ಸುಬ್ರಹ್ಮಣ್ಯ ಭಟ್ ಹಾಗೂ ಹೇಮಾವತಿ ಕೆ.ಎಸ್. ಭಟ್ ದಂಪತಿ ಹಾರಾರ್ಪಣೆ ಮಾಡಿಕೊಳ್ಳುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ನವದಂಪತಿಗಳನ್ನು ಕಾಲಿಗೆ ನೀರು ಹಾಕಿ ಹಣೆಗೆ ಅರಸಿನ ಕುಂಕುಮ ಹಚ್ಚಿ ಸ್ವಾಗತಿಸಲಾಯಿತು. […]

ಪ್ರತಿಭಾ ಕಾರಂಜಿ - ಯಕ್ಷಗಾನ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಪ್ರತಿಭಾ ಕಾರಂಜಿ – ಯಕ್ಷಗಾನ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Saturday, September 21st, 2019

ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ’ಪ್ರತಿಭಾ ಕಾರಂಜಿ’ ಯಕ್ಷಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ’ಯಕ್ಷ ಚಿಣ್ಣರು’ ಭಾಗವಹಿಸಿ ಕಿರಿಯ, ಹಿರಿಯ ಮತ್ತು ಪ್ರೌಢಶಾಲಾ ವೈಯಕ್ತಿಕ ಸ್ಪರ್ಧೆಯ ಎಲ್ಲಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿರಿಯ ವಿಭಾಗದಲ್ಲಿ ಧನುಷ್, ಹಿರಿಯ ವಿಭಾಗದಲ್ಲಿ ಕು.ಅವನಿ ಬೆಳ್ಳಾರೆ, ಪ್ರೌಢವಿಭಾಗದಲ್ಲಿ ಕು. ಶ್ರೇಯಾ ಆಚಾರ್ ಸ್ಪರ್ಧಿಸಿದ್ದರು. ಅದೇ ರೀತಿ ಗುಂಪು ವಿಭಾಗ ಸ್ಪರ್ಧೆಯಲ್ಲಿ ಶಾಲಾ ತಂಡ ದ್ವಿತೀಯ ಸ್ಥಾನ ಗಳಿಸಿಕೊಂಡಿದೆ. […]

ವಿದ್ಯಾರ್ಥಿಗಳಿಗೆ ಭಾವನಾತ್ಮಕ ದೃಷ್ಟಿಯಿಂದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲ್ಪಟ್ಟ ಶಾಲೆ ನಮ್ಮ ವಿದ್ಯಾ ಮಂದಿರ- ವಸಂತ ಸುವರ್ಣ

ವಿದ್ಯಾರ್ಥಿಗಳಿಗೆ ಭಾವನಾತ್ಮಕ ದೃಷ್ಟಿಯಿಂದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲ್ಪಟ್ಟ ಶಾಲೆ ನಮ್ಮ ವಿದ್ಯಾ ಮಂದಿರ- ವಸಂತ ಸುವರ್ಣ

Wednesday, September 18th, 2019

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಭಾಗಿತ್ವದಲ್ಲಿ ಪುತ್ತೂರು ವೃತ್ತಮಟ್ಟದ ಪ್ರೌಢಶಾಲಾ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2019-20 ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿಷ್ಣು ಪ್ರಸಾದ್ ಸಿ. ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯ ವಸಂತ ಸುವರ್ಣ ಮಾತನಾಡಿ ಗುರು ಪರಂಪರೆಗೆ ಮೊದಲ ಗೌರವ. ಗುರುವಿನ ಮುಖೇನ ಕಲಿತ ಕಲಿಕೆ ಶುದ್ಧ ಹಾಗೂ ಶಾಶ್ವತವಾಗುವುದು ಎಂದರು. […]

ಜಿಲ್ಲಾ ಮಟ್ಟದ ಜ್ಞಾನ - ವಿಜ್ಞಾನ ಮೇಳ : ಶಾಲೆಗೆ ಪ್ರಶಸ್ತಿ

ಜಿಲ್ಲಾ ಮಟ್ಟದ ಜ್ಞಾನ – ವಿಜ್ಞಾನ ಮೇಳ : ಶಾಲೆಗೆ ಪ್ರಶಸ್ತಿ

Tuesday, September 17th, 2019

ವಿದ್ಯಾಭಾರತಿ ಕರ್ನಾಟಕ, ದ.ಕ. ಜಿಲ್ಲೆ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಪುತ್ತೂರು ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಜ್ಞಾನ- ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಶಿಶುವರ್ಗ – ವಿಜ್ಞಾನ ಪ್ರದರ್ಶನ : ಚಿರಂತನ ಕೆ.ವಿ (ಪ್ರಥಮ), ನಿಸರ್ಗ ತೋಟರ್ (ತೃತೀಯ), ವಿಜ್ಞಾನ ರಸಪ್ರಶ್ನೆ – ಸ್ಕಂದ ಬಳಕ್ಕುರಾಯ, ಶಿವಾನಿ ಎಸ್‌ರೈ, ಪವನ್ ಪಿ.ಎ. ( ಪ್ರಥಮ), ವಿಜ್ಞಾನ ಪ್ರಯೋಗ-ಅರ್ಜುನ್ ಡಿ. (ಪ್ರಥಮ) ಬಾಲವರ್ಗ- ವಿಜ್ಞಾನ ಪ್ರದರ್ಶನ – ಪ್ರಣ […]

ಪುತ್ತೂರು ವೃತ್ತಮಟ್ಟದ ಪ್ರೌಢಶಾಲಾ ಪ್ರತಿಭಾಕಾರಂಜಿ - ಶಾಲೆಗೆ ಸಮಗ್ರ ಪ್ರಶಸ್ತಿ

ಪುತ್ತೂರು ವೃತ್ತಮಟ್ಟದ ಪ್ರೌಢಶಾಲಾ ಪ್ರತಿಭಾಕಾರಂಜಿ – ಶಾಲೆಗೆ ಸಮಗ್ರ ಪ್ರಶಸ್ತಿ

Monday, September 16th, 2019

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇವರ ಸಹಯೋಗದಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವವು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದಿದ್ದು ಇದರಲ್ಲಿ ಶಾಲೆಯು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಕನ್ನಡ ಭಾಷಣ- ಸಿಂಚನಾ ಟಿ (ಪ್ರಥಮ), ಹಿಂದಿ ಭಾಷಣ-ಅನಘಾ ಭಟ್(ಪ್ರಥಮ),ಸಂಸ್ಕೃತ ಭಾಷಣ- ಪಲ್ಲವಿ (ತೃತೀಯ), ತೆಲುಗು ಭಾಷಣ- ಕೌಸಲ್ಯ ಎನ್. (ಪ್ರಥಮ), ತಮಿಳು ಭಾಷಣ- ಪ್ರಜೀತ್ (ಪ್ರಥಮ), ತುಳು ಭಾಷಣ […]

ಖೋ-ಖೋ ಪಂದ್ಯಾಟ- ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಖೋ-ಖೋ ಪಂದ್ಯಾಟ- ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

Saturday, September 14th, 2019

ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ ಇದರ ವತಿಯಿಂದ ಜಿಲ್ಲಾಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟವು ಬಂಟ್ವಾಳ ತಾಲೂಕಿನ ಮೂಡು ಪಡುಕೋಡಿಯಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಬಾಲಕ-ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಶ್ನಿಸುವ ಗುಣ ವೈಜ್ಞಾನಿಕ ಮನೋಭಾವದ ತಳಹದಿಯಾಗಿದೆ- ಪುರಂದರ ಭಟ್ ಕಾಯರ

ಪ್ರಶ್ನಿಸುವ ಗುಣ ವೈಜ್ಞಾನಿಕ ಮನೋಭಾವದ ತಳಹದಿಯಾಗಿದೆ- ಪುರಂದರ ಭಟ್ ಕಾಯರ

Tuesday, September 10th, 2019

ವಿದ್ಯಾರ್ಥಿಗಳು ಜೀವನದಲ್ಲಿ ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಂಡಾಗ ವೈಜ್ಞಾನಿಕ ಯೋಚನಾ ಸಾಮರ್ಥ್ಯ ವೃದ್ಧಿಯಾಗುವುದು. ಆ ಮೂಲಕ ನಮ್ಮನ್ನು ನಾವು ಬೆಳೆಸಲು ಸಾಧ್ಯ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿಜ್ಞಾನ ಶಿಕ್ಷಕರಾದ ಶ್ರೀ ಪುರಂದರ ಭಟ್ ಕಾಯರ ಇವರು ನುಡಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಜ್ಞಾನ – ವಿಜ್ಞಾನ- ಗಣಿತ ಮೇಳದ ಉದ್ಘಾಟಕರಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾಭಾರತಿ ಕರ್ನಾಟಕದ ಕಾರ್ಯದರ್ಶಿಗಳಾದ ಶ್ರೀ ಲೋಕಯ್ಯ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಂತರ 2018-19 ನೇ […]

ಯೋಗಾಸನ ಸ್ಪರ್ಧೆ - ವಿಭಾಗಮಟ್ಟಕ್ಕೆ ಆಯ್ಕೆ

ಯೋಗಾಸನ ಸ್ಪರ್ಧೆ – ವಿಭಾಗಮಟ್ಟಕ್ಕೆ ಆಯ್ಕೆ

Thursday, August 29th, 2019

ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಸರ್‌ಗದ್ದೆ ಬೆಳುವಾಯಿ ಇವರ ಸಹಯೋಗದಲ್ಲಿ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಸರ್‌ಗದ್ದೆ ಬೆಳುವಾಯಿ ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸುಚಿತಾ ಕೆ.ಎಸ್(9ನೇ ತರಗತಿ), ಹೇಮಶ್ರೀ (10ನೇ ತರಗತಿ), ಲಿಖಿತ್ ಗೌಡ (10ನೇ ತರಗತಿ), ಪುನೀತ್ ರಾಜ್ (10ನೇ ತರಗತಿ) ಭಾಗವಹಿಸಿರುತ್ತಾರೆ. ಇದರಲ್ಲಿ ಪ್ರೌಢಶಾಲಾ ಗುಂಪು ವಿಭಾಗದಲ್ಲಿ 10೦ನೇ ತರಗತಿ […]

ತ್ರೋಬಾಲ್ - ರಾಜ್ಯಮಟ್ಟಕ್ಕೆ ಆಯ್ಕೆ

ತ್ರೋಬಾಲ್ – ರಾಜ್ಯಮಟ್ಟಕ್ಕೆ ಆಯ್ಕೆ

Monday, August 26th, 2019

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಹಾಗೂ ಶುಭೋದಯ ವಿದ್ಯಾಲಯ ವಾಮಂಜೂರು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟವು ಶುಭೋದಯ ವಿದ್ಯಾಲಯ ವಾಮಂಜೂರು ಮಂಗಳೂರು ಇಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರು ಪ್ರಥಮ ಸ್ಥಾನ ಪಡೆದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಮತ್ತು ಪ್ರೌಢಶಾಲಾ ಬಾಲಕರಲ್ಲಿ ಚರಣ್ (10ನೇ ತರಗತಿ), ವಿನಾಯಕ (10ನೇ ತರಗತಿ) ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಪ್ರಾಥಮಿಕ ವಿಭಾಗದ ಬಾಲಕರು […]

ಖೋ-ಖೋ ಪಂದ್ಯಾಟ - ರಾಜ್ಯಮಟ್ಟಕ್ಕೆಆಯ್ಕೆ

ಖೋ-ಖೋ ಪಂದ್ಯಾಟ – ರಾಜ್ಯಮಟ್ಟಕ್ಕೆಆಯ್ಕೆ

Monday, August 26th, 2019

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶಾರದಾ ವಿದ್ಯಾನಿಕೇತನ ತಲಪಾಡಿ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟ ಶಾರದಾ ವಿದ್ಯಾನಿಕೇತನ ತಲಪಾಡಿ ಮಂಗಳೂರು ಇಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರು ಹಾಗೂ ಬಾಲಕರು ಪ್ರಥಮ ಮತ್ತು ಪ್ರಾಥಮಿಕ ವಿಭಾಗದ ಬಾಲಕಿಯರು ಪ್ರಥಮ ಸ್ಥಾನ ಪಡೆದು ಅಮೃತ ಭಾರತಿ ವಿದ್ಯಾಲಯ ಹೆಬ್ರಿ, ಉಡುಪಿ ಜಿಲ್ಲೆ ಇಲ್ಲಿ ನಡೆಯುವ ರಾಜ್ಯಮಟ್ಟದ ಖೋ-ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ […]

ಜಿಲ್ಲಾಮಟ್ಟದ ಇಂಡಿಪೆಂಡೆಂಟ್‌ ಕಪ್- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ

ಜಿಲ್ಲಾಮಟ್ಟದ ಇಂಡಿಪೆಂಡೆಂಟ್‌ ಕಪ್- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ

Tuesday, August 20th, 2019

ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಇಂಡಿಪೆಂಡೆಂಟ್‌ ಕಪ್ – 2019 ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನವನ್ನು 2ನೇ ಬಾರಿ ಪಡೆದುಕೊಂಡಿರುತ್ತದೆ.

ಯೋಗಾಸನ ಸ್ಪರ್ಧೆ - ಸಮಗ್ರತಂಡ ಪ್ರಶಸ್ತಿ

ಯೋಗಾಸನ ಸ್ಪರ್ಧೆ – ಸಮಗ್ರತಂಡ ಪ್ರಶಸ್ತಿ

Tuesday, August 20th, 2019

ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಲಿಖಿತ್‌ಗೌಡ ಮತ್ತು ಪುನೀತ್‌ರಾಜ್‌ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಹೇಮಶ್ರೀ ಎಂ ಮತ್ತು ಸುಚಿತಾ ಕೆ. ಎಸ್‌. ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮತ್ತು ಪ್ರೌಢಶಾಲಾ ವಿಭಾಗದ ಬಾಲಕರು ಹಾಗೂ […]

ಜನರು ಸಂಘಟಿತರಾದಾಗ ಸದೃಢ ದೇಶವನ್ನು ಕಟ್ಟಬಹುದು - ಶ್ರೀಯುತ ಕರುಣಾಕರ ಉಪಾಧ್ಯಾಯ

ಜನರು ಸಂಘಟಿತರಾದಾಗ ಸದೃಢ ದೇಶವನ್ನು ಕಟ್ಟಬಹುದು – ಶ್ರೀಯುತ ಕರುಣಾಕರ ಉಪಾಧ್ಯಾಯ

Saturday, August 17th, 2019

ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವುದನ್ನು ರಕ್ಷೆಯ ರಚನೆಯಲ್ಲಿ ನಾವು ಕಾಣಬಹುದು. ರಕ್ಷೆಯನ್ನು ಕಟ್ಟುವುದರಿಂದ ಪರಸ್ಪರರಲ್ಲಿ ಸಹೋದರತ್ವ ಅದನ್ನು ಪರಿಹರಿಸಲು ಧಾವಿಸುವ ಗುಣಗಳು ಜಾಗೃತಗೊಳ್ಳುತ್ತವೆ. ಜನರ ನಡುವೆ ಒಮ್ಮತವಿದ್ದು ಸಂಘಟಿತರಾದಾಗ ಸದೃಢ ದೇಶವನ್ನು ಕಟ್ಟಬಹುದು ಎನ್ನುತ್ತಾ ರಕ್ಷೆಯ ಮಹತ್ವ ಸಾರುವ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಂಗಗಳನ್ನು ಉದಾಹರಿಸಿದವರು ಯೋಗ ಶಿಕ್ಷಕರಾದ ಶ್ರೀಯುತ ಕರುಣಾಕರ ಉಪಾಧ್ಯಾಯ ಇವರು. ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಶ್ರೀಯ್ತ ಅಚ್ಯುತ […]

73 ನೇ ಸ್ವಾತಂತ್ರ್ಯ ದಿನಾಚರಣೆ

73 ನೇ ಸ್ವಾತಂತ್ರ್ಯ ದಿನಾಚರಣೆ

Friday, August 16th, 2019

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ತುಳುನಾಡ ಕನ್‌ಸ್ಟ್ರಕ್ಷನ್‌ನಲ್ಲಿ ಸಿವಿಲ್ ಇಂಜಿನಿಯರ್‌ ಆಗಿರುವ ಶ್ರೀಯುತ ತುಷಾರ್‌ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿ ಅಭಿರಾಮ್ ಭಟ್ ಮಾತನಾಡಿ ನಮ್ಮ ದೇಶ ಬೆಳೆದು ಬಂದ ಹಾದಿ, ಯುದ್ಧದ ಸಂದರ್ಭದಲ್ಲಿ ಭಾರತ ಮೆರೆದ ಶೌರ್ಯತೆ, ಮತ್ತು ಭಾರತ ವಿಶ್ವಗುರು ಹೇಗೆ ಆಗಬಲ್ಲದು ಎಂಬ ಬಗ್ಗೆ ಸ್ಪಷ್ಟ ಅರಿವನ್ನು ಮೂಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ ಕಾರ್ಯ […]

ಯೋಗಾಸನ ಮತ್ತು ಕರಾಟೆ ಸ್ಪರ್ಧೆ - ಅಖಿಲ ಭಾರತ ಮಟ್ಟಕ್ಕೆ ಆಯ್ಕೆ

ಯೋಗಾಸನ ಮತ್ತು ಕರಾಟೆ ಸ್ಪರ್ಧೆ – ಅಖಿಲ ಭಾರತ ಮಟ್ಟಕ್ಕೆ ಆಯ್ಕೆ

Monday, August 12th, 2019

ವಿದ್ಯಾಭಾರತಿ ಕರ್ನಾಟಕ ಪ್ರಾಂತ ಮಟ್ಟದ ಯೋಗಾಸನ ಮತ್ತು ಕರಾಟೆ ಸ್ಪರ್ಧೆ ಜೆ.ಜಿ.ಆರ್.ವಿ.ಕೆ ಶಾಲೆ ರಾಮಮೂರ್ತಿ ನಗರ ಬೆಂಗಳೂರು ಇಲ್ಲಿ ನಡೆಯಿತು. ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ರಿತೇಶ್ (10ನೇ ತರಗತಿ) ಮತ್ತು ಪ್ರಮಥ ಎಂ. ಭಟ್ (6ನೇ ತರಗತಿ) ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಖಿಲ ಭಾರತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೆಯೇ ಯೋಗಾಸನ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದ ಬಾಲಕರ ವಿಭಾಗದಲ್ಲಿ ಪುನೀತ್, ರಕ್ಷಿತ್, ಕೌಶಿಕ್, ಲಿಖಿತ್, ಕಾರ್ತಿಕ್‌ ದ್ವಿತೀಯ ಸ್ಥಾನ ಪಡೆದಿರುತ್ತಾರೆ. […]

ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ

ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ

Saturday, August 10th, 2019

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರದ ಉದ್ಘಾಟನೆಯನ್ನು ಶಾಲೆಯ ಸಂಚಾಲಕರಾದ ಶ್ರೀ ರವಿ ನಾರಾಯಣರವರು ನೆರವೇರಿಸಿ ಶಿಕ್ಷಕರು ನಿರಂತರವಾಗಿ ಹೊಸದಾದ ವಿಚಾರಗಳಿಗೆ ತೊಡಗಿಸಿಕೊಳ್ಳಬೇಕು ಎಂದರು. ನಂತರ ವಿದುಷಿ ಮಂಜುಳಾ ಸುಬ್ರಹ್ಮಣ್ಯರವರು ಶಿಕ್ಷಕರಿಗಾಗಿ ‘ಸಾಂಸ್ಕೃತಿಕ ಪರಿಕಲ್ಪನೆಯ ಬೋಧನಾ ವಿಧಾನ’ ಎಂಬ ವಿಷಯದ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಶೃತಿ, ತಾಳ, ಹಸ್ತ, ದೈಹಿಕ ಚಲನೆ ಮತ್ತು ಭಾವಾಭಿನಯಗಳೊಂದಿಗೆ ಪಠ್ಯ ವಿಷಯವನ್ನು ಮಕ್ಕಳಿಗೆ […]

Highslide for Wordpress Plugin