ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ

Tuesday, December 5th, 2023

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ)ಇದರ ಪುತ್ತೂರು ತಾಲೂಕು ಮಟ್ಟದ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಮಂಗಳದುರ್ಗಾ ಟಿ.ಆರ್ ಶ್ಲೋಕ ಕಂಠಪಾಠ (ಜ್ಞಾನವಾರಿಧಿ)ದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.               ಮತ್ತು ಜ್ಞಾನ ಶರಧಿ ಪುಸ್ತಕಾಧಾರಿತ ಭಾಷಣ ಸ್ಪರ್ಧೆಯಲ್ಲಿ 5ನೇ ತರಗತಿಯ ಶ್ರೀ ಕೃಷ್ಣ.ಬಿ ತೃತೀಯ ಸ್ಥಾನ ಗಳಿಸಿದ್ದಾನೆ.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ - 5-10

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – 5-10

Tuesday, December 5th, 2023

‘ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಇಂದು ಅನೇಕ ಸ್ಪರ್ಧಾತ್ಮಕ ಕಾರ್ಯಕ್ರಮಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಉತ್ತಮ ಸಾಧನೆ ಮಾಡುತ್ತಿದ್ದಾರೆ’ ಎಂದು ಶಾಲೆಯಲ್ಲಿ ನಡೆದ 5ರಿಂದ 10ನೇ ತರಗತಿಯವರೆಗಿನ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಭಾಧ್ಯಕ್ಷ ಸ್ಥಾನವನ್ನು ವಹಿಸಿದ ಕೃಷಿಕರು, ಹೈನುಗಾರಿಕೆ ತಜ್ಞರು ಆಗಿರುವ ಶ್ರೀ ಈಶ್ವರ ಭಟ್ ಪೆರುವಾಜೆ ಇವರು ನುಡಿದರು.                         […]

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ - 1-4

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – 1-4

Tuesday, December 5th, 2023

ಉತ್ತಮ ಸಂಸ್ಕಾರ ಸಂಸ್ಕೃತಿಯಿಂದ ಮಕ್ಕಳ ಕೌಶಲ್ಯ ಹೆಚ್ಚಲು ಸಾಧ್ಯ – ಉಪೇಂದ್ರ ಬಲ್ಯಾಯ “ಶಾಲೆಯಲ್ಲಿ ಉತ್ತಮವಾದ ಸಂಸ್ಕಾರ, ಸಂಸ್ಕೃತಿಯಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದುತ್ತಾರೆ, ಹಾಗೆಯೇ ಕನ್ನಡ ಮಾಧ್ಯಮ ಎಂಬ ಯಾವುದೇ ಕೀಳರಿಮೆ ಬೆಳೆಸಿಕೊಳ್ಳಬೇಡಿ” ಎಂದು  ಶಾಲೆಯಲ್ಲಿ ನಡೆದ 1ರಿಂದ 4ನೇ ತರಗತಿಯ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಭಾಧ್ಯಕ್ಷ ಸ್ಥಾನವನ್ನು ವಹಿಸಿದ ಮೈಸೂರು ಆಂಗ್ರೋ ಸಪ್ಲೈಸ್ ಸಂಸ್ಥೆಯ ಮಾಲಕರಾದ ಶ್ರೀ ಉಪೇಂದ್ರ ಬಲ್ಯಾಯ ನುಡಿದರು.   […]

ಸಮತ್ವ- ಸಾಮರಸ್ಯ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಸಮತ್ವ- ಸಾಮರಸ್ಯ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Monday, December 4th, 2023

ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘದಲ್ಲಿ ಸಕ್ರಿಯವಾಗಿರುವುದರಿಂದ ನಮ್ಮ ಕಲಿಕೆ- ಉದ್ಯೋಗದ ನಡುವೆಯೂ ಸಾಮಾಜಿಕ ಜವಾಬ್ದಾರಿಗಳ ಪರಿಚಯ ನಮಗಾಗುತ್ತದೆ. ಇದು ನಮ್ಮಲ್ಲಿರುವ ಏಕತಾನತೆಯನ್ನು ದೂರಮಾಡಲು ಸಹಕಾರಿಯಾಗಿದೆ. – ವಿರೂಪಾಕ್ಷ ವಕೀಲರು, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀಯುತರು ಪ್ರಾಸ್ತಾವಿಕ ಮಾತುಗಳೊಂದಿಗೆ ಬಂದಂತಹ ಸರ್ವರನ್ನು ಸ್ವಾಗತಿಸಿದರು. ಸಂಘದ ಅಧ್ಯಕ್ಷರಾದ ಡಾ. ಪುನೀತ್ ಅವರು ಶಾಲಾ ಚಟುವಟಿಕೆಗಳೊಂದಿಗೆ ಜೋಡಿಕೊಳ್ಳುವ ಸಾಧ್ಯತೆಗಳನ್ನು ತಿಳಿಸುತ್ತಾ ಶಾಲಾ ಪಠ್ಯ-ಪಠ್ಯಪೂರಕ ಚಟುವಟಿಕೆಗಳ ಪ್ರಸಕ್ತ ದಿನಗಳನ್ನು ತಿಳಿಸಿದರು.                         […]

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ–ಆಶುಭಾಷಣ ಸ್ಪರ್ಧೆ-ದ್ವಿತೀಯ

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ–ಆಶುಭಾಷಣ ಸ್ಪರ್ಧೆ-ದ್ವಿತೀಯ

Monday, December 4th, 2023

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು, ಹಾಗೂ ಶ್ರೀ ರಾಮಕೃಷ್ಣ ಆಂಗ್ಲಮಾಧ್ಯಮ ಶಾಲೆ, ಬಂಟ್ಸ್ ಹಾಸ್ಟೆಲ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಶಾಲೆಯಲ್ಲಿ  ಶ್ರೀಕೃಷ್ಣ ಬಿ (ವೆಂಕಟೇಶ್ ಬಿ ಮತ್ತು ಮಂಗಳ ಗೌರಿ ದಂಪತಿಗಳ ಪುತ್ರ) ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ನುಡಿ ನಮನ

ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ನುಡಿ ನಮನ

Friday, December 1st, 2023

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ನಿರ್ದೇಶನದಂತೆ ಶಾಲೆಯಲ್ಲಿ ಭಾರತ ಮಾತೆಯ ಮಡಿಲಿಗೆ ತನ್ನ ಪ್ರಾಣತ್ಯಾಗ ಮಾಡಿದ ವೀರಯೋಧ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ರಾಷ್ಟ್ರಪತಿ ಸ್ಕೌಟ್ ಎಂ.ವಿ ಪ್ರಾಂಜಲ್ ಇವರಿಗೆ ನುಡಿನಮನ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಸ್ಕೌಟ್ ಮಾಸ್ಟರ್ ರಾಜೇಶ್ ನಂದಿಲ ತಮ್ಮ ಮಾತುಗಳಿಂದ ನುಡಿ ನಮನ ಸಲ್ಲಿಸಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ನಳಿನಿ ವಾಗ್ಲೆ ಮತ್ತು ಇತರ ಶಿಕ್ಷಕರು ಕ್ಯಾಪ್ಟನ್ […]

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ – ರಾಜ್ಯಮಟ್ಟಕ್ಕೆ ಆಯ್ಕೆ

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ – ರಾಜ್ಯಮಟ್ಟಕ್ಕೆ ಆಯ್ಕೆ

Tuesday, November 28th, 2023

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು ಮತ್ತು ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ರಥಬೀದಿ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ  ಶಾಲಾ ಶಿಕ್ಷಕರಾದ ಶ್ರೀ ರಂಗಪ್ಪ ಕಲಾದಗಿ ಇವರು ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

ವಾರ್ಷಿಕ ಕ್ರೀಡಾಕೂಟ - ಸದೃಶ-ಸಂಭ್ರಮ

ವಾರ್ಷಿಕ ಕ್ರೀಡಾಕೂಟ – ಸದೃಶ-ಸಂಭ್ರಮ

Tuesday, November 28th, 2023

ಶಿಸ್ತು, ಶೋಧನೆಗಳು ವಿದ್ಯಾರ್ಥಿಯು ಉನ್ನತ ಮಟ್ಟಕ್ಕೇರುವ ಸಾಧನಗಳು : ಡಾ|ಶ್ರೀಪತಿ ಕಲ್ಲೂರಾಯ ವಿದ್ಯಾರ್ಥಿಗಳು ಬಾಲ್ಯದಿಂದಲೇ ಶಿಸ್ತು ಸಂಶೋಧನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಭವಿಷ್ಯತ್ತಿನಲ್ಲಿ ವೈದ್ಯಕೀಯ, ಕ್ರೀಡೆಯಂತಹ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಸಾಮಥ್ರ್ಯವನ್ನುಗಳಿಸುತ್ತಾರೆ ಎಂದು ಸದೃಶ-ಸಂಭ್ರಮ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶ್ರೀಪತಿ ಕಲ್ಲೂರಾಯ ನುಡಿದರು. ಕಾರ್ಯಕ್ರಮದಲ್ಲಿ ಕ್ರೀಡಾಧ್ವಜಾರೋಹಣ ಮಾಡಿದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಣ – ಶಿಕ್ಷಕರಾದ ಶ್ರೀ ಗೋಪಿನಾಥ್ ಅವರು ಕ್ರೀಡೆಯಲ್ಲಿ ಸೋಲು ಗೆಲುವುಗಳು […]

ಭಗವದ್ಗೀತಾ ಜಯಂತಿ ಸ್ಪರ್ಧೆಗಳು

ಭಗವದ್ಗೀತಾ ಜಯಂತಿ ಸ್ಪರ್ಧೆಗಳು

Thursday, November 23rd, 2023

ಮಂಗಳೂರು ಸಂಸ್ಕೃತ ಸಂಘ(ರಿ) ಮಂಗಳೂರು, ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ, ದ.ಕ ಜಿಲ್ಲೆ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ, ಮತ್ತು ಸರಸ್ವತಿ ವಿದ್ಯಾಕೇಂದ್ರ, ನರಿಮೊಗರು ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಗೀತಾಜಯಂತಿ ಅಂಗವಾಗಿ ನಡೆದ ಶ್ರೀಮದ್ ಭಗವದ್ಗೀತಾ ಸ್ಪರ್ಧೆಯಲ್ಲಿ  ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. 1 ಮತ್ತು 2ನೇ ತರಗತಿ ವಿಭಾಗ (ಕಂಠಪಾಠ)ದಲ್ಲಿ ಸನ್ಮಯ ಭಟ್(ಪ್ರಥಮ), ಕೀರ್ತನ್ ಪಿ ಯು(ದ್ವಿತೀಯ) 5ರಿಂದ 7ನೇ ತರಗತಿ ವಿಭಾಗ (ಕಂಠಪಾಠ)ದಲ್ಲಿ ಮುಕುಂದ(ಪ್ರಥಮ), ಶ್ರೀಕೃಷ್ಣ(ದ್ವಿತೀಯ), ಭಾಷಣ ಸ್ಪರ್ಧೆಯಲ್ಲಿ – […]

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ

Thursday, November 23rd, 2023

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.                                                  […]

Highslide for Wordpress Plugin