ಹೃದಯ ವೈಶಾಲ್ಯತೆ ಮೆರೆದ ’ಪಲ್ಲವಿ’
Monday, September 3rd, 2018ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿನಿ ಕು. ಪಲ್ಲವಿ ಕೊಡಗು ಜಿಲ್ಲೆಯ ಸಂತ್ರಸ್ತರ ನೋವಿಗೆ ಸ್ಪಂದಿಸುವ ಮೂಲಕ ಈಗ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ತನ್ನ ತಾತ, ಅಜ್ಜಿ, ಅತ್ತೆ, ಮಾವ ಹಿರಿಯರೆಲ್ಲ ನೀಡಿದ್ದ ಸುಮಾರು 1,102 ರೂ. ಹಣ (ಪಾಕೆಟ್ ಮನಿ)ವನ್ನು ಕೂಡಿಟ್ಟಿದ್ದ ಪಲ್ಲವಿ ಆ ಎಲ್ಲಾ ಹಣವನ್ನು ದೇಣಿಗೆಯಾಗಿ ನೀಡಿದ್ದಾಳೆ. ಶಾಲೆಯಲ್ಲಿ ಶಿಕ್ಷಕರ ಮೂಲಕ ಕೊಡಗಿನ ಪ್ರಾಕೃತಿಕ ವಿಕೋಪಗಳ ಬಗ್ಗೆ ತಿಳಿದುಕೊಂಡಿದ್ದ ಪುಟಾಣಿಗೆ ಅವರ ಕಷ್ಟ, ನೋವುಗಳು ಮನ ಕಲುಕಿದ್ದು ತಾನು […]

















































