ಮಾಹಿತಿ ಕಾರ್ಯಾಗಾರ

ಮಾಹಿತಿ ಕಾರ್ಯಾಗಾರ

Monday, February 5th, 2018

ನೂರೈವತ್ತು ವರ್ಷಗಳಿಗೊಮ್ಮೆ ಸಂಭವಿಸುವ ಪೂರ್ಣಚಂದ್ರಗ್ರಹಣಕ್ಕೆ ಸಂಬಂಧಿಸಿ ಗ್ರಹಣ ಎಂದರೇನು? ಗ್ರಹಣ ಹೇಗೆ ಸಂಭವಿಸುತ್ತದೆ. ಚಂದ್ರಗ್ರಹಣ ಮತ್ತು ಸೂರ್ಯಗ್ರಹಣಕ್ಕೆ ಇರುವ ವ್ಯತ್ಯಾಸದ ಕುರಿತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಗೆ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ಶಿವಪ್ರಸಾದ್ ಇವರು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ಹಾಗೂ ಸಂವಾದ ಕಾರ್ಯಾಗಾರ ನಡೆಸಿಕೊಟ್ಟರು.

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ - ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

Monday, January 29th, 2018

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನಟ್ರಸ್ಟ್ (ರಿ) ಧರ್ಮಸ್ಥಳ ಇವರು ಏರ್ಪಡಿಸಿದ ’ಜ್ಞಾನ ಸಿರಿ’ ಪುಸ್ತಕಾಧಾರಿತ ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮುಖೇಶ್ ಕೃಷ್ಣ -ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ’ಜ್ಞಾನಐಸಿರಿ’ ಪುಸ್ತಕಾಧಾರಿತ ಪ್ರೌಢ ವಿಭಾಗದ ಚಿತ್ರಕಲೆಯಲ್ಲಿ ಗೌತಮ್‌ಎಸ್- ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಶಿಸ್ತಿನ ಸಿಪಾಯಿಗಳಾಗಿ ದೇಶಸೇವೆಗೆ ಮುಂದಾಗಬೇಕು - ಕೆಡೆಟ್ ಕು. ವಿನಿತಾ

ಶಿಸ್ತಿನ ಸಿಪಾಯಿಗಳಾಗಿ ದೇಶಸೇವೆಗೆ ಮುಂದಾಗಬೇಕು – ಕೆಡೆಟ್ ಕು. ವಿನಿತಾ

Saturday, January 27th, 2018

ಸಂವಿಧಾನ ಶಿಲ್ಪಿ ಡಾ| ಬಿ. ಆರ್. ಅಂಬೆಡ್ಕರ್‌ರವರಿಂದ ಸಿದ್ಧಗೊಂಡ ಸಂವಿಧಾನದ ನಿಯಮಗಳಿಗೆ ಬದ್ಧರಾಗಿ ಸತ್ಯ, ನ್ಯಾಯ, ನಿಷ್ಠೆಯಿಂದ ದೇಶ ಸೇವೆಯಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ನಮ್ಮ ಜೀವನದಲ್ಲಿ ಶಿಸ್ತು ಅವಿಭಾಜ್ಯ ಅಂಗವಾಗಿದ್ದಾಗ ಪ್ರತಿಯೊಂದು ಕಾರ್ಯದಲ್ಲೂ ನಾವು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ 2016 ನೇ ವರ್ಷದಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಗಾರ್ಡ್‌ ಆಫ್ ಹಾನರ್‌ನಲ್ಲಿ ಭಾಗವಹಿಸಿರುವ ಕೆಡೆಟ್ ಕು. ವಿನಿತಾರವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು […]

ಸೂರ್ಯನಮಸ್ಕಾರ

ಸೂರ್ಯನಮಸ್ಕಾರ

Thursday, January 25th, 2018

ರಥಸಪ್ತಮಿಯ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 1 ರಿಂದ 9 ನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಸೂರ್ಯನಮಸ್ಕಾರದಲ್ಲಿ ಪಾಲ್ಗೊಂಡರು.

ಮಕ್ಕಳೊಂದಿಗೆ ಮಿತ್ರರಂತೆ ಇರಬೇಕು - ಬಿ.ವಿ. ಸೂರ್ಯನಾರಾಯಣ

ಮಕ್ಕಳೊಂದಿಗೆ ಮಿತ್ರರಂತೆ ಇರಬೇಕು – ಬಿ.ವಿ. ಸೂರ್ಯನಾರಾಯಣ

Monday, January 15th, 2018

10ನೇ ತರಗತಿ ಮಕ್ಕಳಿಗೆ ಮತ್ತು ಪೋಷಕರಿಗೆ ಕಾರ್ಯಾಗಾರ ಸೂಕ್ತ ಕಲಿಕಾ ವಾತಾವರಣದೊಂದಿಗೆ ಮಕ್ಕಳ ಧನಾತ್ಮಕ ಅಂಶಗಳಿಗೆ ಮೆಚ್ಚುಗೆ ವ್ಯಕ್ತಪಡಿಸುವ ಗುಣ ಹೆತ್ತವರಾದ ನಮ್ಮಲ್ಲಿರಬೇಕು. ಪರೀಕ್ಷಾ ಸಂದರ್ಭದಲ್ಲಿ ನಾವು ಅವರೊಂದಿಗೆ ಮಿತ್ರರಂತಿದ್ದು ಸೂಕ್ತ ಮಾರ್ಗದರ್ಶನ ನೀಡಬೇಕು ಎನ್ನುತ್ತಾ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿ ಮಕ್ಕಳ ಪೋಷಕರೊಂದಿಗೆ ಸಂವಾದ ನಡೆಸುತ್ತಾ ಅವರ ಪ್ರಶ್ನೆಗಳಿಗೆ ಸವಣೂರು ಕಾಲೇಜಿನ ಉಪನ್ಯಾಸಕರಾದ ಬಿ.ವಿ ಸೂರ್ಯನಾರಾಯಣ ಇವರು ಸಲಹೆ ನೀಡಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಶಾಲೆಯ ಹತ್ತನೇ ತರಗತಿ ಮಕ್ಕಳಿಗೆ ’ಪರೀಕ್ಷಾ […]

ವಿವೇಕ ಜಯಂತಿ

ವಿವೇಕ ಜಯಂತಿ

Thursday, January 11th, 2018

ದಿವ್ಯಚೇತನವುಳ್ಳ ನರೇಂದ್ರ ಎನ್ನುವ ಬಾಲಕನು ಮುಂದೆ ರಾಮಕೃಷ್ಣ ಪರಮಹಂಸರಂತಹ ಕಾಳಿಕಾ ಮಾತೆಯ ಅನುಗ್ರಹ ಪಡೆದ ಗುರುಗಳ ಮಾರ್ಗದರ್ಶನದಲ್ಲಿ ಸ್ವಾಮಿ ವಿವೇಕಾನಂದರಾಗಿ ಜಗತ್ತಿಗೇ ಜೀವನದ ಆದರ್ಶ ಸತ್ವಗುಣಗಳನ್ನು ಭೋಧಿಸಿದರು ನಾವು ಅವರ ಚಿಂತನೆಗಳನ್ನು ಗೌರವಿಸಿ ಪಾಲಿಸೋಣ ಎಂದು ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿ ಕಾರ್ತಿಕ್ ನುಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಇನ್ನೋರ್ವ ವಿದ್ಯಾರ್ಥಿ ಶ್ರೀ ದುರ್ಗಾಪರಮೇಶ್ವರ್ ಮಾತನಾಡುತ್ತಾ ವಿವೇಕಾನಂದರ ಹಾಗೇ ನಾವು ಅಪ್ರತಿಮ ದೇಶಭಕ್ತರಾಗಿ, ಧೈರ್ಯ, ಆತ್ಮವಿಶ್ವಾಸ, ಮಾನವೀಯತೆಯಂತಹ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳೋಣ ಎಂದು ನುಡಿದರು. ಇಬ್ಬರೂ ವಿದ್ಯಾರ್ಥಿಗಳು […]

ಬೆಳ್ಳಿಹಬ್ಬ ಸಮಾರೋಪ : ಪ್ರತಿ ಮಗುವಿನ ಅದ್ಭುತ ಶಕ್ತಿಯನ್ನು ಅರಿಯುವಂತಾಗಬೇಕು - ಸೀತಾರಾಮ ಕೆದಿಲಾಯ

ಬೆಳ್ಳಿಹಬ್ಬ ಸಮಾರೋಪ : ಪ್ರತಿ ಮಗುವಿನ ಅದ್ಭುತ ಶಕ್ತಿಯನ್ನು ಅರಿಯುವಂತಾಗಬೇಕು – ಸೀತಾರಾಮ ಕೆದಿಲಾಯ

Tuesday, January 9th, 2018

ಮಕ್ಕಳನ್ನು ಕೇವಲ ವ್ಯಕ್ತಿಗಳಾಗಿ ನೋಡುವಂತಾಗಬಾರದು. ಒಂದೊಂದು ಮಗುವಿನಲ್ಲೂ ಅದ್ಭುತ ಶಕ್ತಿ ಅಡಗಿದೆ. ಮನುಷ್ಯ ರೂಪದಲ್ಲಿರುವ ಮಕ್ಕಳನ್ನು ದೇವರ ರೂಪದಲ್ಲಿ ಕಾಣುವಂತಾಗಬೇಕು. ಇಂತಹ ಮನಸ್ಥಿತಿಯನ್ನು ಎಲ್ಲಾ ವಿದ್ಯಾಮಂದಿರಗಳು ಸ್ವೀಕರಿಸಿದಾಗ ದೇಶದಲ್ಲಿ ಹೊಸ ಯುಗ ಆರಂಭವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ ಸೀತಾರಾಮ ಕೆದಿಲಾಯ ಹೇಳಿದರು. ಅವರು ಭಾನುವಾರ ನಗರದ ತೆಂಕಿಲದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬೆಳ್ಳಿಹಬ್ಬ ಸಮಾರೋಪ ಸಮಾರಂಭದಲ್ಲಿ ಹಾಗೂ ವಿವೇಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯೋಗಜ್ಞಾನ, ಮನೋವಿಜ್ಞಾನ, ಆಯುರ್ವೇದದ ಆರೋಗ್ಯ […]

ತುಳಸಿ ಭೂಲೋಕದ ಸಂಜೀವಿನಿ - ಜಯರಾಮ ಭಟ್

ತುಳಸಿ ಭೂಲೋಕದ ಸಂಜೀವಿನಿ – ಜಯರಾಮ ಭಟ್

Monday, January 1st, 2018

ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಭಾರತೀಯ ಸಂಸ್ಕೃತಿ ಸಂಪ್ರದಾಯ ನಶಿಸಿ ಹೋಗದಂತೆ ಜಾಗೃತರಾಗಬೇಕಾದುದು ಇಂದು ಅತ್ಯಗತ್ಯ. ಮನೆ, ವಿದ್ಯಾಮಂದಿರಗಳ ವಾತಾವರಣವು ತುಳಸಿ ವೃಂದಾನವನದಿಂದ ಮಂಗಳಕರವಾಗಿರುತ್ತದೆ. ತುಳಸಿಯು ಔಷಧೀಯ ಮೌಲ್ಯಗಳನ್ನು ಹೊಂದಿದ್ದು ಭೂಲೋಕದ ಅಮೃತ ಸಂಜೀವಿನಿ ಎಂದೆನಿಸಿಕೊಳ್ಳುತ್ತದೆ. ಇದರ ಮೇಲಿನ ಗಾಳಿಯು ಪ್ರಾಣವಾಯುವಿನಿಂದ ಕೂಡಿದೆ ಎಂದು ವೈದಿಕರಾದ ಜಯರಾಮ ಭಟ್‌ರವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಆವರಣದಲ್ಲಿ ತುಳಸಿ ಕಟ್ಟೆಯ ಸ್ಥಾಪನೆಯ ಸಂದರ್ಭದಲ್ಲಿ ಹೇಳಿದರು. ಕಾರ್ಯಕ್ರಮದುದ್ದಕ್ಕೂ ವಿದ್ಯಾರ್ಥಿಗಳು ಭಗವದ್ಗೀತೆ ಪಠಣ ಮಾಡುತ್ತಿದ್ದರು. ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆಯನ್ನು ಒದಗಿಸಿಕೊಟ್ಟ ಮಣಿಕಂಠ ಗ್ಯಾಸ್ […]

ಗ್ರಾಮವಿಕಾಸ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು

ಗ್ರಾಮವಿಕಾಸ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು

Saturday, December 30th, 2017

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ‘ಗ್ರಾಮದ ಸಮಗ್ರ ವಿಕಾಸ’ ಎಂಬ ಚಟುವಟಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ನೀಡಲಾದ ’ಕೆದಿಲ’ ಗ್ರಾಮಕ್ಕೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು 30-12-2017 ರ ಶನಿವಾರದಂದು ತೆರಳಿ ಕೆದಿಲದ ’ಶ್ರೀರಾಮ ಭಜನಾ ಮಂದಿರ’ ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಈ ಸ್ವಚ್ಛತಾ ಅಭಿಯಾನದಲ್ಲಿ ಊರ ಅನೇಕ ಮಹನೀಯರು, ಹಾಗೂ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಶ್ರೀ ಅಚ್ಯುತ್ ನಾಯಕ್, ಸಂಚಾಲಕರಾದ ಶ್ರೀ ವಿನೋದ್‌ಕುಮಾರ್‌ ರೈ ಗುತ್ತು, ಸದಸ್ಯರಾದ ಶ್ರೀ ರಮೇಶ್ಚಂದ್ರ ಎಸ್, […]

ಜ್ಞಾನ ಐಸಿರಿ ಸ್ಪರ್ಧೆ - ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಜ್ಞಾನ ಐಸಿರಿ ಸ್ಪರ್ಧೆ – ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Thursday, December 28th, 2017

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಇವರು ಏರ್ಪಡಿಸಿದ ‘ಜ್ಞಾನ ಐಸಿರಿ’ ಪುಸ್ತಕಾಧಾರಿತ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸ್ವಾತಿ ಎಸ್. ಭಟ್- ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಗೌತಮ್‌ ಎಸ್. – ಪ್ರೌಢಶಾಲಾ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ’ಜ್ಞಾನ ಸಿರಿ’ ಪುಸ್ತಕಾಧಾರಿತ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ಮುಖೇಶ್ ಕೃಷ್ಣ – ಪ್ರಥಮ ಸ್ಥಾನವನ್ನು ಪಡೆದು ಧರ್ಮಸ್ಥಳದಲ್ಲಿ ನಡೆಯುವ ಜಿಲ್ಲಾಮಟ್ಟದ […]

ಬಾಳೆ ತೋಟ ನಿರ್ಮಾಣ

ಬಾಳೆ ತೋಟ ನಿರ್ಮಾಣ

Wednesday, December 27th, 2017

ನಿಸರ್ಗ ಸ್ನೇಹಿ ಬದುಕು ನಮ್ಮದಾಗಲಿ – ಶಿಕ್ಷಣವು ಕೇವಲ ಶಾಲಾ ಕಟ್ಟಡದಲ್ಲಿ ನಾಲ್ಕು ಗೋಡೆಗಳ ನಡುವಣ ಪ್ರಕ್ರಿಯೆ ಆಗದೆ ನಿಸರ್ಗದೊಂದಿಗೆ ಕಲಿತು ಬೆರೆಯುವ ಅನುಭವವಾಗಬೇಕು ಎನ್ನುವ ಆಶಯದೊಂದಿಗೆ ವಿವೇಕಾನಂದ ಕನ್ನಡ ಶಾಲೆಯಲ್ಲಿ ಪೋಷಕರ ಸಹಕಾರದೊಂದಿಗೆ ’ಬಾಳೆ ತೋಟ’ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಸುಮಾರು ಇಪ್ಪತ್ತು ವಿಧದ ಬಾಳೆಯ ಗಿಡಗಳನ್ನು ನೆಡಲಾಯಿತು. ಶಾಲಾ ಪೋಷಕರು, ಶಿಕ್ಷಕರು, ಮಕ್ಕಳು ಸೇರಿಕೊಂಡು ಇದರಲ್ಲಿ ಭಾಗವಹಿಸಿದರು.

ವಿದ್ಯಾಭಾರತಿ ವಿಜ್ಞಾನ ವಸ್ತು ಪ್ರದರ್ಶನ ಮಾದರಿ ಸ್ಪರ್ಧೆ :  ರಾಷ್ಟ್ರ ಮಟ್ಟದಲ್ಲಿ ತೃತೀಯ ಸ್ಥಾನ 

ವಿದ್ಯಾಭಾರತಿ ವಿಜ್ಞಾನ ವಸ್ತು ಪ್ರದರ್ಶನ ಮಾದರಿ ಸ್ಪರ್ಧೆ : ರಾಷ್ಟ್ರ ಮಟ್ಟದಲ್ಲಿ ತೃತೀಯ ಸ್ಥಾನ 

Monday, December 25th, 2017

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ ನಡೆಸಿದ ಜ್ಞಾನ – ವಿಜ್ಞಾನ ಮೇಳ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ತಣಿಸಂದ್ರ ಬೆಂಗಳೂರು ಇಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಶ್ರಯ್ ಪಿ.ವಿ. (ವಿಶ್ವನಾಥ ಗೌಡ ಪಟ್ಟೆ ಮತ್ತು ರೇವತಿ ದಂಪತಿಯ ಪುತ್ರ) ಮತ್ತು ರಕ್ಷಿತಾ ಡಿ. (ಡೊಂಬಯ ಗೌಡ ಪಂಜಳ ಮತ್ತು ದಾಕ್ಷಾಯಿಣಿ ದಂಪತಿಯ ಪುತ್ರಿ) ತೃತೀಯ ಸ್ಥಾನ ಪಡೆದಿರುತ್ತಾರೆ.

ಬಾಲ ಉದ್ಯಾನವನಕ್ಕೆ ಶಂಕುಸ್ಥಾಪನೆ

ಬಾಲ ಉದ್ಯಾನವನಕ್ಕೆ ಶಂಕುಸ್ಥಾಪನೆ

Wednesday, December 20th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ವಿಭಾಗದ ಮಕ್ಕಳಿಗಾಗಿ ಬಾಲ ಉದ್ಯಾನವನಕ್ಕೆ ಪುತ್ತೂರು ಸಚಿನ್ ಟ್ರೇಡಿಂಗ್ ಕಂ. ಇದರ ಮಾಲಕರಾದ ಶ್ರೀಯುತ ಸಚಿನ್ ಇವರು ಭೂಮಿ ಪೂಜೆಯೊಂದಿಗೆ ಚಾಲನೆ ನೀಡಿದರು. ಪ್ರಾಥಮಿಕ ವಿಭಾಗದ ಮಕ್ಕಳ ಶ್ಲೋಕದೊಂದಿಗೆ ದೀಪ ಪ್ರಜ್ವಲಿಸಿದ ಅವರು ಉದ್ಯಾನವನವು ಆಟದೊಂದಿಗೆ ಪಾಠದ ಸಂತೋಷವನ್ನು ನೀಡುವಂತೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ, ನಿರ್ದೇಶಕರಾದ ಶ್ರೀ ಶಿವಪ್ರಸಾದ್ ಇ, ವಿವೇಕಾನಂದ ಪದವಿಪೂರ್ವ ಕಾಲೇಜಿನ […]

ಜನವರಿ 7 ರಂದು ವಿವೇಕೋತ್ಸವ

ಜನವರಿ 7 ರಂದು ವಿವೇಕೋತ್ಸವ

Thursday, December 14th, 2017
ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಖಂಡಿತ - ಶ್ರೀಮತಿ ಓಮನ ಎನ್.ಕೆ

ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಖಂಡಿತ – ಶ್ರೀಮತಿ ಓಮನ ಎನ್.ಕೆ

Monday, December 11th, 2017

ಜೀವನದಲ್ಲಿ ಪರಿಶ್ರಮ ಪಟ್ಟಾಗ ಯಶಸ್ಸು ಖಂಡಿತವಾಗಿಯೂ ಲಭಿಸುವುದು ಕಲಿಕೆಯ ಜೊತೆ ಕ್ರೀಡೆಯಲ್ಲಿಯೂ ಸಾಧನೆ ಮಾಡಿದಾಗ ಹೆಚ್ಚಿನ ಅವಕಾಶಗಳು ತಾನಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕನಗರಾ, ತೆಂಕಿಲ ಇಲ್ಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಧ್ವಜಾರೋಹಣಗೈದ, ಪುತ್ತೂರು ನಗರ ಠಾಣೆಯ ಮಹಿಳಾ ಪೋಲಿಸ್ ಉಪನಿರೀಕ್ಷಕರಾದ ಶ್ರೀಮತಿ ಓಮನ ಎನ್.ಕೆ ರವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಕ್ರೀಡಾಕೂಟವನ್ನು ಉದ್ಫಾಟಿಸಿದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ – ಕ್ರೀಡಾ ಪ್ರಮುಖರಾದ ಶ್ರೀ ಆನಂದ ಶೆಟ್ಟಿ ಇವರು ಮಾತನಾಡಿ ಕ್ರೀಡಾ […]

ಶೈಕ್ಷಣಿಕ ಸಂಪನ್ಮೂಲ ಕಾರ್ಯಾಗಾರಗಳು ಶಿಕ್ಷಕನಿಗೆ ಆತ್ಮಾವಲೋಕನ ಮಾಡಿಕೊಳ್ಳಲು ಸಹಕಾರಿ- ಶ್ರೀ ಸತೀಶ ಭಟ್, ಬಿಳಿನೆಲೆ

ಶೈಕ್ಷಣಿಕ ಸಂಪನ್ಮೂಲ ಕಾರ್ಯಾಗಾರಗಳು ಶಿಕ್ಷಕನಿಗೆ ಆತ್ಮಾವಲೋಕನ ಮಾಡಿಕೊಳ್ಳಲು ಸಹಕಾರಿ- ಶ್ರೀ ಸತೀಶ ಭಟ್, ಬಿಳಿನೆಲೆ

Tuesday, December 5th, 2017

ಶೈಕ್ಷಣಿಕ ಸಂಪನ್ಮೂಲ ಕಾರ್ಯಾಗಾರಗಳು ಪ್ರತಿಯೊಬ್ಬ ಶಿಕ್ಷಕನಿಗೂ ಹೆಚ್ಚಿನ ಕಲಿಕೆಗೆ ಹಾಗೂ ಆತ್ಮಾವಲೋಕನವನ್ನು ಮಾಡಿಕೊಳ್ಳಲು ಸಹಕಾರಿ ಎಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಗುರುಗಳಾದ ಸತೀಶ್ ಭಟ್ ಬಿಳಿನೆಲೆ ಇವರು ಹೇಳಿದರು. ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ವಿವೇಕನಗರ, ತೆಂಕಿಲ ಇದರ ಸಹಯೋಗದಲ್ಲಿ ಶಿಕ್ಷಕರಿಗಾಗಿ ಆಯೋಜಿಸಿದ್ದ ಒಂದು ದಿನದ ಸಂಕುಲ ಮಟ್ಟದ ಶೈಕ್ಷಣಿಕ ಸಂಪನ್ಮೂಲ ಕಾರ್ಯಾಗಾರವನ್ನು ಉದ್ಫಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ […]

ಗೌತಮ್‌ಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ

ಗೌತಮ್‌ಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ

Friday, November 17th, 2017

ಬಾಲಭವನ ಸೊಸೈಟಿ, ಕಬ್ಬನ್ ಉದ್ಯಾನವನ ಬೆಂಗಳೂರು ಇಲ್ಲಿ ಏರ್ಪಡಿಸಲಾದ ರಾಜ್ಯಮಟ್ಟದ ಮಕ್ಕಳ ’ಕಲಾಶ್ರೀ ಪ್ರಶಸ್ತಿ’ ಆಯ್ಕೆ ಶಿಬಿರದ ಸೃಜನಾತ್ಮಕ ಕಲೆ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್ ಎಸ್ (ನೆಹರೂ ನಗರ ಗಣೇಶ್ ಪೂಜಾರಿ ಮತ್ತು ಮಮತಾ ದಂಪತಿಗಳ ಪುತ್ರ)-ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಉಮಾಶ್ರೀ ಅವರಿಂದ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.

ಪ್ರತಿಯೊಂದು ಮಗುವೂ ಪ್ರತಿಭಾಶಾಲಿ - ಸತೀಶ್. ಕೆ

ಪ್ರತಿಯೊಂದು ಮಗುವೂ ಪ್ರತಿಭಾಶಾಲಿ – ಸತೀಶ್. ಕೆ

Tuesday, November 14th, 2017

ವಿವೇಕಾನಂದ ಕನ್ನಡ ಶಾಲೆ – ಪ್ರತಿಭಾ ದಿನಾಚರಣೆ ಪ್ರತಿಯೊಂದು ಮಗುವು ಪ್ರತಿಭಾಶಾಲಿಯೇ ಹೌದು. ಪ್ರತಿಭೆಗೆ ತಕ್ಕ ಪರಿಶ್ರಮ ಪಟ್ಟಾಗ ಸೂಕ್ತ ಪ್ರತಿಫಲ ಸಿಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಬೋಧಕರಾದ ಶ್ರೀ ಸತೀಶ್ ಕೆ ಇವರು ನುಡಿದರು. ಇವರು ವಿವೇಕಾನಂದ ಕನ್ನಡ ಶಾಲೆಯಲ್ಲಿ ನವೆಂಬರ್ 14 ರ ಮಕ್ಕಳ ದಿನಾಚರಣೆಯಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಫಾಟಕರ ನೆಲೆಯಲ್ಲಿ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ ಶಾಲಾ ಹಿರಿಯ ವಿದ್ಯಾರ್ಥಿನಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕು. ಅದಿತಿ ಕೆ.ಟಿ ಇವರು […]

ವಿಜ್ಞಾನ ಮಾದರಿ ವಸ್ತು ಪ್ರದರ್ಶನ : ಜಿಲ್ಲಾಮಟ್ಟಕ್ಕೆ ಆಯ್ಕೆ

ವಿಜ್ಞಾನ ಮಾದರಿ ವಸ್ತು ಪ್ರದರ್ಶನ : ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, November 14th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಂತ ವಿಕ್ಟರನ ಬಾಲಿಕ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಧನುಷ್ ಬಿ. ಮತ್ತು ಸ್ವಸ್ತಿಕ್ ಬಿ.ವಿ. ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾಭಾರತಿ - ವಿಜ್ಞಾನ - ವಸ್ತು ಪ್ರದರ್ಶನ ಮಾದರಿ ಸ್ಪರ್ಧೆ : ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ – ವಿಜ್ಞಾನ – ವಸ್ತು ಪ್ರದರ್ಶನ ಮಾದರಿ ಸ್ಪರ್ಧೆ : ರಾಷ್ಟ್ರ ಮಟ್ಟಕ್ಕೆ ಆಯ್ಕೆ

Friday, November 10th, 2017

ವಿದ್ಯಾಭಾರತಿ ವತಿಯಿಂದ ಸರಸ್ವತಿ ಹೈದರಾಬಾದ್‌ನ ಸೈಯದ್‌ಬಾದ್‌ ಸರಸ್ವತಿ ವಿದ್ಯಾಲಯದಲ್ಲಿ ನಡೆದ ದಕ್ಷಿಣ ಪ್ರಾಂತೀಯ ಮಟ್ಟದ ಜ್ಞಾನ – ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ರಕ್ಷಿತಾ ಡಿ. (ಡೊಂಬಯ್ಯ ಗೌಡ ಪಂಜಳ ಮತ್ತು ದಾಕ್ಷಾಯಿಣಿ ದಂಪತಿ ಪುತ್ರಿ) ಮತ್ತು ಆಶ್ರಯ್ ಪಿ.ವಿ. (ವಿಶ್ವನಾಥ ಗೌಡ ಪಟ್ಟೆ ಮತ್ತು ರೇವತಿ ದಂಪತಿಯ ಪುತ್ರ) ಇವರು ತಯಾರಿಸಿದ ಶ್ರವಣಾತೀತ ತರಂಗಗಳು ಮತ್ತು ಅದರ ಅನ್ವಯಗಳು ಎಂಬ ವಿಷಯದ ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಪ್ರಥಮ ಸ್ಥಾನ ಗಳಿಸಿ […]

ಗೌತಮ್‌ ರಾಜ್ಯ ಮಟ್ಟಕ್ಕೆ ಆಯ್ಕೆ

ಗೌತಮ್‌ ರಾಜ್ಯ ಮಟ್ಟಕ್ಕೆ ಆಯ್ಕೆ

Wednesday, November 8th, 2017

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಮಂಗಳೂರು ಇವರು ಜಿಲ್ಲಾ ಬಾಲಭವನ, ಕದ್ರಿ ಮಂಗಳೂರು ಇಲ್ಲಿ ಏರ್ಪಡಿಸಲಾದ ಜಿಲ್ಲಾಮಟ್ಟದ ಮಕ್ಕಳ ’ಕಲಾಶ್ರೀ ಪ್ರಶಸ್ತಿ’ ಆಯ್ಕೆ ಶಿಬಿರದ ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್‌ಎಸ್. – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಮತ್ತು ಉದಯವಾಣಿ ಆರ್ಟಿಸ್ಟ್ ಪಾರ್ಮ್(ರಿ) ಉದಯವಾಣಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲೂ ಈತ ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾನೆ.

ತಾಲೂಕು ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ : ಶಾಲೆಗೆ ಹಲವು ಪ್ರಶಸ್ತಿ

ತಾಲೂಕು ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ : ಶಾಲೆಗೆ ಹಲವು ಪ್ರಶಸ್ತಿ

Friday, November 3rd, 2017

ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು, ತಾಲೂಕು ಬಾಲಭವನ ಸಮಿತಿ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪರ್ಲಡ್ಕ ಶಿವರಾಮ ಕಾರಂತ ಬಾಲವನದಲ್ಲಿ ನಡೆದತಾಲೂಕು ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರದಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದವರು: ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರದಲ್ಲಿ ಪ್ರತೀಕ್‌ ಗಣಪತಿ – ಪ್ರಥಮ, ಸೃಜನಾತ್ಮಕ ಪ್ರದರ್ಶನ ಕಲೆ -ಶ್ರೇಯಾ ಎಂ – ಪ್ರಥಮ, ಸೃಜನಾತ್ಮಕ ಬರವಣಿಗೆ […]

ಕನ್ನಡ ರಾಜ್ಯ್ಯೋತ್ಸವ

ಕನ್ನಡ ರಾಜ್ಯ್ಯೋತ್ಸವ

Thursday, November 2nd, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಹ ಶಿಕ್ಷಕಿ ಶ್ರೀಮತಿ ಗೀತಾ ಮಾತಾಜಿ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಗುರುಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

ಸ್ಕೂಲ್‌ ಗೇಮ್ಸ್ ಫೆಡರೇಶನ್‌ ಆಫ್ ಇಂಡಿಯಾಗೆ ಶಾಲೆಯ ಕ್ರೀಡಾಪಟುಗಳು ಆಯ್ಕೆ

ಸ್ಕೂಲ್‌ ಗೇಮ್ಸ್ ಫೆಡರೇಶನ್‌ ಆಫ್ ಇಂಡಿಯಾಗೆ ಶಾಲೆಯ ಕ್ರೀಡಾಪಟುಗಳು ಆಯ್ಕೆ

Tuesday, October 17th, 2017

ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಬೆಳಗಾವಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಧನುಷಾ.ಜಿ.ಶೆಟ್ಟಿ (ದರ್ಬೆತ್ತಡ್ಕ ಉದಯ್ ಕುಮಾರ್ ಶೆಟ್ಟಿ ಮತ್ತು ವೈಶಲತಾ ಶೆಟ್ಟಿ ದಂಪತಿಗಳ ಪುತ್ರಿ) ನಡಿಗೆ ಸ್ಪರ್ಧೆಯಲ್ಲಿ ಪ್ರಥಮ, ಮೀರತ್‌ನಲ್ಲಿ ನಡೆದ ಅಖಿಲಾ ಭಾರತೀಯ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದೀಕ್ಷಾ.ಕೆ (ಪೆರಿಗೇರಿ ಕಮಲಾಕ್ಷಗೌಡ ಮತ್ತು ಕಮಲಾಕ್ಷಿ ದಂಪತಿ ಪುತ್ರಿ) 100 ಮೀ ಅಡೆತಡೆ ಓಟ – ಪ್ರಥಮ, 4100 ಮೀ ರಿಲೇಯಲ್ಲಿ ಪ್ರಥಮ ಸ್ಥಾನ, ಉದ್ದಜಿಗಿತ, ತ್ರಿವಿಧಜಿಗಿತ ದ್ವಿತೀಯ, ಗಾಯತ್ರಿ.ಕೆ.ಎನ್ (ಕೇಪು ಕಲ್ಲಪಾಪು ನಿರಂಜನ್ ಕೆ […]

ಸಂಸ್ಕಾರ, ಸಂಸ್ಕೃತಿಯುತ ಕುಟುಂಬಗಳಿಂದ ಭಾರತ ವಿಶ್ವಮಾನ್ಯವೆನಿಸಿದೆ - ಸು.ರಾಮಣ್ಣ

ಸಂಸ್ಕಾರ, ಸಂಸ್ಕೃತಿಯುತ ಕುಟುಂಬಗಳಿಂದ ಭಾರತ ವಿಶ್ವಮಾನ್ಯವೆನಿಸಿದೆ – ಸು.ರಾಮಣ್ಣ

Monday, October 16th, 2017

ವಿವಾಹ ಎನ್ನುವುದು ಕೇವಲ ಭೋಗಕ್ಕಾಗಿ ಅಲ್ಲ, ಎರಡು ಜೀವಗಳು ಬೆಸೆಯುವ ಈ ಸಂಬಂಧವು ಎರಡು ಕುಟುಂಬಗಳನ್ನು ಜೋಡಿಸುತ್ತದೆ. ದೈವಾನುಗ್ರಹದಿಂದ ಪಡೆದ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ಸಮಾಜಕ್ಕೆ ಯೋಗ್ಯ ವ್ಯಕ್ತಿಗಳನ್ನು ನೀಡುವ ಜವಾಬ್ದಾರಿ ತಂದೆ ತಾಯಿಗಳಿಗಿರಬೇಕು. ಮಕ್ಕಳಲ್ಲಿ ಸಮಷ್ಠಿಯ ಬಗ್ಗೆ ಅಂದರೆ, ಸಮಸ್ತ ಸೃಷ್ಟಿ, ಜಗತ್ತು ವಿಶ್ವವನ್ನೇ ಪ್ರೀತಿಸಿ ಗೌರವಿಸುವ ಸಂಸ್ಕೃತಿ ಬೆಳೆಸಿದಾಗ ’ವಸುದೈವ ಕುಟುಂಬಕಮ್’ ಎಂಬ ಮಾತು ಸಾರ್ಥಕವಾಗುತ್ತದೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ’ನವದಂಪತಿಗಳ ಸಮಾವೇಶ’ ಎಂಬ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ […]

ಅ. 15 ರಂದು ನವದಂಪತಿ ಸಮಾವೇಶ

ಅ. 15 ರಂದು ನವದಂಪತಿ ಸಮಾವೇಶ

Saturday, October 14th, 2017
ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳ : ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳ : ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

Monday, October 9th, 2017

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಬಾಲ ಭಾರತಿ ಕೇಂದ್ರಿಯ ವಿದ್ಯಾಲಯ ಬಳ್ಳಾರಿ ಇಲ್ಲಿ ನಡೆದ ಪ್ರಾಂತೀಯ ಜ್ಞಾನ – ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಆಶ್ರಯ್ ಪಿ.ವಿ ಮತ್ತು ರಕ್ಷಿತಾ. ಡಿ ಇವರ ತಂಡ ಪ್ರಥಮ ಸ್ಥಾನ ಪಡೆದು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಪ್ರತೀಕ್ ಗಣಪತಿ – ದ್ವಿತೀಯ ಸ್ಥಾನ, ಧನುಷ್ ಬಿ ಮತ್ತು ಸ್ವಸ್ತಿಕ್ ಬಿ.ವಿ ಇವರ ತಂಡ ತೃತೀಯ ಸ್ಥಾನ ಪಡೆದಿರುತ್ತದೆ.

ಬಾಲಗೋಕುಲ ಕಾರ್ಯಾಗಾರ

ಬಾಲಗೋಕುಲ ಕಾರ್ಯಾಗಾರ

Saturday, October 7th, 2017

ಸಂಸ್ಕಾರಯುತ ಶಿಕ್ಷಣ ನೀಡುವ ಹಿನ್ನೆಲೆಯಲ್ಲಿ ಶಿಕ್ಷಕರ ಮನೆಯಲ್ಲಿ ಬಾಲಗೋಕುಲ ನಡೆಸುವ ಬಗ್ಗೆ ಮೈತ್ರೇಯಿ ಗುರುಕುಲದ ಶ್ರೀಮತಿ ಮಾತಾಜಿಯವರ ನೇತೃತ್ವದಲ್ಲಿ ಬಾಲಗೋಕುಲ ಶಿಬಿರ ನಡೆಯಿತು.

ತಾಲೂಕು ಮಟ್ಟದ ಕ್ರೀಡಾಕೂಟ  : ಶಾಲೆಗೆ ಸಮಗ್ರ ತಂಡ ಪ್ರಶಸ್ತಿ

ತಾಲೂಕು ಮಟ್ಟದ ಕ್ರೀಡಾಕೂಟ : ಶಾಲೆಗೆ ಸಮಗ್ರ ತಂಡ ಪ್ರಶಸ್ತಿ

Thursday, October 5th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಪ್ರೌಢಶಾಲೆ ಕೆಯ್ಯೂರು ಇವರ ಸಹಯೋಗದಲ್ಲಿ ಕೆಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯು 17 ವರ್ಷದೊಳಗಿನ ಪ್ರೌಢಶಾಲಾ ಬಾಲಕರ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಇದರಲ್ಲಿ 20 ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಸರಸ್ವತಿ ವಿಗ್ರಹ ಲೋಕಾರ್ಪಣೆ ಮತ್ತು ಅಕ್ಷರಾಭ್ಯಾಸ

ಸರಸ್ವತಿ ವಿಗ್ರಹ ಲೋಕಾರ್ಪಣೆ ಮತ್ತು ಅಕ್ಷರಾಭ್ಯಾಸ

Saturday, September 30th, 2017

ಭಾರತೀಯತೆಗೆ ಸನಾತನ ಧರ್ಮವೇ ತಳಹದಿ – ಬ್ರಹ್ಮಶ್ರೀ ಕುಂಟಾರು ರವೀಶ್‌ ತಂತ್ರಿ ಆದಿಗುರು ಶ್ರೀ ಶಂಕರಾಚಾರ್ಯರು, ಸ್ವಾಮಿ ವಿವೇಕಾನಂದರಂತಹ ಸಾಧಕರು ಭಾರತದ ಸಂಸ್ಕಾರ, ಧರ್ಮದ ಬಗ್ಗೆ ಆಳವಾದ ಅಧ್ಯಯನ ನಡೆಸಿ, ಸನಾತನ ಧರ್ಮವೇ ನಮ್ಮೆಲ್ಲಾ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಏಳಿಗೆಗೆ ತಳಹದಿ ಎಂದು ಸಾರಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾಕ್ಟರ್ ಜೀಯವರು, ಸನಾತನ ಧರ್ಮವೇ ಈ ದೇಶದ ಜೀವಾಳವಾಗಿದ್ದು ಈ ಕಾರಣದಿಂದಲೇ ಭಾರತವು ಪ್ರಪಂಚಕ್ಕೆ ಗುರುವಿನ ಸ್ಥಾನದಲ್ಲಿದೆ ಎಂದಿದ್ದರು. ಇಂತಹ ಸಂಸ್ಕಾರ ಸುಧೆಯನ್ನು ಸ್ವೀಕರಿಸಿ ಹಿರಿಯರು […]

ಯಕ್ಷಚಿಣ್ಣರ ಬಳಗ ಮಠಂತಬೆಟ್ಟುವಿನಲ್ಲಿ

ಯಕ್ಷಚಿಣ್ಣರ ಬಳಗ ಮಠಂತಬೆಟ್ಟುವಿನಲ್ಲಿ

Thursday, September 28th, 2017

ಶ್ರೀಮಹೀಷಮರ್ಧಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಯಕ್ಷಚಿಣ್ಣರ ಬಳಗದಿಂದ ’ತಾಟಕಿ ಸಂಹಾರ- ಖರಾಸುರ ವಧೆ’ ಎಂಬ ಪುಣ್ಯಕಥಾ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಹಾಗೂ ಚಂದ್ರಶೇಖರ್ ಸುಳ್ಯಪದವು ಇವರ ನಿರ್ದೇಶನದಲ್ಲಿ ನಡೆಯಿತು.

ಶಾಲೆಗೆ ಸರಸ್ವತಿ ದೇವಿಯ ವಿಗ್ರಹ ಆಗಮನ

ಶಾಲೆಗೆ ಸರಸ್ವತಿ ದೇವಿಯ ವಿಗ್ರಹ ಆಗಮನ

Thursday, September 28th, 2017

ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರತಿಷ್ಠಾಪಿಸಲಿರುವ ಸರಸ್ವತಿ ದೇವಿ ವಿಗ್ರಹದ ಮೆರವಣಿಗೆಯು ಸೆ.೨೮ರಂದು ನಡೆಯಿತು. ಕಾರ್ಕಳದಲ್ಲಿ ತಯಾರಿಸಲ್ಪಟ್ಟ ವಿಗ್ರಹವು ಸೆ. 28 ರಂದು ನೆಹರು ನಗರದಲ್ಲಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಛೇರಿ ನರೇಂದ್ರಕ್ಕೆ ಆಗಮಿಸಿದೆ. ಸೆ. 28 ರಂದು ಬೊಳುವಾರು ವೃತ್ತದ ಬಳಿಯಿಂದ ಹೊರಟು ಮೆರವಣಿಗೆಯು ಮುಖ್ಯ ರಸ್ತೆಯ ಮೂಲಕ ಸಾಗಿ ಮಹಾಲಿಂಗೇಶ್ವರ ದೇವಸ್ಥಾನ, ವೆಂಕಟ್ರಮಣ ದೇವಸ್ಥಾನ, ಮಹಮ್ಮಾಯಿ ದೇವಸ್ಥಾನ ಹಾಗೂ ಭವಾನಿ ಶಂಕರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ತೆಂಕಿಲ ವಿದ್ಯಾಸಂಸ್ಥೆಗೆ ಆಗಮಿಸಿತು. ಬಳಿಕ […]

ಯಕ್ಷಗಾನ ಬಯಲಾಟ

ಯಕ್ಷಗಾನ ಬಯಲಾಟ

Saturday, September 23rd, 2017

ದಿನಾಂಕ 22-9-2017 ರಂದು ಮಂಗಳೂರಿನ ಕದ್ರಿ ಮಂಜುನಾಥೇಶ್ವರದೇವಸ್ಥಾನದ ವಠಾರದಲ್ಲಿ ನವರಾತ್ರಿಯ ಅಂಗವಾಗಿ ಕದಳಿ ಕಲಾ ಕೇಂದ್ರದವರು ನಡೆಸಲ್ಪಡುವ ಮಕ್ಕಳ ಯಕ್ಷಗಾನ ಪ್ರದರ್ಶನದಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯಯಕ್ಷಚಿಣ್ಣರ ಬಳಗ ಶ್ರೀರಾಮಕಾರುಣ್ಯ ಎಂಬ ಪುಣ್ಯಕಥಾ ಭಾಗವನ್ನು ಆಡಿ ತೋರಿಸಿದರು. ಯಕ್ಷ ಗುರುಗಳಾದ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಮತ್ತು ಶ್ರೀ ಚಂದ್ರಶೇಖರ ಸುಳ್ಯ ಪದವುರವರ ಸಂಯೋಜನೆಯಲ್ಲಿ ನಡೆಯಿತು.

ಯಕ್ಷಗಾನ ಸ್ಪರ್ಧೆ ಸಮಾರೋಪ ಸಮಾರಂಭ

ಯಕ್ಷಗಾನ ಸ್ಪರ್ಧೆ ಸಮಾರೋಪ ಸಮಾರಂಭ

Thursday, September 14th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಯಕ್ಷಗಾನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಡವರ ಬಂಧು ಶೈಕ್ಷಣಿಕ ಕಾಳಜಿಯುಳ್ಳ ಶ್ರೀಯುತ ಅಶೋಕ್‌ ರೈ ಕೋಡಿಂಬಾಡಿಯವರು ಉಪಸ್ಥಿತರಿದ್ದು ಯಕ್ಷಗಾನವು ಕರಾವಳಿ ಭಾಗದ ಶ್ರೇಷ್ಠ ಕಲೆಯಾಗಿದೆ ಅದನ್ನು ಉಳಿಸುವಲ್ಲಿ ಶಿಕ್ಷಣ ಸಂಸ್ಥೆಗಳು ಈ ರೀತಿ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು, ಅಲ್ಲದೇ ತಮ್ಮ ಬಾಲ್ಯದ ನೆನಪುಗಳ ಪುಟವನ್ನು ತೆರೆದಿಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಣಿಪುರಯಕ್ಷಗಾನ ಪತ್ರಿಕೆಯ ಸಂಪಾದಕರಾದ ಶ್ರೀನಾರಾಯಣ ಚಂಬಲ್ತಿಮಾರ್ ಮಾತನಾಡಿ’ ಮಕ್ಕಳಲ್ಲಿ ಎಳವೆಯಲ್ಲಿಯೇ […]

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ- ಶಾಲಾ ಕವ್ವಾಲಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ- ಶಾಲಾ ಕವ್ವಾಲಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Thursday, September 14th, 2017

ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಾರ್ವರಿ, ಪ್ರಜ್ಞಾ ನಿಡ್ವಣ್ಣಾಯ, ವಂಶಿ, ತನ್ಮಯಿ ವಾಗ್ಲೆ, ಇಶಾ, ಶ್ರೀಲಕ್ಷ್ಮೀ ಇವರ ಕವ್ವಾಲಿ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಗುರುವಂದನೆ’

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಗುರುವಂದನೆ’

Wednesday, September 13th, 2017

ನಮ್ಮ ಭಾರತದೇಶದಲ್ಲಿ ಗುರುಗಳ ಮಹತ್ವವನ್ನು ಅರಿತು ಗೌರವಿಸುವ, ಅದರ ಶ್ರೇಷ್ಠತೆಯನ್ನು ಎತ್ತಿ ಹಿಡಿಯುವ ಭವ್ಯಪರಂಪರೆಯೇ ಇದೆ. ಪುರಾಣ ಪುರುಷರ ಮಹಾನ್ ಸಾಧಕರ ಸಾಧನೆಯ ಹಿಂದೆ ಉತ್ತಮ ಗುರುಗಳ ಮಾರ್ಗದರ್ಶನವನ್ನು ನಾವು ಕಾಣಬಹುದು. ಶೃಂಗೇರಿಯ ಶಾರಾದಾಪೀಠದ ಸ್ಥಾಪಕರಾದ ಶಂಕರಾಚಾರ್ಯರು ಆದರ್ಶ ಶಿಷ್ಯ ಕೋಟಿಯನ್ನು ಹೊಂದಿದ್ದು, ದೇಶದಾದ್ಯಂತ ಶಾಖಾಪೀಠಗಳ ಮೂಲಕ ಸಮಾಜದ ಜನರ ಸಂಸ್ಕಾರ ಸಂಸ್ಕೃತಿಗಳನ್ನು ಔನ್ನತ್ಯದೆಡೆಗೆ ಕೊಂಡೊಯ್ಯುವ ಸಾರ್ಥಕ ಕಾರ್ಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ವಿವೇಕಾನಂದ ಸಂಸ್ಥೆಯು ಗುರುಗಳನ್ನು ಗೌರವಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದೆ ಎಂದು […]

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ : ಚಿತ್ರಕಲೆಯಲ್ಲಿ ಮುಖೇಶ್ ಕೃಷ್ಣನಿಗೆ ತೃತೀಯ

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ : ಚಿತ್ರಕಲೆಯಲ್ಲಿ ಮುಖೇಶ್ ಕೃಷ್ಣನಿಗೆ ತೃತೀಯ

Wednesday, September 13th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆದ ಹಿರಿಯ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಖೇಶ್ ಕೃಷ್ಣ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಪೂಜಾರಿ ಶೇರಾ ಇವರು ತರಬೇತಿ ನೀಡಿರುತ್ತಾರೆ.

ಖೋ - ಖೋ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಖೋ – ಖೋ ವಿಭಾಗೀಯ ಮಟ್ಟಕ್ಕೆ ಆಯ್ಕೆ

Wednesday, September 13th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 14 ರ ವಯೋಮಾನದ ಬಾಲಕರ ವಿಭಾಗದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಗುರುಪ್ರಸಾದ್ ಮತ್ತು ಪವನ್‌ಕುಮಾರ್ ಭಾಗವಹಿಸಿ ಮೈಸೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಕಬಡ್ಡಿ-ಜಿಲ್ಲಾಮಟ್ಟಕ್ಕೆ ಆಯ್ಕೆ

ಕಬಡ್ಡಿ-ಜಿಲ್ಲಾಮಟ್ಟಕ್ಕೆ ಆಯ್ಕೆ

Wednesday, September 13th, 2017

ಸುಳ್ಯ ತಾಲೂಕಿನ ಜ್ಞಾನ ದೀಪ ಎಲಿಮಲೆ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯರಾದ ತೃಪ್ತಿ ಮತ್ತು ಅಂಕಿತಾ ಇವರು ಪುತ್ತೂರು ತಾಲೂಕಿನ ಪ್ರಾಥಮಿಕ ಶಾಲಾ ತಂಡಕ್ಕೆ ಆಯ್ಕೆಯಾಗಿರುತ್ತಾರೆ.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ - ಕವ್ವಾಲಿ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – ಕವ್ವಾಲಿ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Friday, September 8th, 2017

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಾರ್ವರಿ, ಪ್ರಜ್ಞಾ ನಿಡ್ವಣ್ಣಾಯ, ವಂಶಿ, ತನ್ಮಯಿ ವಾಗ್ಲೆ, ಇಶಾ, ಶ್ರೀಲಕ್ಷ್ಮೀ ಇವರ ಕವ್ವಾಲಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ತಾಲೂಕು ಮಟ್ಟದ ಪ್ರತಿಭಾಕಾರಂಜಿ - ಯಕ್ಷಗಾನ ಸ್ಪರ್ಧೆ : ಪರೀಕ್ಷಿತ್ - ಪ್ರಥಮ

ತಾಲೂಕು ಮಟ್ಟದ ಪ್ರತಿಭಾಕಾರಂಜಿ – ಯಕ್ಷಗಾನ ಸ್ಪರ್ಧೆ : ಪರೀಕ್ಷಿತ್ – ಪ್ರಥಮ

Friday, September 8th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಹಿರಿಯ ಪ್ರಾಥಮಿಕ ವಿಭಾಗದ ಯಕ್ಷಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪರೀಕ್ಷಿತ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಿಕ್ಷಕರಾದ ಚಂದ್ರಶೇಖರ್ ಸುಳ್ಯಪದವು ಮತ್ತು ನೃತ್ಯ ಗುರುಗಳಾದ ಬಾಲಕೃಷ್ಣ ಉಡ್ಡಂಗಲ ತರಬೇತಿ ನೀಡಿರುತ್ತಾರೆ.

ಯೋಗ ಸ್ಪರ್ಧೆ

ಯೋಗ ಸ್ಪರ್ಧೆ

Friday, September 8th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಾರಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪುನೀತ್ (ಪ್ರಥಮ), ಲಿಖಿತ್ (ದ್ವಿತೀಯ), ಭರತ್ (ಪಂಚಮ) ಸ್ಥಾನವನ್ನು ಪಡೆದಿರುತ್ತಾರೆ. ಮತ್ತು ಬಾಲಕಿಯರ ವಿಭಾಗದಲ್ಲಿ ಹೇಮಶ್ರೀ (ದ್ವಿತೀಯ), ವೈಶಾಲಿ(ತೃತೀಯ) ಹಾಗೂ ಮಧುಶ್ರೀ (ಪಂಚಮ) ಸ್ಥಾನವನ್ನು ಪಡೆದು ಜಿಲ್ಲಾಮಟ್ಟದ ಯೋಗಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಜಿಲ್ಲಾ ಮಟ್ಟದ ಜ್ಞಾನ - ವಿಜ್ಞಾನ ಮೇಳ - ಶಾಲೆಗೆ ಹಲವು ಪ್ರಶಸ್ತಿ

ಜಿಲ್ಲಾ ಮಟ್ಟದ ಜ್ಞಾನ – ವಿಜ್ಞಾನ ಮೇಳ – ಶಾಲೆಗೆ ಹಲವು ಪ್ರಶಸ್ತಿ

Friday, September 8th, 2017

ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಜ್ಞಾನ- ವಿಜ್ಞಾನ ಮೇಳದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ. ವಿಜ್ಞಾನ ಪ್ರದರ್ಶನ ಸ್ಪರ್ಧೆ : ಶಿಶುವರ್ಗ – ಪ್ರಮಥ ಎಂ ಭಟ್ – ತೃತೀಯ, ಧಾತ್ರಿ ಆರ್ ರೈ – ತೃತೀಯ ಕಿಶೋರ ವರ್ಗ – ಆಶ್ರಯ್ ಪಿ.ವಿ ಮತ್ತು ರಕ್ಷಿತಾ ಡಿ – ಪ್ರಥಮ, ಧನುಷ್ ಮತ್ತು ಸ್ವಸ್ತಿಕ್ ಬಿ.ವಿ – ಪ್ರಥಮ, ಪ್ರತೀಕ್ […]

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ- 2017 : ದೃಶ್ಯ ಕಲೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ- 2017 : ದೃಶ್ಯ ಕಲೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ

Thursday, September 7th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ದೃಶ್ಯ ಕಲಾ ವಿಭಾಗದಲ್ಲಿ ಗೌತಮ್- ಚಿತ್ರಕಲೆ, ಅಮಿತಾ ಎಸ್.ಎನ್-ಕ್ಲೇ ಮಾಡೆಲ್, ಜನನಿ.ಬಿ – ಪೇಪರ್‌ಕ್ರಾಫ್ಟ್, ಧನ್ಯಕುಮಾರ್-ಕರಕುಶಲ ಕಲೆ ಈ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಪೂಜಾರಿ ಶೇರಾ ಇವರು ತರಬೇತಿ ನೀಡಿರುತ್ತಾರೆ.

ಜೆ.ಎಸ್.ಕೆ.ಎ ರಾಜ್ಯಮಟ್ಟದ ಕರಾಟೆ : ಸಾತ್ವಿಕ್‌ಗೆ ಬೆಸ್ಟ್ ಫೈಟರ್ ಅವಾರ್ಡ್

ಜೆ.ಎಸ್.ಕೆ.ಎ ರಾಜ್ಯಮಟ್ಟದ ಕರಾಟೆ : ಸಾತ್ವಿಕ್‌ಗೆ ಬೆಸ್ಟ್ ಫೈಟರ್ ಅವಾರ್ಡ್

Wednesday, September 6th, 2017

ದಿನಾಂಕ 3-9-2017 ರಂದು ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಸಭಾಭವನ ಸುಕಂದಕಟ್ಟೆ, ಮಂಗಳೂರು ಇಲ್ಲಿ ನಡೆದ 2ನೇ ರಾಜ್ಯಮಟ್ಟದ ಜೆ.ಎಸ್.ಕೆ.ಎ ಕರಾಟೆ ಚಾಂಪಿಯನ್ ಷಿಪ್‌ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಸಾತ್ವಿಕ್ ಶರ್ಮ ಬಿ.ಎಸ್ ’ಬೆಸ್ಟ್ ಫೈಟರ್’ (Grand Champion Kumite) ಪ್ರಶಸ್ತಿಯನ್ನು ಗಳಿಸಿರುತ್ತಾರೆ. ಇವರು ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ್‌ನ ಮಂಗಳೂರಿನ ನಿತಿನ್ ಎನ್ ಸುವರ್ಣ (Black Belt 4th DAN) , ಸಂಪತ್ ಕುಮಾರ್ ಹಾಗೂ ಶಿವಪ್ರಸಾದ್‌ರವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. […]

Highslide for Wordpress Plugin