ಉನ್ನತ ವ್ಯಕ್ತಿತ್ವಕ್ಕೆ ಯೋಜನೆ, ಯೋಚನೆ ಅಗತ್ಯ - ಕೃಷ್ಣಪ್ರಸಾದ್

ಉನ್ನತ ವ್ಯಕ್ತಿತ್ವಕ್ಕೆ ಯೋಜನೆ, ಯೋಚನೆ ಅಗತ್ಯ – ಕೃಷ್ಣಪ್ರಸಾದ್

Saturday, April 7th, 2018

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳ ದೀಕ್ಷಾಂತ ಕಾರ್ಯಕ್ರಮ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ಮಾತೃಪೂಜನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗದ ಪ್ರಚಾರಕರಾದ ಶ್ರೀ ಕೃಷ್ಣಪ್ರಸಾದ್‌ ಇವರು ಮಾತನಾಡಿ ದೀಪವು ತಾನೊಂದು ಸುತ್ತಲೂ ಬೆಳಕನ್ನು ಚೆಲ್ಲಿ ಸಾರ್ಥಕತೆಯನ್ನು ಕಾಣುವಂತೆ ನಾವೂ ಸ್ವಾರ್ಥರಹಿತವಾಗಿ ಸಮಾಜ ದೇವನ ಕಾರ್ಯಕ್ಕೆ ಮುಂದಾಗಬೇಕು. ಜೀವನದಲ್ಲಿ ಬರುವ ಅವಕಾಶಗಳನ್ನು […]

ಅಭಿವ್ಯಕ್ತಿ ಮಂಟಪ - ರಜಾ ಮಜಾ ಬೇಸಿಗೆ ಶಿಬಿರದ ಸಮಾರೋಪ

ಅಭಿವ್ಯಕ್ತಿ ಮಂಟಪ – ರಜಾ ಮಜಾ ಬೇಸಿಗೆ ಶಿಬಿರದ ಸಮಾರೋಪ

Friday, April 6th, 2018

ದಿನಾಂಕ 22-03-2018 ರಿಂದ  31-03-2018 ರವರೆಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅಭಿವ್ಯಕ್ತಿ ಮಂಟಪ-ರಜಾ ಮಜಾ ಶಿಬಿರದಲ್ಲಿ 56 ಮಕ್ಕಳು ಪಾಲ್ಗೊಂಡಿದ್ದು ಸಂಸ್ಕೃತಿ ಶಿಕ್ಷಣದೊಂದಿಗೆ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ಒಳಗೊಂಡಿತ್ತು. ಪೋಷಕರಾದ ಶ್ರೀ ಪ್ರಕಾಶ ವಾಗ್ಲೆಯವರು ಮಾತನಾಡಿ ಮಗುವಿಗೆ ಒಂದು ಉತ್ತಮ ವೇದಿಕೆಯನ್ನು ಈ ಶಿಬಿರವು ಒದಗಿಸಿಕೊಟ್ಟಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ಶಿಬಿರಾರ್ಥಿಗಳಿಂದ ಪ್ರಹಸನವನ್ನು ಪ್ರದರ್ಶಿಸಲಾಯಿತು. ಶಿಬಿರಾರ್ಥಿಗಳಾದ ಅಮೃತ್ ವಿ. ಸ್ವಾಗತಿಸಿ ಆದಿತ್ಯ, ಲಹರಿ, ಹರಿಣಿ, ತನ್ಮಯ ವಾಗ್ಲೆ ಶಿಬಿರದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಸಹಶಿಕ್ಷಕಿ […]

ಮನಸ್ಸು ಸದಾ ಚಟುವಟಿಕೆಗಳಿಂದಿರಲು ರಜಾ ಶಿಬಿರಗಳು ಪೂರಕ- ಶ್ರೀ ಚಂದ್ರಶೇಖರ್ ಶೇಟ್

ಮನಸ್ಸು ಸದಾ ಚಟುವಟಿಕೆಗಳಿಂದಿರಲು ರಜಾ ಶಿಬಿರಗಳು ಪೂರಕ- ಶ್ರೀ ಚಂದ್ರಶೇಖರ್ ಶೇಟ್

Monday, March 26th, 2018

ವಿಶ್ರಾಂತ ಮನಸ್ಸುಗಳಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಅಸಾಧ್ಯ. ಮನಸ್ಸುಗಳನ್ನು ಖಾಲಿ ಬಿಡದೆ ಸದಾ ಚಟುವಟಿಕೆಗಳಿಂದಿರಲು ಪ್ರೇರಣೆ ನೀಡಿದರೆ ಮಕ್ಕಳ ಅಸಾಧಾರಣ ಪ್ರತಿಭೆಗಳು ಅನಾವರಣಗೊಳ್ಳುವುದು ಅದಕ್ಕಾಗಿ ರಜಾಶಿಬಿರಗಳು ಪೂರಕಎಂದು ಶ್ರೀ ವಿಷ್ಣುಮೂರ್ತಿಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಪಟ್ಟೂರುಇಲ್ಲಿನ ಮುಖ್ಯ ಗುರುಗಳಾದ ಶ್ರೀ ಚಂದ್ರಶೇಖರ್ ಶೇಟ್‌ಇವರು ವಿವೇಕಾನಂದಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅಭಿವ್ಯಕ್ತಿ ಮಂಟಪ ರಜಾ- ಮಜಾ ಶಿಬಿರವನ್ನು ಉದ್ಫಾಟಿಸಿ ಮಾತನಾಡಿದರು. ’ಮಕ್ಕಳಿಗೆ ಪುಸ್ತಕವೇ ಮೊದಲ ಮಿತ್ರನಾಗಿರಬೇಕುಗುರು- ಹಿರಿಯರನ್ನು ಗೌರವಿಸಬೇಕು. ಸಮಾಜದಲ್ಲಿಆದರ್ಶ ವ್ಯಕ್ತಿಗಳಾಗಿ ಬದುಕಬೇಕು’ ಎಂದು ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ನುಡಿಗಳನ್ನಾಡಿದರು. […]

ಯಕ್ಷವೈಭವ

ಯಕ್ಷವೈಭವ

Saturday, March 24th, 2018

ಕೆಮ್ಮಾರಿನ ನೆಕ್ಕರಾಜೆ ಶ್ರೀ ಬಾಬು ಗೌಡರವರ ಶ್ರೀ ರಾಮ ನಿಲಯ ಗೃಹಪ್ರವೇಶದ ಸಂದರ್ಭದಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ಯಕ್ಷ ಚಿಣ್ಣರ ಬಳಗದಿಂದ ’ ವೀರಮಣಿ ಕಾಳಗ- ವೀರ ಕುಶಲವ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು. ಈ ಕಾರ್ಯಕ್ರಮವು ಯಕ್ಷ ನಿರ್ದೇಶಕರಾದ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಮತ್ತು ಸಂಯೋಜಕರಾದ ಶ್ರೀ ಚಂದ್ರಶೇಖರ್ ಸುಳ್ಯಪದವು ಇವರ ನೇತೃತ್ವದಲ್ಲಿ ನಡೆಯಿತು.

ಯಕ್ಷಚಿಣ್ಣರ ಯಕ್ಷ ವೈಭವ

ಯಕ್ಷಚಿಣ್ಣರ ಯಕ್ಷ ವೈಭವ

Saturday, March 24th, 2018

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಯಕ್ಷ ಚಿಣ್ಣರ ಬಳಗದಿಂದ ’ಶಾಂಭವೀ ವಿಜಯ’ – ಶ್ರೀ ರಾಮ ದರ್ಶನ’ ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನವು ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮನಸೆಳೆಯಿತು. ಈ ಕಾರ್ಯಕ್ರಮವು ಯಕ್ಷ ನಿರ್ದೇಶಕರಾದ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಮತ್ತು ಸಂಯೋಜಕರಾದ ಶ್ರೀ ಚಂದ್ರಶೇಖರ್ ಸುಳ್ಯಪದವು ಇವರ ನೇತೃತ್ವದಲ್ಲಿ ನಡೆಯಿತು.

ಮನಸ್ಸು ಸದಾ ಚಟುವಟಿಕೆಗಳಿಂದಿರಲು ರಜಾ ಶಿಬಿರಗಳು ಪೂರಕ- ಶ್ರೀ ಚಂದ್ರಶೇಖರ್ ಶೇಟ್

ಮನಸ್ಸು ಸದಾ ಚಟುವಟಿಕೆಗಳಿಂದಿರಲು ರಜಾ ಶಿಬಿರಗಳು ಪೂರಕ- ಶ್ರೀ ಚಂದ್ರಶೇಖರ್ ಶೇಟ್

Thursday, March 22nd, 2018

ವಿಶ್ರಾಂತ ಮನಸ್ಸುಗಳಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಅಸಾಧ್ಯ. ಮನಸ್ಸುಗಳನ್ನು ಖಾಲಿ ಬಿಡದೆ ಸದಾ ಚಟುವಟಿಕೆಗಳಿಂದಿರಲು ಪ್ರೇರಣೆ ನೀಡಿದರೆ ಮಕ್ಕಳ ಅಸಾಧಾರಣ ಪ್ರತಿಭೆಗಳು ಅನಾವರಣಗೊಳ್ಳುವುದು ಅದಕ್ಕಾಗಿ ರಜಾಶಿಬಿರಗಳು ಪೂರಕಎಂದು ಶ್ರೀ ವಿಷ್ಣುಮೂರ್ತಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಪಟ್ಟೂರು ಇಲ್ಲಿನ ಮುಖ್ಯ ಗುರುಗಳಾದ ಶ್ರೀ ಚಂದ್ರಶೇಖರ್ ಶೇಟ್‌ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅಭಿವ್ಯಕ್ತಿ ಮಂಟಪರಜಾ- ಮಜಾ ಶಿಬಿರವನ್ನು ಉದ್ಫಾಟಿಸಿ ಮಾತನಾಡಿದರು. ’ಮಕ್ಕಳಿಗೆ ಪುಸ್ತಕವೇ ಮೊದಲ ಮಿತ್ರನಾಗಿರಬೇಕು ಗುರು- ಹಿರಿಯರನ್ನು ಗೌರವಿಸಬೇಕು. ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ […]

ಕೃಷ್ಣನಿಗೆ ಬಣ್ಣ ಹಚ್ಚುವ ಸ್ಪರ್ಧೆ - ಜಿಲ್ಲಾಮಟ್ಟದಲ್ಲಿ ಪ್ರಥಮ

ಕೃಷ್ಣನಿಗೆ ಬಣ್ಣ ಹಚ್ಚುವ ಸ್ಪರ್ಧೆ – ಜಿಲ್ಲಾಮಟ್ಟದಲ್ಲಿ ಪ್ರಥಮ

Monday, March 5th, 2018

ಇಸ್ಕಾನ್ ಸಂಸ್ಥೆಯ ಇಸ್ಕಾನ್ ಮಂಗಳೂರು ಇದರ ವತಿಯಿಂದ ನಡೆಸಲ್ಪಟ್ಟ ಕೃಷ್ಣನಿಗೆ ಬಣ್ಣಹಚ್ಚುವ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಕು. ಕುಶಿತಾ ಬಿ. (ಬೆಳಿಯೂರುಕಟ್ಟೆ ನಿವಾಸಿ ಹರೀಶ್ ಬಿ ಮತ್ತು ಲಲಿತ.ಕೆ ದಂಪತಿಗಳ ಪುತ್ರಿ) ಇವಳು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಆಯ್ಕೆಯಾಗಿರುತ್ತಾಳೆ.

ಚಿತ್ರ ಕಲೆ ಗ್ರೇಡ್ ಪರೀಕ್ಷೆಯಲ್ಲಿ 100% ಫಲಿತಾಂಶ

ಚಿತ್ರ ಕಲೆ ಗ್ರೇಡ್ ಪರೀಕ್ಷೆಯಲ್ಲಿ 100% ಫಲಿತಾಂಶ

Monday, February 26th, 2018

ತಾಲೂಕಿಗೆ ಪ್ರಥಮ, ದ್ವಿತೀಯ ಸ್ಥಾನ ಪಡೆದ ಶಾಲಾ ವಿದ್ಯಾರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು 2017-18 ರ ಸಾಲಿನಲ್ಲಿ ನಡೆಸಿದ ಚಿತ್ರಕಲೆ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಿಂದ ಲೋವರ್‌ಗ್ರೇಡ್‌ನಲ್ಲಿ 18 ಮಕ್ಕಳು ಹಾಜರಾಗಿದ್ದಾರೆ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಮತ್ತು 9 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಹೈಯರ್ ಗ್ರೇಡ್ ವಿಭಾಗದಲ್ಲಿ 18 ಮಕ್ಕಳು ಹಾಜರಾಗಿ 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿ ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. 14 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ […]

ಯಕ್ಷ ಸಂಭ್ರಮ

ಯಕ್ಷ ಸಂಭ್ರಮ

Thursday, February 22nd, 2018

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಯಕ್ಷ ಚಿಣ್ಣರ ಬಳಗದ ’ಯಕ್ಷ ಸಂಭ್ರಮ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಲ್ಲಿರೇನಯ್ಯಾ ಪತ್ರಿಕೆಯ ಸಂಪಾದಕರಾದ ಶ್ರೀ ತಾರಾನಾಥ ವರ್ಕಾಡಿಯವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಕ್ಕಳು ಇತ್ತೀಚೆಗೆ ಯಕ್ಷಗಾನ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಸಂತೋಷದ ವಿಚಾರ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧೀ ಶಕ್ತಿ ಮಹಿಳಾ ಯಕ್ಷಗಾನ ತಂಡದ ನಿರ್ದೇಶಕಿ ಶ್ರೀಮತಿ ಪದ್ಮ ಆಚಾರ್‌ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯ ಕಲಾವಿದ ಶ್ರೀ ಉಜಿರೆ ನಾರಾಯಣ […]

ಚಿಣ್ಣರ ಪಾರ್ಕ್‌ಉದ್ಫಾಟನೆ

ಚಿಣ್ಣರ ಪಾರ್ಕ್‌ಉದ್ಫಾಟನೆ

Thursday, February 22nd, 2018

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ’ಚಿಲಿಪಿಲಿ ಚಿಣ್ಣರ ಪಾರ್ಕ್’ನ್ನು ಕೇಂದ್ರ ಕೌಶಲ ಅಭಿವೃದ್ಧಿ ರಾಜ್ಯ ಸಚಿವರಾದ ಶ್ರೀ ಅನಂತ್‌ಕುಮಾರ್ ಹೆಗಡೆ ಅವರು ತೆಂಗಿನಕಾಯಿ ಒಡೆದು ಉದ್ಫಾಟಿಸಿದರು. ಬಳಿಕ ಪುಟಾಣಿಗಳನ್ನು ಉಯ್ಯಾಲೆಯಲ್ಲಿ ಕುಳ್ಳಿರಿಸುವ ಮುಖಾಂತರ ಪಾರ್ಕ್‌ಗೆ ಚಾಲನೆ ನೀಡಿದರು. ಸಚಿವರನ್ನು ಶಾಲಾ ವಿದ್ಯಾರ್ಥಿಗಳು ಆರತಿ ಬೆಳಗಿ ತಿಲಕವಿಟ್ಟು, ವೀಳ್ಯ ನೀಡಿ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತಿಸಿದರು.

ಭಾರತೀಯತೆ ರಕ್ತಗತವಾಗಿ ನಮ್ಮ ವ್ಯಕ್ತಿತ್ವದಲ್ಲಿ ಒಡಮಾಡಬೇಕು - ಬಾಲಕೃಷ್ಣ ಹೊಸಮನೆ

ಭಾರತೀಯತೆ ರಕ್ತಗತವಾಗಿ ನಮ್ಮ ವ್ಯಕ್ತಿತ್ವದಲ್ಲಿ ಒಡಮಾಡಬೇಕು – ಬಾಲಕೃಷ್ಣ ಹೊಸಮನೆ

Monday, February 12th, 2018

ಮಕ್ಕಳಿಗೆ ಶಾಲೆಗಳಲ್ಲಿ ನೀಡುವ ಶೈಕ್ಷಣಿಕ ಪಠ್ಯಕ್ರಮದೊಂದಿಗೆ ಕ್ರೀಡೆ, ಲಲಿತ ಕಲೆಗಳಿಗೂ ಪ್ರಾಮುಖ್ಯತೆ ನೀಡಿದಾಗ ಭಾರತೀಯತೆಯೊಂದಿಗೆ ವ್ಯಕ್ತಿತ್ವವೂ ವಿಕಸನಗೊಳ್ಳುತ್ತದೆ. ಸಾಹಿತ್ಯಕ್ಕೂ ಕ್ರಿಯೆಗೂ ಹೊಂದಾಣಿಕೆಯಾದಾಗ ಗುರು ಶಿಷ್ಯ ಪರಂಪರೆಗೂ ಮಹತ್ವವಿದ್ದಾಗ ವಿದ್ಯಾರ್ಥಿಗಳಿಗೆ ಮನುಷ್ಯತ್ವ, ಸರಳತೆ, ಸೌಜನ್ಯತೆ, ಬದ್ಧತೆ, ಶಿಸ್ತಿನೊಂದಿಗೆ ಹಿರಿಯರನ್ನು ಗೌರವದಿಂದ ಕಾಣುವ ಜೀವನ ಸತ್ವ, ಮೌಲ್ಯಗಳನ್ನು ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಶ್ರೀ ಬಾಲಕೃಷ್ಣ ಹೊಸಮನೆ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಗಾನ – ನಾಟ್ಯ- ವೈಭವ ಕಾರ್ಯಕ್ರಮದಲ್ಲಿ […]

ರಾಮಾಯಣ ಪರೀಕ್ಷೆ - ತಾಲೂಕಿಗೆ ಪ್ರಥಮ

ರಾಮಾಯಣ ಪರೀಕ್ಷೆ – ತಾಲೂಕಿಗೆ ಪ್ರಥಮ

Friday, February 9th, 2018

ಬೆಂಗಳೂರಿನ ಭಾರತ ಸಂಸ್ಕೃತಿ ಪ್ರತಿಷ್ಠಾನ ವತಿಯಿಂದ ನಡೆದ ರಾಜ್ಯ ಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಟಿ. (ಬಾಲಸುಬ್ರಹ್ಮಣ್ಯ ಟಿ. ಮತ್ತು ರೇಷ್ಮಾ ಡಿ.ವಿ. ದಂಪತಿಗಳ ಪುತ್ರಿ) ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

2017-18 ನೇ ಸಾಲಿನಲ್ಲಿ ಶಾಲೆಯಿಂದ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ವಿವರ

2017-18 ನೇ ಸಾಲಿನಲ್ಲಿ ಶಾಲೆಯಿಂದ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ವಿವರ

Friday, February 9th, 2018

ನವೆಂಬರ್ 7 ರಿಂದ 12 ರವರೆಗೆ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆದ 17 ರ ವಯೋಮಾನದ ಬಾಲಕ-ಬಾಲಕಿಯರ ಎಸ್.ಜಿ.ಎಫ್.ಐ. (ರಾಷ್ಟ್ರೀಯ ಮಟ್ಟದ ಶಾಲಾ ಕ್ರೀಡಾಕೂಟ)ದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿದ್ಯಾಭಾರತಿ ಕರ್ನಾಟಕ ವತಿಯಿಂದ ಭಾಗವಹಿಸಿರುತ್ತಾರೆ. ದೀಕ್ಷಾ ಕೆ.- 100 ಮೀ ಅಡೆತಡೆ ಓಟ, 4×100 ಮೀ ರಿಲೇ ಗಾಯತ್ರಿ – ಉದ್ದಜಿಗಿತ, ತ್ರಿವಿಧ ಜಿಗಿತ, 4×100 ಮೀ ರಿಲೇ ಚೈತ್ರಾ – 4×100 ಮೀ ರಿಲೇ ಕೃತಿ ಜಿ. ಶೆಟ್ಟಿ – 4×100 ಮೀ ರಿಲೇ ವಿಭಾ ಯು. ಎಸ್. – 3000 ಮೀ ವೇಗದ ನಡಿಗೆ […]

ಅಂತರಾಷ್ಟ್ರೀಯ ಕವನ ಸಂಕಲನಕ್ಕೆ ಆಯ್ಕೆ

ಅಂತರಾಷ್ಟ್ರೀಯ ಕವನ ಸಂಕಲನಕ್ಕೆ ಆಯ್ಕೆ

Wednesday, February 7th, 2018

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಂಗ್ಲಭಾಷಾ ಅಧ್ಯಾಪಕಿಯಾದ ಶ್ರೀಮತಿ ವಿದ್ಯಾ ಅನಿಲ್ ಮಲ್ಲಾರ್‌ರವರ ’ದ ಡಿವೈನ್ ಸೋಲ್ಸ್’ ಎಂಬ ಕವನವು ಅಮೆರಿಕಾದ ಇಂಟರ್‌ನ್ಯಾಶನಲ್ ಪೊಯೆಟ್ರಿ ಪ್ರೆಸ್‌ಬುಕ್‌ನಿಂದ ಪ್ರಕಟವಾಗುವ ‘ಫ್ರಂ ದ ಹಾರ್ಟ್’ ಪತ್ರಿಕೆಯ ವಾರ್ಷಿಕ ಸಂಚಿಕೆಗೆ ಆಯ್ಕೆಯಾಗಿದೆ. ಪತ್ರಿಕೆಯ ಸಂಪಾದಕರು ಈ ಕವಿತೆಯ ಅರ್ಥಗರ್ಭಿತ, ಹೃದಯ ಸ್ಪರ್ಶಿ ರಚನೆಗಾಗಿ ಆರಿಸಿಕೊಂಡಿರುತ್ತಾರೆ. ಇವರ ಈ ಕವನವು ಶಾಲೆಯ ಬೆಳ್ಳಿಹಬ್ಬದ ಸ್ಮರಣ ಸಂಚಿಕೆ ’ಸಮರ್ಪಣಾ’ದಲ್ಲಿ  ಪ್ರಕಟಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ

ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ

Wednesday, February 7th, 2018

ವಿವೇಕಾನಂದ ಕಾಲೇಜಿನ ಆವರಣದಲ್ಲಿರುವ ಧ್ಯಾನ ಮಂದಿರದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ -  ಶಾಲೆಗೆ ಪ್ರಶಸ್ತಿ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ –  ಶಾಲೆಗೆ ಪ್ರಶಸ್ತಿ

Wednesday, February 7th, 2018

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನಟ್ರಸ್ಟ್ (ರಿ) ಧರ್ಮಸ್ಥಳ ಇವರು ಏರ್ಪಡಿಸಿದ ’ಜ್ಞಾನ ಸಿರಿ’ ಪುಸ್ತಕಾಧಾರಿತ ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮುಖೇಶ್ ಕೃಷ್ಣ -ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ’ಜ್ಞಾನಐಸಿರಿ’ ಪುಸ್ತಕಾಧಾರಿತ ಪ್ರೌಢ ವಿಭಾಗದ ಚಿತ್ರಕಲೆಯಲ್ಲಿ ಗೌತಮ್‌ಎಸ್.- ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಮಾಹಿತಿ ಕಾರ್ಯಾಗಾರ

ಮಾಹಿತಿ ಕಾರ್ಯಾಗಾರ

Monday, February 5th, 2018

ನೂರೈವತ್ತು ವರ್ಷಗಳಿಗೊಮ್ಮೆ ಸಂಭವಿಸುವ ಪೂರ್ಣಚಂದ್ರಗ್ರಹಣಕ್ಕೆ ಸಂಬಂಧಿಸಿ ಗ್ರಹಣ ಎಂದರೇನು? ಗ್ರಹಣ ಹೇಗೆ ಸಂಭವಿಸುತ್ತದೆ. ಚಂದ್ರಗ್ರಹಣ ಮತ್ತು ಸೂರ್ಯಗ್ರಹಣಕ್ಕೆ ಇರುವ ವ್ಯತ್ಯಾಸದ ಕುರಿತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಗೆ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ಶಿವಪ್ರಸಾದ್ ಇವರು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ಹಾಗೂ ಸಂವಾದ ಕಾರ್ಯಾಗಾರ ನಡೆಸಿಕೊಟ್ಟರು.

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ - ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

Monday, January 29th, 2018

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನಟ್ರಸ್ಟ್ (ರಿ) ಧರ್ಮಸ್ಥಳ ಇವರು ಏರ್ಪಡಿಸಿದ ’ಜ್ಞಾನ ಸಿರಿ’ ಪುಸ್ತಕಾಧಾರಿತ ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮುಖೇಶ್ ಕೃಷ್ಣ -ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ’ಜ್ಞಾನಐಸಿರಿ’ ಪುಸ್ತಕಾಧಾರಿತ ಪ್ರೌಢ ವಿಭಾಗದ ಚಿತ್ರಕಲೆಯಲ್ಲಿ ಗೌತಮ್‌ಎಸ್- ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಶಿಸ್ತಿನ ಸಿಪಾಯಿಗಳಾಗಿ ದೇಶಸೇವೆಗೆ ಮುಂದಾಗಬೇಕು - ಕೆಡೆಟ್ ಕು. ವಿನಿತಾ

ಶಿಸ್ತಿನ ಸಿಪಾಯಿಗಳಾಗಿ ದೇಶಸೇವೆಗೆ ಮುಂದಾಗಬೇಕು – ಕೆಡೆಟ್ ಕು. ವಿನಿತಾ

Saturday, January 27th, 2018

ಸಂವಿಧಾನ ಶಿಲ್ಪಿ ಡಾ| ಬಿ. ಆರ್. ಅಂಬೆಡ್ಕರ್‌ರವರಿಂದ ಸಿದ್ಧಗೊಂಡ ಸಂವಿಧಾನದ ನಿಯಮಗಳಿಗೆ ಬದ್ಧರಾಗಿ ಸತ್ಯ, ನ್ಯಾಯ, ನಿಷ್ಠೆಯಿಂದ ದೇಶ ಸೇವೆಯಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ನಮ್ಮ ಜೀವನದಲ್ಲಿ ಶಿಸ್ತು ಅವಿಭಾಜ್ಯ ಅಂಗವಾಗಿದ್ದಾಗ ಪ್ರತಿಯೊಂದು ಕಾರ್ಯದಲ್ಲೂ ನಾವು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ 2016 ನೇ ವರ್ಷದಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಗಾರ್ಡ್‌ ಆಫ್ ಹಾನರ್‌ನಲ್ಲಿ ಭಾಗವಹಿಸಿರುವ ಕೆಡೆಟ್ ಕು. ವಿನಿತಾರವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು […]

ಸೂರ್ಯನಮಸ್ಕಾರ

ಸೂರ್ಯನಮಸ್ಕಾರ

Thursday, January 25th, 2018

ರಥಸಪ್ತಮಿಯ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 1 ರಿಂದ 9 ನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಸೂರ್ಯನಮಸ್ಕಾರದಲ್ಲಿ ಪಾಲ್ಗೊಂಡರು.

ಮಕ್ಕಳೊಂದಿಗೆ ಮಿತ್ರರಂತೆ ಇರಬೇಕು - ಬಿ.ವಿ. ಸೂರ್ಯನಾರಾಯಣ

ಮಕ್ಕಳೊಂದಿಗೆ ಮಿತ್ರರಂತೆ ಇರಬೇಕು – ಬಿ.ವಿ. ಸೂರ್ಯನಾರಾಯಣ

Monday, January 15th, 2018

10ನೇ ತರಗತಿ ಮಕ್ಕಳಿಗೆ ಮತ್ತು ಪೋಷಕರಿಗೆ ಕಾರ್ಯಾಗಾರ ಸೂಕ್ತ ಕಲಿಕಾ ವಾತಾವರಣದೊಂದಿಗೆ ಮಕ್ಕಳ ಧನಾತ್ಮಕ ಅಂಶಗಳಿಗೆ ಮೆಚ್ಚುಗೆ ವ್ಯಕ್ತಪಡಿಸುವ ಗುಣ ಹೆತ್ತವರಾದ ನಮ್ಮಲ್ಲಿರಬೇಕು. ಪರೀಕ್ಷಾ ಸಂದರ್ಭದಲ್ಲಿ ನಾವು ಅವರೊಂದಿಗೆ ಮಿತ್ರರಂತಿದ್ದು ಸೂಕ್ತ ಮಾರ್ಗದರ್ಶನ ನೀಡಬೇಕು ಎನ್ನುತ್ತಾ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿ ಮಕ್ಕಳ ಪೋಷಕರೊಂದಿಗೆ ಸಂವಾದ ನಡೆಸುತ್ತಾ ಅವರ ಪ್ರಶ್ನೆಗಳಿಗೆ ಸವಣೂರು ಕಾಲೇಜಿನ ಉಪನ್ಯಾಸಕರಾದ ಬಿ.ವಿ ಸೂರ್ಯನಾರಾಯಣ ಇವರು ಸಲಹೆ ನೀಡಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಶಾಲೆಯ ಹತ್ತನೇ ತರಗತಿ ಮಕ್ಕಳಿಗೆ ’ಪರೀಕ್ಷಾ […]

ವಿವೇಕ ಜಯಂತಿ

ವಿವೇಕ ಜಯಂತಿ

Thursday, January 11th, 2018

ದಿವ್ಯಚೇತನವುಳ್ಳ ನರೇಂದ್ರ ಎನ್ನುವ ಬಾಲಕನು ಮುಂದೆ ರಾಮಕೃಷ್ಣ ಪರಮಹಂಸರಂತಹ ಕಾಳಿಕಾ ಮಾತೆಯ ಅನುಗ್ರಹ ಪಡೆದ ಗುರುಗಳ ಮಾರ್ಗದರ್ಶನದಲ್ಲಿ ಸ್ವಾಮಿ ವಿವೇಕಾನಂದರಾಗಿ ಜಗತ್ತಿಗೇ ಜೀವನದ ಆದರ್ಶ ಸತ್ವಗುಣಗಳನ್ನು ಭೋಧಿಸಿದರು ನಾವು ಅವರ ಚಿಂತನೆಗಳನ್ನು ಗೌರವಿಸಿ ಪಾಲಿಸೋಣ ಎಂದು ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿ ಕಾರ್ತಿಕ್ ನುಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಇನ್ನೋರ್ವ ವಿದ್ಯಾರ್ಥಿ ಶ್ರೀ ದುರ್ಗಾಪರಮೇಶ್ವರ್ ಮಾತನಾಡುತ್ತಾ ವಿವೇಕಾನಂದರ ಹಾಗೇ ನಾವು ಅಪ್ರತಿಮ ದೇಶಭಕ್ತರಾಗಿ, ಧೈರ್ಯ, ಆತ್ಮವಿಶ್ವಾಸ, ಮಾನವೀಯತೆಯಂತಹ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳೋಣ ಎಂದು ನುಡಿದರು. ಇಬ್ಬರೂ ವಿದ್ಯಾರ್ಥಿಗಳು […]

ಬೆಳ್ಳಿಹಬ್ಬ ಸಮಾರೋಪ : ಪ್ರತಿ ಮಗುವಿನ ಅದ್ಭುತ ಶಕ್ತಿಯನ್ನು ಅರಿಯುವಂತಾಗಬೇಕು - ಸೀತಾರಾಮ ಕೆದಿಲಾಯ

ಬೆಳ್ಳಿಹಬ್ಬ ಸಮಾರೋಪ : ಪ್ರತಿ ಮಗುವಿನ ಅದ್ಭುತ ಶಕ್ತಿಯನ್ನು ಅರಿಯುವಂತಾಗಬೇಕು – ಸೀತಾರಾಮ ಕೆದಿಲಾಯ

Tuesday, January 9th, 2018

ಮಕ್ಕಳನ್ನು ಕೇವಲ ವ್ಯಕ್ತಿಗಳಾಗಿ ನೋಡುವಂತಾಗಬಾರದು. ಒಂದೊಂದು ಮಗುವಿನಲ್ಲೂ ಅದ್ಭುತ ಶಕ್ತಿ ಅಡಗಿದೆ. ಮನುಷ್ಯ ರೂಪದಲ್ಲಿರುವ ಮಕ್ಕಳನ್ನು ದೇವರ ರೂಪದಲ್ಲಿ ಕಾಣುವಂತಾಗಬೇಕು. ಇಂತಹ ಮನಸ್ಥಿತಿಯನ್ನು ಎಲ್ಲಾ ವಿದ್ಯಾಮಂದಿರಗಳು ಸ್ವೀಕರಿಸಿದಾಗ ದೇಶದಲ್ಲಿ ಹೊಸ ಯುಗ ಆರಂಭವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ ಸೀತಾರಾಮ ಕೆದಿಲಾಯ ಹೇಳಿದರು. ಅವರು ಭಾನುವಾರ ನಗರದ ತೆಂಕಿಲದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬೆಳ್ಳಿಹಬ್ಬ ಸಮಾರೋಪ ಸಮಾರಂಭದಲ್ಲಿ ಹಾಗೂ ವಿವೇಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯೋಗಜ್ಞಾನ, ಮನೋವಿಜ್ಞಾನ, ಆಯುರ್ವೇದದ ಆರೋಗ್ಯ […]

ತುಳಸಿ ಭೂಲೋಕದ ಸಂಜೀವಿನಿ - ಜಯರಾಮ ಭಟ್

ತುಳಸಿ ಭೂಲೋಕದ ಸಂಜೀವಿನಿ – ಜಯರಾಮ ಭಟ್

Monday, January 1st, 2018

ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಭಾರತೀಯ ಸಂಸ್ಕೃತಿ ಸಂಪ್ರದಾಯ ನಶಿಸಿ ಹೋಗದಂತೆ ಜಾಗೃತರಾಗಬೇಕಾದುದು ಇಂದು ಅತ್ಯಗತ್ಯ. ಮನೆ, ವಿದ್ಯಾಮಂದಿರಗಳ ವಾತಾವರಣವು ತುಳಸಿ ವೃಂದಾನವನದಿಂದ ಮಂಗಳಕರವಾಗಿರುತ್ತದೆ. ತುಳಸಿಯು ಔಷಧೀಯ ಮೌಲ್ಯಗಳನ್ನು ಹೊಂದಿದ್ದು ಭೂಲೋಕದ ಅಮೃತ ಸಂಜೀವಿನಿ ಎಂದೆನಿಸಿಕೊಳ್ಳುತ್ತದೆ. ಇದರ ಮೇಲಿನ ಗಾಳಿಯು ಪ್ರಾಣವಾಯುವಿನಿಂದ ಕೂಡಿದೆ ಎಂದು ವೈದಿಕರಾದ ಜಯರಾಮ ಭಟ್‌ರವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಆವರಣದಲ್ಲಿ ತುಳಸಿ ಕಟ್ಟೆಯ ಸ್ಥಾಪನೆಯ ಸಂದರ್ಭದಲ್ಲಿ ಹೇಳಿದರು. ಕಾರ್ಯಕ್ರಮದುದ್ದಕ್ಕೂ ವಿದ್ಯಾರ್ಥಿಗಳು ಭಗವದ್ಗೀತೆ ಪಠಣ ಮಾಡುತ್ತಿದ್ದರು. ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆಯನ್ನು ಒದಗಿಸಿಕೊಟ್ಟ ಮಣಿಕಂಠ ಗ್ಯಾಸ್ […]

ಗ್ರಾಮವಿಕಾಸ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು

ಗ್ರಾಮವಿಕಾಸ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು

Saturday, December 30th, 2017

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ‘ಗ್ರಾಮದ ಸಮಗ್ರ ವಿಕಾಸ’ ಎಂಬ ಚಟುವಟಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ನೀಡಲಾದ ’ಕೆದಿಲ’ ಗ್ರಾಮಕ್ಕೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು 30-12-2017 ರ ಶನಿವಾರದಂದು ತೆರಳಿ ಕೆದಿಲದ ’ಶ್ರೀರಾಮ ಭಜನಾ ಮಂದಿರ’ ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಈ ಸ್ವಚ್ಛತಾ ಅಭಿಯಾನದಲ್ಲಿ ಊರ ಅನೇಕ ಮಹನೀಯರು, ಹಾಗೂ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಶ್ರೀ ಅಚ್ಯುತ್ ನಾಯಕ್, ಸಂಚಾಲಕರಾದ ಶ್ರೀ ವಿನೋದ್‌ಕುಮಾರ್‌ ರೈ ಗುತ್ತು, ಸದಸ್ಯರಾದ ಶ್ರೀ ರಮೇಶ್ಚಂದ್ರ ಎಸ್, […]

ಜ್ಞಾನ ಐಸಿರಿ ಸ್ಪರ್ಧೆ - ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಜ್ಞಾನ ಐಸಿರಿ ಸ್ಪರ್ಧೆ – ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Thursday, December 28th, 2017

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಇವರು ಏರ್ಪಡಿಸಿದ ‘ಜ್ಞಾನ ಐಸಿರಿ’ ಪುಸ್ತಕಾಧಾರಿತ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸ್ವಾತಿ ಎಸ್. ಭಟ್- ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಗೌತಮ್‌ ಎಸ್. – ಪ್ರೌಢಶಾಲಾ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ’ಜ್ಞಾನ ಸಿರಿ’ ಪುಸ್ತಕಾಧಾರಿತ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ಮುಖೇಶ್ ಕೃಷ್ಣ – ಪ್ರಥಮ ಸ್ಥಾನವನ್ನು ಪಡೆದು ಧರ್ಮಸ್ಥಳದಲ್ಲಿ ನಡೆಯುವ ಜಿಲ್ಲಾಮಟ್ಟದ […]

ಬಾಳೆ ತೋಟ ನಿರ್ಮಾಣ

ಬಾಳೆ ತೋಟ ನಿರ್ಮಾಣ

Wednesday, December 27th, 2017

ನಿಸರ್ಗ ಸ್ನೇಹಿ ಬದುಕು ನಮ್ಮದಾಗಲಿ – ಶಿಕ್ಷಣವು ಕೇವಲ ಶಾಲಾ ಕಟ್ಟಡದಲ್ಲಿ ನಾಲ್ಕು ಗೋಡೆಗಳ ನಡುವಣ ಪ್ರಕ್ರಿಯೆ ಆಗದೆ ನಿಸರ್ಗದೊಂದಿಗೆ ಕಲಿತು ಬೆರೆಯುವ ಅನುಭವವಾಗಬೇಕು ಎನ್ನುವ ಆಶಯದೊಂದಿಗೆ ವಿವೇಕಾನಂದ ಕನ್ನಡ ಶಾಲೆಯಲ್ಲಿ ಪೋಷಕರ ಸಹಕಾರದೊಂದಿಗೆ ’ಬಾಳೆ ತೋಟ’ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಸುಮಾರು ಇಪ್ಪತ್ತು ವಿಧದ ಬಾಳೆಯ ಗಿಡಗಳನ್ನು ನೆಡಲಾಯಿತು. ಶಾಲಾ ಪೋಷಕರು, ಶಿಕ್ಷಕರು, ಮಕ್ಕಳು ಸೇರಿಕೊಂಡು ಇದರಲ್ಲಿ ಭಾಗವಹಿಸಿದರು.

ವಿದ್ಯಾಭಾರತಿ ವಿಜ್ಞಾನ ವಸ್ತು ಪ್ರದರ್ಶನ ಮಾದರಿ ಸ್ಪರ್ಧೆ :  ರಾಷ್ಟ್ರ ಮಟ್ಟದಲ್ಲಿ ತೃತೀಯ ಸ್ಥಾನ 

ವಿದ್ಯಾಭಾರತಿ ವಿಜ್ಞಾನ ವಸ್ತು ಪ್ರದರ್ಶನ ಮಾದರಿ ಸ್ಪರ್ಧೆ : ರಾಷ್ಟ್ರ ಮಟ್ಟದಲ್ಲಿ ತೃತೀಯ ಸ್ಥಾನ 

Monday, December 25th, 2017

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ ನಡೆಸಿದ ಜ್ಞಾನ – ವಿಜ್ಞಾನ ಮೇಳ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ತಣಿಸಂದ್ರ ಬೆಂಗಳೂರು ಇಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಶ್ರಯ್ ಪಿ.ವಿ. (ವಿಶ್ವನಾಥ ಗೌಡ ಪಟ್ಟೆ ಮತ್ತು ರೇವತಿ ದಂಪತಿಯ ಪುತ್ರ) ಮತ್ತು ರಕ್ಷಿತಾ ಡಿ. (ಡೊಂಬಯ ಗೌಡ ಪಂಜಳ ಮತ್ತು ದಾಕ್ಷಾಯಿಣಿ ದಂಪತಿಯ ಪುತ್ರಿ) ತೃತೀಯ ಸ್ಥಾನ ಪಡೆದಿರುತ್ತಾರೆ.

ಬಾಲ ಉದ್ಯಾನವನಕ್ಕೆ ಶಂಕುಸ್ಥಾಪನೆ

ಬಾಲ ಉದ್ಯಾನವನಕ್ಕೆ ಶಂಕುಸ್ಥಾಪನೆ

Wednesday, December 20th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ವಿಭಾಗದ ಮಕ್ಕಳಿಗಾಗಿ ಬಾಲ ಉದ್ಯಾನವನಕ್ಕೆ ಪುತ್ತೂರು ಸಚಿನ್ ಟ್ರೇಡಿಂಗ್ ಕಂ. ಇದರ ಮಾಲಕರಾದ ಶ್ರೀಯುತ ಸಚಿನ್ ಇವರು ಭೂಮಿ ಪೂಜೆಯೊಂದಿಗೆ ಚಾಲನೆ ನೀಡಿದರು. ಪ್ರಾಥಮಿಕ ವಿಭಾಗದ ಮಕ್ಕಳ ಶ್ಲೋಕದೊಂದಿಗೆ ದೀಪ ಪ್ರಜ್ವಲಿಸಿದ ಅವರು ಉದ್ಯಾನವನವು ಆಟದೊಂದಿಗೆ ಪಾಠದ ಸಂತೋಷವನ್ನು ನೀಡುವಂತೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ, ನಿರ್ದೇಶಕರಾದ ಶ್ರೀ ಶಿವಪ್ರಸಾದ್ ಇ, ವಿವೇಕಾನಂದ ಪದವಿಪೂರ್ವ ಕಾಲೇಜಿನ […]

ಜನವರಿ 7 ರಂದು ವಿವೇಕೋತ್ಸವ

ಜನವರಿ 7 ರಂದು ವಿವೇಕೋತ್ಸವ

Thursday, December 14th, 2017
ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಖಂಡಿತ - ಶ್ರೀಮತಿ ಓಮನ ಎನ್.ಕೆ

ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಖಂಡಿತ – ಶ್ರೀಮತಿ ಓಮನ ಎನ್.ಕೆ

Monday, December 11th, 2017

ಜೀವನದಲ್ಲಿ ಪರಿಶ್ರಮ ಪಟ್ಟಾಗ ಯಶಸ್ಸು ಖಂಡಿತವಾಗಿಯೂ ಲಭಿಸುವುದು ಕಲಿಕೆಯ ಜೊತೆ ಕ್ರೀಡೆಯಲ್ಲಿಯೂ ಸಾಧನೆ ಮಾಡಿದಾಗ ಹೆಚ್ಚಿನ ಅವಕಾಶಗಳು ತಾನಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕನಗರಾ, ತೆಂಕಿಲ ಇಲ್ಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಧ್ವಜಾರೋಹಣಗೈದ, ಪುತ್ತೂರು ನಗರ ಠಾಣೆಯ ಮಹಿಳಾ ಪೋಲಿಸ್ ಉಪನಿರೀಕ್ಷಕರಾದ ಶ್ರೀಮತಿ ಓಮನ ಎನ್.ಕೆ ರವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಕ್ರೀಡಾಕೂಟವನ್ನು ಉದ್ಫಾಟಿಸಿದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ – ಕ್ರೀಡಾ ಪ್ರಮುಖರಾದ ಶ್ರೀ ಆನಂದ ಶೆಟ್ಟಿ ಇವರು ಮಾತನಾಡಿ ಕ್ರೀಡಾ […]

ಶೈಕ್ಷಣಿಕ ಸಂಪನ್ಮೂಲ ಕಾರ್ಯಾಗಾರಗಳು ಶಿಕ್ಷಕನಿಗೆ ಆತ್ಮಾವಲೋಕನ ಮಾಡಿಕೊಳ್ಳಲು ಸಹಕಾರಿ- ಶ್ರೀ ಸತೀಶ ಭಟ್, ಬಿಳಿನೆಲೆ

ಶೈಕ್ಷಣಿಕ ಸಂಪನ್ಮೂಲ ಕಾರ್ಯಾಗಾರಗಳು ಶಿಕ್ಷಕನಿಗೆ ಆತ್ಮಾವಲೋಕನ ಮಾಡಿಕೊಳ್ಳಲು ಸಹಕಾರಿ- ಶ್ರೀ ಸತೀಶ ಭಟ್, ಬಿಳಿನೆಲೆ

Tuesday, December 5th, 2017

ಶೈಕ್ಷಣಿಕ ಸಂಪನ್ಮೂಲ ಕಾರ್ಯಾಗಾರಗಳು ಪ್ರತಿಯೊಬ್ಬ ಶಿಕ್ಷಕನಿಗೂ ಹೆಚ್ಚಿನ ಕಲಿಕೆಗೆ ಹಾಗೂ ಆತ್ಮಾವಲೋಕನವನ್ನು ಮಾಡಿಕೊಳ್ಳಲು ಸಹಕಾರಿ ಎಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಗುರುಗಳಾದ ಸತೀಶ್ ಭಟ್ ಬಿಳಿನೆಲೆ ಇವರು ಹೇಳಿದರು. ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ವಿವೇಕನಗರ, ತೆಂಕಿಲ ಇದರ ಸಹಯೋಗದಲ್ಲಿ ಶಿಕ್ಷಕರಿಗಾಗಿ ಆಯೋಜಿಸಿದ್ದ ಒಂದು ದಿನದ ಸಂಕುಲ ಮಟ್ಟದ ಶೈಕ್ಷಣಿಕ ಸಂಪನ್ಮೂಲ ಕಾರ್ಯಾಗಾರವನ್ನು ಉದ್ಫಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ […]

ಗೌತಮ್‌ಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ

ಗೌತಮ್‌ಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ

Friday, November 17th, 2017

ಬಾಲಭವನ ಸೊಸೈಟಿ, ಕಬ್ಬನ್ ಉದ್ಯಾನವನ ಬೆಂಗಳೂರು ಇಲ್ಲಿ ಏರ್ಪಡಿಸಲಾದ ರಾಜ್ಯಮಟ್ಟದ ಮಕ್ಕಳ ’ಕಲಾಶ್ರೀ ಪ್ರಶಸ್ತಿ’ ಆಯ್ಕೆ ಶಿಬಿರದ ಸೃಜನಾತ್ಮಕ ಕಲೆ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್ ಎಸ್ (ನೆಹರೂ ನಗರ ಗಣೇಶ್ ಪೂಜಾರಿ ಮತ್ತು ಮಮತಾ ದಂಪತಿಗಳ ಪುತ್ರ)-ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಉಮಾಶ್ರೀ ಅವರಿಂದ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.

ಪ್ರತಿಯೊಂದು ಮಗುವೂ ಪ್ರತಿಭಾಶಾಲಿ - ಸತೀಶ್. ಕೆ

ಪ್ರತಿಯೊಂದು ಮಗುವೂ ಪ್ರತಿಭಾಶಾಲಿ – ಸತೀಶ್. ಕೆ

Tuesday, November 14th, 2017

ವಿವೇಕಾನಂದ ಕನ್ನಡ ಶಾಲೆ – ಪ್ರತಿಭಾ ದಿನಾಚರಣೆ ಪ್ರತಿಯೊಂದು ಮಗುವು ಪ್ರತಿಭಾಶಾಲಿಯೇ ಹೌದು. ಪ್ರತಿಭೆಗೆ ತಕ್ಕ ಪರಿಶ್ರಮ ಪಟ್ಟಾಗ ಸೂಕ್ತ ಪ್ರತಿಫಲ ಸಿಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಬೋಧಕರಾದ ಶ್ರೀ ಸತೀಶ್ ಕೆ ಇವರು ನುಡಿದರು. ಇವರು ವಿವೇಕಾನಂದ ಕನ್ನಡ ಶಾಲೆಯಲ್ಲಿ ನವೆಂಬರ್ 14 ರ ಮಕ್ಕಳ ದಿನಾಚರಣೆಯಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಫಾಟಕರ ನೆಲೆಯಲ್ಲಿ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ ಶಾಲಾ ಹಿರಿಯ ವಿದ್ಯಾರ್ಥಿನಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕು. ಅದಿತಿ ಕೆ.ಟಿ ಇವರು […]

ವಿಜ್ಞಾನ ಮಾದರಿ ವಸ್ತು ಪ್ರದರ್ಶನ : ಜಿಲ್ಲಾಮಟ್ಟಕ್ಕೆ ಆಯ್ಕೆ

ವಿಜ್ಞಾನ ಮಾದರಿ ವಸ್ತು ಪ್ರದರ್ಶನ : ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, November 14th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಂತ ವಿಕ್ಟರನ ಬಾಲಿಕ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಧನುಷ್ ಬಿ. ಮತ್ತು ಸ್ವಸ್ತಿಕ್ ಬಿ.ವಿ. ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾಭಾರತಿ - ವಿಜ್ಞಾನ - ವಸ್ತು ಪ್ರದರ್ಶನ ಮಾದರಿ ಸ್ಪರ್ಧೆ : ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ – ವಿಜ್ಞಾನ – ವಸ್ತು ಪ್ರದರ್ಶನ ಮಾದರಿ ಸ್ಪರ್ಧೆ : ರಾಷ್ಟ್ರ ಮಟ್ಟಕ್ಕೆ ಆಯ್ಕೆ

Friday, November 10th, 2017

ವಿದ್ಯಾಭಾರತಿ ವತಿಯಿಂದ ಸರಸ್ವತಿ ಹೈದರಾಬಾದ್‌ನ ಸೈಯದ್‌ಬಾದ್‌ ಸರಸ್ವತಿ ವಿದ್ಯಾಲಯದಲ್ಲಿ ನಡೆದ ದಕ್ಷಿಣ ಪ್ರಾಂತೀಯ ಮಟ್ಟದ ಜ್ಞಾನ – ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ರಕ್ಷಿತಾ ಡಿ. (ಡೊಂಬಯ್ಯ ಗೌಡ ಪಂಜಳ ಮತ್ತು ದಾಕ್ಷಾಯಿಣಿ ದಂಪತಿ ಪುತ್ರಿ) ಮತ್ತು ಆಶ್ರಯ್ ಪಿ.ವಿ. (ವಿಶ್ವನಾಥ ಗೌಡ ಪಟ್ಟೆ ಮತ್ತು ರೇವತಿ ದಂಪತಿಯ ಪುತ್ರ) ಇವರು ತಯಾರಿಸಿದ ಶ್ರವಣಾತೀತ ತರಂಗಗಳು ಮತ್ತು ಅದರ ಅನ್ವಯಗಳು ಎಂಬ ವಿಷಯದ ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಪ್ರಥಮ ಸ್ಥಾನ ಗಳಿಸಿ […]

ಗೌತಮ್‌ ರಾಜ್ಯ ಮಟ್ಟಕ್ಕೆ ಆಯ್ಕೆ

ಗೌತಮ್‌ ರಾಜ್ಯ ಮಟ್ಟಕ್ಕೆ ಆಯ್ಕೆ

Wednesday, November 8th, 2017

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಮಂಗಳೂರು ಇವರು ಜಿಲ್ಲಾ ಬಾಲಭವನ, ಕದ್ರಿ ಮಂಗಳೂರು ಇಲ್ಲಿ ಏರ್ಪಡಿಸಲಾದ ಜಿಲ್ಲಾಮಟ್ಟದ ಮಕ್ಕಳ ’ಕಲಾಶ್ರೀ ಪ್ರಶಸ್ತಿ’ ಆಯ್ಕೆ ಶಿಬಿರದ ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್‌ಎಸ್. – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಮತ್ತು ಉದಯವಾಣಿ ಆರ್ಟಿಸ್ಟ್ ಪಾರ್ಮ್(ರಿ) ಉದಯವಾಣಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲೂ ಈತ ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾನೆ.

ತಾಲೂಕು ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ : ಶಾಲೆಗೆ ಹಲವು ಪ್ರಶಸ್ತಿ

ತಾಲೂಕು ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ : ಶಾಲೆಗೆ ಹಲವು ಪ್ರಶಸ್ತಿ

Friday, November 3rd, 2017

ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು, ತಾಲೂಕು ಬಾಲಭವನ ಸಮಿತಿ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪರ್ಲಡ್ಕ ಶಿವರಾಮ ಕಾರಂತ ಬಾಲವನದಲ್ಲಿ ನಡೆದತಾಲೂಕು ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರದಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದವರು: ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರದಲ್ಲಿ ಪ್ರತೀಕ್‌ ಗಣಪತಿ – ಪ್ರಥಮ, ಸೃಜನಾತ್ಮಕ ಪ್ರದರ್ಶನ ಕಲೆ -ಶ್ರೇಯಾ ಎಂ – ಪ್ರಥಮ, ಸೃಜನಾತ್ಮಕ ಬರವಣಿಗೆ […]

ಕನ್ನಡ ರಾಜ್ಯ್ಯೋತ್ಸವ

ಕನ್ನಡ ರಾಜ್ಯ್ಯೋತ್ಸವ

Thursday, November 2nd, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಹ ಶಿಕ್ಷಕಿ ಶ್ರೀಮತಿ ಗೀತಾ ಮಾತಾಜಿ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಗುರುಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

ಸ್ಕೂಲ್‌ ಗೇಮ್ಸ್ ಫೆಡರೇಶನ್‌ ಆಫ್ ಇಂಡಿಯಾಗೆ ಶಾಲೆಯ ಕ್ರೀಡಾಪಟುಗಳು ಆಯ್ಕೆ

ಸ್ಕೂಲ್‌ ಗೇಮ್ಸ್ ಫೆಡರೇಶನ್‌ ಆಫ್ ಇಂಡಿಯಾಗೆ ಶಾಲೆಯ ಕ್ರೀಡಾಪಟುಗಳು ಆಯ್ಕೆ

Tuesday, October 17th, 2017

ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಬೆಳಗಾವಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಧನುಷಾ.ಜಿ.ಶೆಟ್ಟಿ (ದರ್ಬೆತ್ತಡ್ಕ ಉದಯ್ ಕುಮಾರ್ ಶೆಟ್ಟಿ ಮತ್ತು ವೈಶಲತಾ ಶೆಟ್ಟಿ ದಂಪತಿಗಳ ಪುತ್ರಿ) ನಡಿಗೆ ಸ್ಪರ್ಧೆಯಲ್ಲಿ ಪ್ರಥಮ, ಮೀರತ್‌ನಲ್ಲಿ ನಡೆದ ಅಖಿಲಾ ಭಾರತೀಯ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದೀಕ್ಷಾ.ಕೆ (ಪೆರಿಗೇರಿ ಕಮಲಾಕ್ಷಗೌಡ ಮತ್ತು ಕಮಲಾಕ್ಷಿ ದಂಪತಿ ಪುತ್ರಿ) 100 ಮೀ ಅಡೆತಡೆ ಓಟ – ಪ್ರಥಮ, 4100 ಮೀ ರಿಲೇಯಲ್ಲಿ ಪ್ರಥಮ ಸ್ಥಾನ, ಉದ್ದಜಿಗಿತ, ತ್ರಿವಿಧಜಿಗಿತ ದ್ವಿತೀಯ, ಗಾಯತ್ರಿ.ಕೆ.ಎನ್ (ಕೇಪು ಕಲ್ಲಪಾಪು ನಿರಂಜನ್ ಕೆ […]

ಸಂಸ್ಕಾರ, ಸಂಸ್ಕೃತಿಯುತ ಕುಟುಂಬಗಳಿಂದ ಭಾರತ ವಿಶ್ವಮಾನ್ಯವೆನಿಸಿದೆ - ಸು.ರಾಮಣ್ಣ

ಸಂಸ್ಕಾರ, ಸಂಸ್ಕೃತಿಯುತ ಕುಟುಂಬಗಳಿಂದ ಭಾರತ ವಿಶ್ವಮಾನ್ಯವೆನಿಸಿದೆ – ಸು.ರಾಮಣ್ಣ

Monday, October 16th, 2017

ವಿವಾಹ ಎನ್ನುವುದು ಕೇವಲ ಭೋಗಕ್ಕಾಗಿ ಅಲ್ಲ, ಎರಡು ಜೀವಗಳು ಬೆಸೆಯುವ ಈ ಸಂಬಂಧವು ಎರಡು ಕುಟುಂಬಗಳನ್ನು ಜೋಡಿಸುತ್ತದೆ. ದೈವಾನುಗ್ರಹದಿಂದ ಪಡೆದ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ಸಮಾಜಕ್ಕೆ ಯೋಗ್ಯ ವ್ಯಕ್ತಿಗಳನ್ನು ನೀಡುವ ಜವಾಬ್ದಾರಿ ತಂದೆ ತಾಯಿಗಳಿಗಿರಬೇಕು. ಮಕ್ಕಳಲ್ಲಿ ಸಮಷ್ಠಿಯ ಬಗ್ಗೆ ಅಂದರೆ, ಸಮಸ್ತ ಸೃಷ್ಟಿ, ಜಗತ್ತು ವಿಶ್ವವನ್ನೇ ಪ್ರೀತಿಸಿ ಗೌರವಿಸುವ ಸಂಸ್ಕೃತಿ ಬೆಳೆಸಿದಾಗ ’ವಸುದೈವ ಕುಟುಂಬಕಮ್’ ಎಂಬ ಮಾತು ಸಾರ್ಥಕವಾಗುತ್ತದೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ’ನವದಂಪತಿಗಳ ಸಮಾವೇಶ’ ಎಂಬ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ […]

ಅ. 15 ರಂದು ನವದಂಪತಿ ಸಮಾವೇಶ

ಅ. 15 ರಂದು ನವದಂಪತಿ ಸಮಾವೇಶ

Saturday, October 14th, 2017
ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳ : ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳ : ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

Monday, October 9th, 2017

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಬಾಲ ಭಾರತಿ ಕೇಂದ್ರಿಯ ವಿದ್ಯಾಲಯ ಬಳ್ಳಾರಿ ಇಲ್ಲಿ ನಡೆದ ಪ್ರಾಂತೀಯ ಜ್ಞಾನ – ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಆಶ್ರಯ್ ಪಿ.ವಿ ಮತ್ತು ರಕ್ಷಿತಾ. ಡಿ ಇವರ ತಂಡ ಪ್ರಥಮ ಸ್ಥಾನ ಪಡೆದು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಪ್ರತೀಕ್ ಗಣಪತಿ – ದ್ವಿತೀಯ ಸ್ಥಾನ, ಧನುಷ್ ಬಿ ಮತ್ತು ಸ್ವಸ್ತಿಕ್ ಬಿ.ವಿ ಇವರ ತಂಡ ತೃತೀಯ ಸ್ಥಾನ ಪಡೆದಿರುತ್ತದೆ.

ಬಾಲಗೋಕುಲ ಕಾರ್ಯಾಗಾರ

ಬಾಲಗೋಕುಲ ಕಾರ್ಯಾಗಾರ

Saturday, October 7th, 2017

ಸಂಸ್ಕಾರಯುತ ಶಿಕ್ಷಣ ನೀಡುವ ಹಿನ್ನೆಲೆಯಲ್ಲಿ ಶಿಕ್ಷಕರ ಮನೆಯಲ್ಲಿ ಬಾಲಗೋಕುಲ ನಡೆಸುವ ಬಗ್ಗೆ ಮೈತ್ರೇಯಿ ಗುರುಕುಲದ ಶ್ರೀಮತಿ ಮಾತಾಜಿಯವರ ನೇತೃತ್ವದಲ್ಲಿ ಬಾಲಗೋಕುಲ ಶಿಬಿರ ನಡೆಯಿತು.

ತಾಲೂಕು ಮಟ್ಟದ ಕ್ರೀಡಾಕೂಟ  : ಶಾಲೆಗೆ ಸಮಗ್ರ ತಂಡ ಪ್ರಶಸ್ತಿ

ತಾಲೂಕು ಮಟ್ಟದ ಕ್ರೀಡಾಕೂಟ : ಶಾಲೆಗೆ ಸಮಗ್ರ ತಂಡ ಪ್ರಶಸ್ತಿ

Thursday, October 5th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಪ್ರೌಢಶಾಲೆ ಕೆಯ್ಯೂರು ಇವರ ಸಹಯೋಗದಲ್ಲಿ ಕೆಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯು 17 ವರ್ಷದೊಳಗಿನ ಪ್ರೌಢಶಾಲಾ ಬಾಲಕರ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಇದರಲ್ಲಿ 20 ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

Highslide for Wordpress Plugin