ಸರಸ್ವತಿ ವಿಗ್ರಹ ಲೋಕಾರ್ಪಣೆ ಮತ್ತು ಅಕ್ಷರಾಭ್ಯಾಸ

ಸರಸ್ವತಿ ವಿಗ್ರಹ ಲೋಕಾರ್ಪಣೆ ಮತ್ತು ಅಕ್ಷರಾಭ್ಯಾಸ

Saturday, September 30th, 2017

ಭಾರತೀಯತೆಗೆ ಸನಾತನ ಧರ್ಮವೇ ತಳಹದಿ – ಬ್ರಹ್ಮಶ್ರೀ ಕುಂಟಾರು ರವೀಶ್‌ ತಂತ್ರಿ ಆದಿಗುರು ಶ್ರೀ ಶಂಕರಾಚಾರ್ಯರು, ಸ್ವಾಮಿ ವಿವೇಕಾನಂದರಂತಹ ಸಾಧಕರು ಭಾರತದ ಸಂಸ್ಕಾರ, ಧರ್ಮದ ಬಗ್ಗೆ ಆಳವಾದ ಅಧ್ಯಯನ ನಡೆಸಿ, ಸನಾತನ ಧರ್ಮವೇ ನಮ್ಮೆಲ್ಲಾ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಏಳಿಗೆಗೆ ತಳಹದಿ ಎಂದು ಸಾರಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾಕ್ಟರ್ ಜೀಯವರು, ಸನಾತನ ಧರ್ಮವೇ ಈ ದೇಶದ ಜೀವಾಳವಾಗಿದ್ದು ಈ ಕಾರಣದಿಂದಲೇ ಭಾರತವು ಪ್ರಪಂಚಕ್ಕೆ ಗುರುವಿನ ಸ್ಥಾನದಲ್ಲಿದೆ ಎಂದಿದ್ದರು. ಇಂತಹ ಸಂಸ್ಕಾರ ಸುಧೆಯನ್ನು ಸ್ವೀಕರಿಸಿ ಹಿರಿಯರು […]

ಯಕ್ಷಚಿಣ್ಣರ ಬಳಗ ಮಠಂತಬೆಟ್ಟುವಿನಲ್ಲಿ

ಯಕ್ಷಚಿಣ್ಣರ ಬಳಗ ಮಠಂತಬೆಟ್ಟುವಿನಲ್ಲಿ

Thursday, September 28th, 2017

ಶ್ರೀಮಹೀಷಮರ್ಧಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಯಕ್ಷಚಿಣ್ಣರ ಬಳಗದಿಂದ ’ತಾಟಕಿ ಸಂಹಾರ- ಖರಾಸುರ ವಧೆ’ ಎಂಬ ಪುಣ್ಯಕಥಾ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಹಾಗೂ ಚಂದ್ರಶೇಖರ್ ಸುಳ್ಯಪದವು ಇವರ ನಿರ್ದೇಶನದಲ್ಲಿ ನಡೆಯಿತು.

ಶಾಲೆಗೆ ಸರಸ್ವತಿ ದೇವಿಯ ವಿಗ್ರಹ ಆಗಮನ

ಶಾಲೆಗೆ ಸರಸ್ವತಿ ದೇವಿಯ ವಿಗ್ರಹ ಆಗಮನ

Thursday, September 28th, 2017

ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರತಿಷ್ಠಾಪಿಸಲಿರುವ ಸರಸ್ವತಿ ದೇವಿ ವಿಗ್ರಹದ ಮೆರವಣಿಗೆಯು ಸೆ.೨೮ರಂದು ನಡೆಯಿತು. ಕಾರ್ಕಳದಲ್ಲಿ ತಯಾರಿಸಲ್ಪಟ್ಟ ವಿಗ್ರಹವು ಸೆ. 28 ರಂದು ನೆಹರು ನಗರದಲ್ಲಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಛೇರಿ ನರೇಂದ್ರಕ್ಕೆ ಆಗಮಿಸಿದೆ. ಸೆ. 28 ರಂದು ಬೊಳುವಾರು ವೃತ್ತದ ಬಳಿಯಿಂದ ಹೊರಟು ಮೆರವಣಿಗೆಯು ಮುಖ್ಯ ರಸ್ತೆಯ ಮೂಲಕ ಸಾಗಿ ಮಹಾಲಿಂಗೇಶ್ವರ ದೇವಸ್ಥಾನ, ವೆಂಕಟ್ರಮಣ ದೇವಸ್ಥಾನ, ಮಹಮ್ಮಾಯಿ ದೇವಸ್ಥಾನ ಹಾಗೂ ಭವಾನಿ ಶಂಕರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ತೆಂಕಿಲ ವಿದ್ಯಾಸಂಸ್ಥೆಗೆ ಆಗಮಿಸಿತು. ಬಳಿಕ […]

ಯಕ್ಷಗಾನ ಬಯಲಾಟ

ಯಕ್ಷಗಾನ ಬಯಲಾಟ

Saturday, September 23rd, 2017

ದಿನಾಂಕ 22-9-2017 ರಂದು ಮಂಗಳೂರಿನ ಕದ್ರಿ ಮಂಜುನಾಥೇಶ್ವರದೇವಸ್ಥಾನದ ವಠಾರದಲ್ಲಿ ನವರಾತ್ರಿಯ ಅಂಗವಾಗಿ ಕದಳಿ ಕಲಾ ಕೇಂದ್ರದವರು ನಡೆಸಲ್ಪಡುವ ಮಕ್ಕಳ ಯಕ್ಷಗಾನ ಪ್ರದರ್ಶನದಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯಯಕ್ಷಚಿಣ್ಣರ ಬಳಗ ಶ್ರೀರಾಮಕಾರುಣ್ಯ ಎಂಬ ಪುಣ್ಯಕಥಾ ಭಾಗವನ್ನು ಆಡಿ ತೋರಿಸಿದರು. ಯಕ್ಷ ಗುರುಗಳಾದ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಮತ್ತು ಶ್ರೀ ಚಂದ್ರಶೇಖರ ಸುಳ್ಯ ಪದವುರವರ ಸಂಯೋಜನೆಯಲ್ಲಿ ನಡೆಯಿತು.

ಯಕ್ಷಗಾನ ಸ್ಪರ್ಧೆ ಸಮಾರೋಪ ಸಮಾರಂಭ

ಯಕ್ಷಗಾನ ಸ್ಪರ್ಧೆ ಸಮಾರೋಪ ಸಮಾರಂಭ

Thursday, September 14th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಯಕ್ಷಗಾನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಡವರ ಬಂಧು ಶೈಕ್ಷಣಿಕ ಕಾಳಜಿಯುಳ್ಳ ಶ್ರೀಯುತ ಅಶೋಕ್‌ ರೈ ಕೋಡಿಂಬಾಡಿಯವರು ಉಪಸ್ಥಿತರಿದ್ದು ಯಕ್ಷಗಾನವು ಕರಾವಳಿ ಭಾಗದ ಶ್ರೇಷ್ಠ ಕಲೆಯಾಗಿದೆ ಅದನ್ನು ಉಳಿಸುವಲ್ಲಿ ಶಿಕ್ಷಣ ಸಂಸ್ಥೆಗಳು ಈ ರೀತಿ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು, ಅಲ್ಲದೇ ತಮ್ಮ ಬಾಲ್ಯದ ನೆನಪುಗಳ ಪುಟವನ್ನು ತೆರೆದಿಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಣಿಪುರಯಕ್ಷಗಾನ ಪತ್ರಿಕೆಯ ಸಂಪಾದಕರಾದ ಶ್ರೀನಾರಾಯಣ ಚಂಬಲ್ತಿಮಾರ್ ಮಾತನಾಡಿ’ ಮಕ್ಕಳಲ್ಲಿ ಎಳವೆಯಲ್ಲಿಯೇ […]

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ- ಶಾಲಾ ಕವ್ವಾಲಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ- ಶಾಲಾ ಕವ್ವಾಲಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Thursday, September 14th, 2017

ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಾರ್ವರಿ, ಪ್ರಜ್ಞಾ ನಿಡ್ವಣ್ಣಾಯ, ವಂಶಿ, ತನ್ಮಯಿ ವಾಗ್ಲೆ, ಇಶಾ, ಶ್ರೀಲಕ್ಷ್ಮೀ ಇವರ ಕವ್ವಾಲಿ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಗುರುವಂದನೆ’

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಗುರುವಂದನೆ’

Wednesday, September 13th, 2017

ನಮ್ಮ ಭಾರತದೇಶದಲ್ಲಿ ಗುರುಗಳ ಮಹತ್ವವನ್ನು ಅರಿತು ಗೌರವಿಸುವ, ಅದರ ಶ್ರೇಷ್ಠತೆಯನ್ನು ಎತ್ತಿ ಹಿಡಿಯುವ ಭವ್ಯಪರಂಪರೆಯೇ ಇದೆ. ಪುರಾಣ ಪುರುಷರ ಮಹಾನ್ ಸಾಧಕರ ಸಾಧನೆಯ ಹಿಂದೆ ಉತ್ತಮ ಗುರುಗಳ ಮಾರ್ಗದರ್ಶನವನ್ನು ನಾವು ಕಾಣಬಹುದು. ಶೃಂಗೇರಿಯ ಶಾರಾದಾಪೀಠದ ಸ್ಥಾಪಕರಾದ ಶಂಕರಾಚಾರ್ಯರು ಆದರ್ಶ ಶಿಷ್ಯ ಕೋಟಿಯನ್ನು ಹೊಂದಿದ್ದು, ದೇಶದಾದ್ಯಂತ ಶಾಖಾಪೀಠಗಳ ಮೂಲಕ ಸಮಾಜದ ಜನರ ಸಂಸ್ಕಾರ ಸಂಸ್ಕೃತಿಗಳನ್ನು ಔನ್ನತ್ಯದೆಡೆಗೆ ಕೊಂಡೊಯ್ಯುವ ಸಾರ್ಥಕ ಕಾರ್ಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ವಿವೇಕಾನಂದ ಸಂಸ್ಥೆಯು ಗುರುಗಳನ್ನು ಗೌರವಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದೆ ಎಂದು […]

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ : ಚಿತ್ರಕಲೆಯಲ್ಲಿ ಮುಖೇಶ್ ಕೃಷ್ಣನಿಗೆ ತೃತೀಯ

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ : ಚಿತ್ರಕಲೆಯಲ್ಲಿ ಮುಖೇಶ್ ಕೃಷ್ಣನಿಗೆ ತೃತೀಯ

Wednesday, September 13th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆದ ಹಿರಿಯ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಖೇಶ್ ಕೃಷ್ಣ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಪೂಜಾರಿ ಶೇರಾ ಇವರು ತರಬೇತಿ ನೀಡಿರುತ್ತಾರೆ.

ಖೋ - ಖೋ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಖೋ – ಖೋ ವಿಭಾಗೀಯ ಮಟ್ಟಕ್ಕೆ ಆಯ್ಕೆ

Wednesday, September 13th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 14 ರ ವಯೋಮಾನದ ಬಾಲಕರ ವಿಭಾಗದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಗುರುಪ್ರಸಾದ್ ಮತ್ತು ಪವನ್‌ಕುಮಾರ್ ಭಾಗವಹಿಸಿ ಮೈಸೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಕಬಡ್ಡಿ-ಜಿಲ್ಲಾಮಟ್ಟಕ್ಕೆ ಆಯ್ಕೆ

ಕಬಡ್ಡಿ-ಜಿಲ್ಲಾಮಟ್ಟಕ್ಕೆ ಆಯ್ಕೆ

Wednesday, September 13th, 2017

ಸುಳ್ಯ ತಾಲೂಕಿನ ಜ್ಞಾನ ದೀಪ ಎಲಿಮಲೆ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯರಾದ ತೃಪ್ತಿ ಮತ್ತು ಅಂಕಿತಾ ಇವರು ಪುತ್ತೂರು ತಾಲೂಕಿನ ಪ್ರಾಥಮಿಕ ಶಾಲಾ ತಂಡಕ್ಕೆ ಆಯ್ಕೆಯಾಗಿರುತ್ತಾರೆ.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ - ಕವ್ವಾಲಿ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – ಕವ್ವಾಲಿ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Friday, September 8th, 2017

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಾರ್ವರಿ, ಪ್ರಜ್ಞಾ ನಿಡ್ವಣ್ಣಾಯ, ವಂಶಿ, ತನ್ಮಯಿ ವಾಗ್ಲೆ, ಇಶಾ, ಶ್ರೀಲಕ್ಷ್ಮೀ ಇವರ ಕವ್ವಾಲಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ತಾಲೂಕು ಮಟ್ಟದ ಪ್ರತಿಭಾಕಾರಂಜಿ - ಯಕ್ಷಗಾನ ಸ್ಪರ್ಧೆ : ಪರೀಕ್ಷಿತ್ - ಪ್ರಥಮ

ತಾಲೂಕು ಮಟ್ಟದ ಪ್ರತಿಭಾಕಾರಂಜಿ – ಯಕ್ಷಗಾನ ಸ್ಪರ್ಧೆ : ಪರೀಕ್ಷಿತ್ – ಪ್ರಥಮ

Friday, September 8th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಹಿರಿಯ ಪ್ರಾಥಮಿಕ ವಿಭಾಗದ ಯಕ್ಷಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪರೀಕ್ಷಿತ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಿಕ್ಷಕರಾದ ಚಂದ್ರಶೇಖರ್ ಸುಳ್ಯಪದವು ಮತ್ತು ನೃತ್ಯ ಗುರುಗಳಾದ ಬಾಲಕೃಷ್ಣ ಉಡ್ಡಂಗಲ ತರಬೇತಿ ನೀಡಿರುತ್ತಾರೆ.

ಯೋಗ ಸ್ಪರ್ಧೆ

ಯೋಗ ಸ್ಪರ್ಧೆ

Friday, September 8th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಾರಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪುನೀತ್ (ಪ್ರಥಮ), ಲಿಖಿತ್ (ದ್ವಿತೀಯ), ಭರತ್ (ಪಂಚಮ) ಸ್ಥಾನವನ್ನು ಪಡೆದಿರುತ್ತಾರೆ. ಮತ್ತು ಬಾಲಕಿಯರ ವಿಭಾಗದಲ್ಲಿ ಹೇಮಶ್ರೀ (ದ್ವಿತೀಯ), ವೈಶಾಲಿ(ತೃತೀಯ) ಹಾಗೂ ಮಧುಶ್ರೀ (ಪಂಚಮ) ಸ್ಥಾನವನ್ನು ಪಡೆದು ಜಿಲ್ಲಾಮಟ್ಟದ ಯೋಗಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಜಿಲ್ಲಾ ಮಟ್ಟದ ಜ್ಞಾನ - ವಿಜ್ಞಾನ ಮೇಳ - ಶಾಲೆಗೆ ಹಲವು ಪ್ರಶಸ್ತಿ

ಜಿಲ್ಲಾ ಮಟ್ಟದ ಜ್ಞಾನ – ವಿಜ್ಞಾನ ಮೇಳ – ಶಾಲೆಗೆ ಹಲವು ಪ್ರಶಸ್ತಿ

Friday, September 8th, 2017

ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಜ್ಞಾನ- ವಿಜ್ಞಾನ ಮೇಳದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ. ವಿಜ್ಞಾನ ಪ್ರದರ್ಶನ ಸ್ಪರ್ಧೆ : ಶಿಶುವರ್ಗ – ಪ್ರಮಥ ಎಂ ಭಟ್ – ತೃತೀಯ, ಧಾತ್ರಿ ಆರ್ ರೈ – ತೃತೀಯ ಕಿಶೋರ ವರ್ಗ – ಆಶ್ರಯ್ ಪಿ.ವಿ ಮತ್ತು ರಕ್ಷಿತಾ ಡಿ – ಪ್ರಥಮ, ಧನುಷ್ ಮತ್ತು ಸ್ವಸ್ತಿಕ್ ಬಿ.ವಿ – ಪ್ರಥಮ, ಪ್ರತೀಕ್ […]

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ- 2017 : ದೃಶ್ಯ ಕಲೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ- 2017 : ದೃಶ್ಯ ಕಲೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ

Thursday, September 7th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ದೃಶ್ಯ ಕಲಾ ವಿಭಾಗದಲ್ಲಿ ಗೌತಮ್- ಚಿತ್ರಕಲೆ, ಅಮಿತಾ ಎಸ್.ಎನ್-ಕ್ಲೇ ಮಾಡೆಲ್, ಜನನಿ.ಬಿ – ಪೇಪರ್‌ಕ್ರಾಫ್ಟ್, ಧನ್ಯಕುಮಾರ್-ಕರಕುಶಲ ಕಲೆ ಈ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಪೂಜಾರಿ ಶೇರಾ ಇವರು ತರಬೇತಿ ನೀಡಿರುತ್ತಾರೆ.

ಜೆ.ಎಸ್.ಕೆ.ಎ ರಾಜ್ಯಮಟ್ಟದ ಕರಾಟೆ : ಸಾತ್ವಿಕ್‌ಗೆ ಬೆಸ್ಟ್ ಫೈಟರ್ ಅವಾರ್ಡ್

ಜೆ.ಎಸ್.ಕೆ.ಎ ರಾಜ್ಯಮಟ್ಟದ ಕರಾಟೆ : ಸಾತ್ವಿಕ್‌ಗೆ ಬೆಸ್ಟ್ ಫೈಟರ್ ಅವಾರ್ಡ್

Wednesday, September 6th, 2017

ದಿನಾಂಕ 3-9-2017 ರಂದು ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಸಭಾಭವನ ಸುಕಂದಕಟ್ಟೆ, ಮಂಗಳೂರು ಇಲ್ಲಿ ನಡೆದ 2ನೇ ರಾಜ್ಯಮಟ್ಟದ ಜೆ.ಎಸ್.ಕೆ.ಎ ಕರಾಟೆ ಚಾಂಪಿಯನ್ ಷಿಪ್‌ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಸಾತ್ವಿಕ್ ಶರ್ಮ ಬಿ.ಎಸ್ ’ಬೆಸ್ಟ್ ಫೈಟರ್’ (Grand Champion Kumite) ಪ್ರಶಸ್ತಿಯನ್ನು ಗಳಿಸಿರುತ್ತಾರೆ. ಇವರು ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ್‌ನ ಮಂಗಳೂರಿನ ನಿತಿನ್ ಎನ್ ಸುವರ್ಣ (Black Belt 4th DAN) , ಸಂಪತ್ ಕುಮಾರ್ ಹಾಗೂ ಶಿವಪ್ರಸಾದ್‌ರವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. […]

ಯಕ್ಷಗಾನ ಪ್ರದರ್ಶನ

ಯಕ್ಷಗಾನ ಪ್ರದರ್ಶನ

Monday, August 28th, 2017

ಕಲ್ಲಾರೆ ಶ್ರೀ ರಾಘವೇಂದ್ರ ಮಠದಲ್ಲಿಗಣೇಶ ಚತುರ್ಥಿಯ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮದ ಯಕ್ಷಚಿಣ್ಣರ ಬಳಗದವರಿಂದ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳರವರ ನಿರ್ದೇಶನದಲ್ಲಿ ಶ್ರೀ ಚಂದ್ರಶೇಖರ್ ಸುಳ್ಯಪದವು ಇವರ ಸಂಯೋಜನೆಯಲ್ಲಿ ಶ್ರೀ ರಾಮಾಂಜನೇಯ ಎಂಬ ಪುಣ್ಯಕಥಾ ಭಾಗ ಪ್ರದರ್ಶನ ನಡೆಯಿತು.

ಯಕ್ಷ ವೈಭವ

ಯಕ್ಷ ವೈಭವ

Monday, August 28th, 2017

ಕಡಬದ ದುರ್ಗಾಂಬಾ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಯಕ್ಷ ಚಿಣ್ಣರ ಬಳಗದವರಿಂದ ’ಶ್ರೀರಾಮದರ್ಶನಂ’ ಎಂಬ ಯಕ್ಷಗಾನ ಪ್ರದರ್ಶನವು ಶ್ರೀ ಚಂದ್ರಶೇಖರ್ ಸುಳ್ಯಪದವುರವರ ನಿರ್ದೇಶನದಲ್ಲಿ ನಡೆಯಿತು.

ಕರಾಟೆ ಸ್ಪರ್ಧೆ - ಶಾಲಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಕರಾಟೆ ಸ್ಪರ್ಧೆ – ಶಾಲಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Monday, August 28th, 2017

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ(ಆಡಳಿತ) ಮಂಗಳೂರು, ಜಿಲ್ಲಾಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯು ರೆಡ್ ಕ್ಯಾಮಲ್ಸ್ ಇಸ್ಲಾಮಿಕ್ ಶಾಲೆ ಮಂಗಳೂರು ಇಲ್ಲಿ ನಡೆದಿದ್ದು, ಇದರಲ್ಲಿ ಕರಾಟೆ 30-35 ಕೆ.ಜಿ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ಹಿತೇಶ್.ಪಿ.ಬಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪಿ. ಬಾಲಕೃಷ್ಣ ಗೌಡ ಮತ್ತು ಚಂದ್ರಾವತಿ ದಂಪತಿಗಳ ಪುತ್ರ.

ವಲಯ ಮಟ್ಟದ ಪ್ರೌಢಶಾಲಾ ಪ್ರತಿಭಾಕಾರಂಜಿ - ಶಾಲೆಗೆ ಪ್ರಶಸ್ತಿ

ವಲಯ ಮಟ್ಟದ ಪ್ರೌಢಶಾಲಾ ಪ್ರತಿಭಾಕಾರಂಜಿ – ಶಾಲೆಗೆ ಪ್ರಶಸ್ತಿ

Thursday, August 24th, 2017

ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ ಶ್ರೀ ಸೀತಾರಾಘವ ಪದವಿಪೂರ್ವ ವಿದ್ಯಾಲಯ ಪೆರ್ನಾಜೆ ಇಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಪ್ರೌಢಶಾಲಾ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಗೌತಮ್, ಅಮಿತಾ ಎಸ್.ಎನ್, ಜನನಿ. ಬಿ, ಧನ್ಯ ಕುಮಾರ್ ಇವರು ದೃಶ್ಯ ಕಲೆಯಲ್ಲಿ ಪ್ರಥಮ ಸ್ಥಾನ ಮತ್ತು ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪೃಥಾ ಆರ್ ರೈ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ

Wednesday, August 23rd, 2017

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ-ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸಂತ ವಿಕ್ಟರ್ಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದು ದ್ವಿತೀಯ ಸಮಗ್ರ ಪ್ರಶಸ್ತಿ ಗಳಿಸಿರುತ್ತಾರೆ. ವಿಜೇತರ ವಿವರ : ಕಿರಿಯ ಪ್ರಾಥಮಿಕ ವಿಭಾಗ : ಸುಶ್ಮಿತಾ- ಚಿತ್ರಕಲೆ(ಪ್ರಥಮ), ಭವಿಷ್ -ಸಂಸ್ಕೃತ ಕಂಠಪಾಠ (ದ್ವಿತೀಯ), ಸಿಂಚನಾ -ಧಾರ್ಮಿಕ ಪಠಣ- ಸಂಸ್ಕೃತ (ದ್ವಿತೀಯ), ತಶ್ವಿತ್ ರಾಜ್-ಕ್ಲೇ ಮಾಡೆಲಿಂಗ್ (ದ್ವಿತೀಯ), ಮಂಗಳಾ […]

ಈಜು ಸ್ಪರ್ಧೆ - ಪ್ರಶಸ್ತಿ

ಈಜು ಸ್ಪರ್ಧೆ – ಪ್ರಶಸ್ತಿ

Monday, August 21st, 2017

ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ಮಂಗಳೂರು ಇವರ ಆಶ್ರಯದಲ್ಲಿ ಲೇಡಿಹಿಲ್ ವಿಕ್ಟೋರಿಯ ಹೆಣ್ಮಕ್ಕಳ ಪ್ರೌಢಶಾಲೆ, ಉರ್ವ ಇಲ್ಲಿ ನಡೆದ ಜಿಲ್ಲಾಮಟ್ಟದ ಮಕ್ಕಳ ಆಟೋಟ ಸ್ಪರ್ಧೆ 2017-18 ಇದರ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ಶಿಶಿಲ್ 50 ಮೀಟರ್ ಫ್ರೀಸ್ಟೈಲ್‌ನಲ್ಲಿ ದ್ವಿತೀಯ, 200 ಮೀ ಫ್ರೀಸ್ಟೈಲ್‌ನಲ್ಲಿ ದ್ವಿತೀಯ, 100 ಮೀ ಫ್ರೀಸ್ಟೈಲ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವನು ಪರ್ಲಡ್ಕ ನಿವಾಸಿ ಶಿವ ಗೌಡ ಮತ್ತು ನಳಿನಿ ದಂಪತಿಗಳ ಪುತ್ರ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ’ಕಾವ್ಯವಾಚನ’

ಸ್ವಾತಂತ್ರ್ಯೋತ್ಸವದ ಅಂಗವಾಗಿ ’ಕಾವ್ಯವಾಚನ’

Monday, August 21st, 2017

ಷಣ್ಮುಖದೇವ ಪ್ರೌಢಶಾಲೆ, ಪೆರ್ಲಂಪಾಡಿ ಇಲ್ಲಿ ಸ್ವಾತಂತ್ರ್ಯೋತ್ಸವದ ದಿನದಂದು ’ಕರ್ಣಪರ್ವ’ದಿಂದ ಆಯ್ದ ವಿಷಯದಲ್ಲಿ ’ಕಾವ್ಯ ವಾಚನ’ ನಡೆಯಿತು. ವಾಚನವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಸುಳ್ಯಪದವು, ಪ್ರವಚನವನ್ನು ಕಟೀಲು ಮೇಳದ ಹಿರಿಯ ಕಲಾವಿದ ಅಪ್ಪಕುಂಞ ಯಾದವ್ ರವರು ಗೈದರು. ಶೃತಿಯಲ್ಲಿ ಶ್ರೀ ಲಿಂಗಪ್ಪ ಗೌಡ ಪುತ್ತೂರು ಸಹಕರಿಸಿದರು.

ಮಕ್ಕಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು- ಶ್ರೀ ಜನಾರ್ಧನ ರೈ ಆನಾಜೆ

ಮಕ್ಕಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು- ಶ್ರೀ ಜನಾರ್ಧನ ರೈ ಆನಾಜೆ

Saturday, August 19th, 2017

ಮಕ್ಕಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು. ಸೋಲು – ಗೆಲುವುಗಳ ಬಗೆಗೆ ಚಿಂತಿಸದೆ ಮುಂದೆ ಗೆಲ್ಲುವುವೆಂಬ ಭರವಸೆಯನ್ನು ಇಟ್ಟುಕೊಳ್ಳುವುದು ಅತೀ ಅಗತ್ಯ. ಎಂದು ಪುತ್ತೂರಿನ ಪಿ.ಡಬ್ಲ್ಯೂ.ಡಿ. ಕನ್ಸಲ್‌ಟೇಟರ್ ಶ್ರೀ ಜನಾರ್ದನ ರೈ ಆನಾಜೆ ಇವರು ವಿದ್ಯಾಭಾರತಿ ಕರ್ನಾಟಕ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆದ ’ಜಿಲ್ಲಾಮಟ್ಟದ ಕಬಡ್ಡಿ’ ಪಂದ್ಯಾಟವನ್ನು ಉದ್ಫಾಟಿಸಿ ಶುಭ ಹಾರೈಸಿದರು. ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಶಾರೀರಕ ಪ್ರಮುಖ್ ಆಗಿರುವ ಶ್ರೀಯುತ ಕರುಣಾಕರ್ […]

ಸ್ವಾತಂತ್ರ್ಯ ಯೋಧರ ಉಡುಗೆ - ತೊಡುಗೆ ಸ್ಪರ್ಧೆಯಲ್ಲಿ - ದ್ವಿತೀಯ

ಸ್ವಾತಂತ್ರ್ಯ ಯೋಧರ ಉಡುಗೆ – ತೊಡುಗೆ ಸ್ಪರ್ಧೆಯಲ್ಲಿ – ದ್ವಿತೀಯ

Saturday, August 19th, 2017

ರೋಟರಿ ಕ್ಲಬ್ ಪುತ್ತೂರು EAST ಇವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತ್ರಂತ್ರ್ಯ ಯೋಧರ ಉಡುಗೆ – ತೊಡುಗೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ವಿನೀಲ್ ವಿಶ್ವಕರ್ಮ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಉತ್ತಮ ಸಂಸ್ಕಾರವು ಬೆಳೆಯಲು ಭಜನೆಯು ಸಹಕಾರಿ - ಶಶಾಂಕ್ ನೆಲ್ಲಿತ್ತಾಯ

ಉತ್ತಮ ಸಂಸ್ಕಾರವು ಬೆಳೆಯಲು ಭಜನೆಯು ಸಹಕಾರಿ – ಶಶಾಂಕ್ ನೆಲ್ಲಿತ್ತಾಯ

Saturday, August 19th, 2017

ಭಜನೆಯಿಂದ ನಮ್ಮಲ್ಲಿ ಧರ್ಮಜಾಗೃತಿಯುಂಟಾಗಿ ದೇವರಲ್ಲಿ ಭಕ್ತಿಭಾವ ಉಂಟಾಗಿ ಸುಸಂಸ್ಕಾರ ಸಂಪನ್ನರಾಗಿ ಬೆಳೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹಿರಿಯರು ಮಕ್ಕಳನ್ನು ತಿದ್ದಿ ತೀಡಿ ಬೆಳೆಸಿದಲ್ಲಿ ಕಿರಿವಯಸ್ಸಿನಿಂದಲೇ ಉತ್ತಮ ಸಂಸ್ಕೃತಿಯನ್ನು ರೂಢಿಸಿಕೊಳ್ಳಲು ಸಹಾಯವಾಗುತ್ತದೆ. ಹೀಗೆಂದವರು ಶ್ರೀ ಶಶಾಂಕ ನೆಲ್ಲಿತ್ತಾಯರು. ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯು ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಪುತ್ತೂರಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಹಮ್ಮಿಕೊಂಡ ತಾಲೂಕು ಮಟ್ಟದ ಭಜನಾ ಸ್ಪರ್ಧೆಯ ಕಾರ್ಯಕ್ರಮದ ಮುಖ್ಯ ಅತಿಥಿ ನೆಲೆಯಲ್ಲಿ ಈ ಮೇಲಿನ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಫಾಟಿಸಿ […]

ರಕ್ಷಾಬಂಧನ ಕಾರ್ಯಕ್ರಮ

ರಕ್ಷಾಬಂಧನ ಕಾರ್ಯಕ್ರಮ

Friday, August 18th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಇಲ್ಲಿ ರಕ್ಷಾಬಂಧನವನ್ನು ವಿಶೇಷವಾಗಿ ಆಚರಿಸಲಾಯಿತು. ಪ್ರತಿ ತರಗತಿಯಲ್ಲಿ ಮಕ್ಕಳೇ ಪರಸ್ಪರ ರಕ್ಷೆ ಕಟ್ಟಿಕೊಳ್ಳುವ ಮೂಲಕ ಸಹೋದರತ್ವ ಭಾವವನ್ನು ತರಗತಿಯಿಂದಲೇ ಬೆಳೆಸಬೇಕೆಂಬ ಅರಿವನ್ನು ಮಾಡಿಕೊಂಡರು. ಶಾಲಾ ಶಿಕ್ಷಕರು ’ರಕ್ಷಾ ಬಂಧನದ’ ಮಹತ್ವದ ಬಗ್ಗೆ ತರಗತಿವಾರು ತಿಳಿಸಿದರು.

ಚಿತ್ರಕಲೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಚಿತ್ರಕಲೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

Thursday, August 17th, 2017

ರೋಟರಿ ಕ್ಲಬ್ ಪುತ್ತೂರು EAST ಇವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆಸಿದ ಚಿತ್ರಸ್ಪರ್ಧೆಯಲ್ಲಿ 5 ರಿಂದ 7 ನೇ ತರಗತಿ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖೇಶ್ ಕೃಷ್ಣ -ಪ್ರಥಮ ಮತ್ತು ಬೃಜೇಶ್ -ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಚಿತ್ರಕಲೆ-  ಶಾಲೆಗೆ ಹಲವು ಪ್ರಶಸ್ತಿ

ಚಿತ್ರಕಲೆ- ಶಾಲೆಗೆ ಹಲವು ಪ್ರಶಸ್ತಿ

Thursday, August 17th, 2017

ರೋಹಿಣಿ ಟೈಲರಿಂಗ್ ಮತ್ತು ಕ್ರಾಪ್ಟ್ ಸೆಂಟರ್ ಪುತ್ತೂರು ಲಯನ್ಸ್, ಲಯನೆಸ್ ಕ್ಲಬ್ ಪುತ್ತೂರು ಇವರು ಏರ್ಪಡಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 1 ರಿಂದ 5 ನೇ ತರಗತಿ ವಿಭಾಗದಲ್ಲಿ ಅಗಮ್ಯ ಪ್ರಥಮ ಸ್ಥಾನ ಪಡೆದಿದ್ದಾರೆ. 6 ರಿಂದ 10 ನೇ ತರಗತಿ ವಿಭಾಗದಲ್ಲಿ ಗೌತಮ್ – ದ್ವಿತೀಯ ಸ್ಥಾನ, ಆದಿತ್ಯ ನಾರಾಯಣ – ತೃತೀಯ ಸ್ಥಾನವನ್ನು ಪಡೆದಿದ್ದಾರೆ

ಖೋ - ಖೋ - ದಕ್ಷಿಣ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ಖೋ – ಖೋ – ದಕ್ಷಿಣ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

Wednesday, August 16th, 2017

ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಶ್ರೀರಾಮ ಪ್ರೌಢ ಶಾಲೆ, ಕಲ್ಲಡ್ಕ ಇಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಕಿಶೋರ ವರ್ಗದ ಖೋ – ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯು ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಆಗಸ್ಟ್ 26 ರಿಂದ 28 ರವರೆಗೆ ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

71 ನೇ ಸ್ವಾತಂತ್ರ್ಯ ದಿನಾಚರಣೆ - ಚೀನಾ ವಸ್ತುಗಳ ಬಳಕೆಯನ್ನು ನಿರ್ಬಂಧಿಸಲು ಪ್ರತಿಜ್ಞೆ

71 ನೇ ಸ್ವಾತಂತ್ರ್ಯ ದಿನಾಚರಣೆ – ಚೀನಾ ವಸ್ತುಗಳ ಬಳಕೆಯನ್ನು ನಿರ್ಬಂಧಿಸಲು ಪ್ರತಿಜ್ಞೆ

Wednesday, August 16th, 2017

ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 71 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹಣ ಗೈದು ಮಾತನಾಡಿದ ಶ್ರೀ ರಮಾನಂದ ನಾಯಕ್‌ರವರು, ನಾವು ಇಂದು ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವಂಥ ದಿನ. ಆದ್ದರಿಂದ ಭವಿಷ್ಯತ್ತಿನ ಮಕ್ಕಳಾದ ನೀವು ನಮ್ಮ ದೇಶವನ್ನು ರಕ್ಷಿಸಲು ಪಣತೊಡಬೇಕು ಎಂದು ಕರೆಯಿತ್ತರು. ಶ್ರೀಮತಿ ವಿಜಯರಮಾನಂದರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಮಕ್ಕಳು ಚೀನಾ ವಸ್ತುಗಳನ್ನು ನಿರ್ಬಂಧಿಸುವ ಪ್ರತಿಜ್ಞೆ ಮಾಡಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸರ್ವಸದಸ್ಯರು, […]

ಸೋಲಿಗೆ ಕುಗ್ಗದ ಗೆಲುವಿಗೆ ಹಿಗ್ಗದ ಸ್ಪರ್ಧಾ ಮನೋಭಾವವಿರಬೇಕು- ಐತ್ತಪ್ಪ ನಾಯ್ಕ

ಸೋಲಿಗೆ ಕುಗ್ಗದ ಗೆಲುವಿಗೆ ಹಿಗ್ಗದ ಸ್ಪರ್ಧಾ ಮನೋಭಾವವಿರಬೇಕು- ಐತ್ತಪ್ಪ ನಾಯ್ಕ

Friday, August 11th, 2017

ಸ್ಪರ್ಧೆಗಳನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ, ಸೇಲು – ಗೆಲುವುಗಳ ಅಂಜಿಕೆ ಇಲ್ಲದೆ ಆತ್ಮ ವಿಶ್ವಾಸದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ಬೆಳ್ಳಿಹಬ್ಬದ ಪ್ರಯುಕ್ತ ನಡೆದ ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮದಲ್ಲಿ ಉದ್ಫಾಟಕರಾಗಿ ಉಪಸ್ಥಿತರಿದ್ದ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಯುತ ಐತ್ತಪ್ಪ ನಾಯ್ಕರವರು ಹೇಳಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಕೋಶಾಧಿಕಾರಿಯಾದ ಶ್ರೀಯುತ ವಸಂತ ಸುವರ್ಣರವರು ಅಧ್ಯಕ್ಷ ಸ್ಥಾನವನ್ನು ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ […]

ಆಗಸ್ಟ್ 11 ರಂದು ವಿವೇಕಾನಂದದಲ್ಲಿ ತಾಲೂಕು ಮಟ್ಟದ ಸ್ಪರ್ಧೆಗಳು

Wednesday, August 9th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯು ತನ್ನ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು ಆ ಪ್ರಯುಕ್ತ ತಾಲೂಕಿನ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದಿನಾಂಕ 11-8-2017  ರಂದು ಶಾಲಾ ಆವರಣದಲ್ಲಿ ವಿವಿಧ ಸಾಹಿತ್ಯಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳನ್ನು ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ಆಯೋಜಿಸಲಾಗುತ್ತಿದ್ದು, ಭಾಷಣ ಮತ್ತು ಪ್ರಬಂಧ, ಕವನ, ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕೋಶಾಧಿಕಾರಿ ಶ್ರೀ ವಸಂತ ಸುವರ್ಣ ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ […]

ಯೋಗ ಸ್ಪರ್ಧೆ-ರಾಜ್ಯಮಟ್ಟಕ್ಕೆ ಆಯ್ಕೆ 

ಯೋಗ ಸ್ಪರ್ಧೆ-ರಾಜ್ಯಮಟ್ಟಕ್ಕೆ ಆಯ್ಕೆ 

Friday, August 4th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಮೂರು ಸಮಗ್ರ ಪ್ರಶಸ್ತಿ ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರು ಇಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಾಲವರ್ಗದ ಬಾಲಕಿಯರ ತಂಡ, ಕಿಶೋರ ವರ್ಗದ ಬಾಲಕರ ತಂಡ ಮತ್ತು ಬಾಲಕಿಯರ ತಂಡ ಸಮಗ್ರ ಪ್ರಶಸ್ತಿ ಪಡೆದಿದ್ದು, ಹುಬ್ಬಳ್ಳಿಯಲ್ಲಿ ಜರಗುವ ರಾಜ್ಯಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ ಹೇಮಶ್ರೀ (ಪ್ರಥಮಾ), ಸುಚಿತ (ತೃತೀಯ) ಸ್ಥಾನವನ್ನು ಪಡೆದಿರುತ್ತಾರೆ. […]

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ - ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ – ರಾಜ್ಯಮಟ್ಟಕ್ಕೆ ಆಯ್ಕೆ

Thursday, August 3rd, 2017

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸರಸ್ವತಿ ವಿದ್ಯಾಸಂಸ್ಥೆ ಕಡಬ ಇಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಕಿಶೋರ ವರ್ಗದ ಬಾಲಕಿಯರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾಭಾರತಿ ಜಿಲ್ಲಾಮಟ್ಟದ ಕ್ರೀಡಾಕೂಟ - ಶಾಲೆಗೆ ಸಮಗ್ರ ತಂಡ ಪ್ರಶಸ್ತಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಕ್ರೀಡಾಕೂಟ – ಶಾಲೆಗೆ ಸಮಗ್ರ ತಂಡ ಪ್ರಶಸ್ತಿ

Monday, July 24th, 2017

ವಿದ್ಯಾಭಾರತಿ ಕರ್ನಾಟಕ ಪ್ರಾಯೋಜಿತ ಜಿಲ್ಲಾಮಟ್ಟದ ಕ್ರೀಡಾಕೂಟ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಶಾಲೆಯ ಕಿಶೋರ ವರ್ಗದ ಬಾಲಕಿಯರ ವಿಭಾಗ ಮತ್ತು ಬಾಲವರ್ಗದ ಬಾಲಕರ ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಒಟ್ಟು 25 ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಹಿರಿಯ ವಿದ್ಯಾರ್ಥಿಗಳ ಸಭೆ

ಹಿರಿಯ ವಿದ್ಯಾರ್ಥಿಗಳ ಸಭೆ

Saturday, July 22nd, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ಈ ವರ್ಷ ನಡೆಯುವ ’ಬೆಳ್ಳಿಹಬ್ಬ’ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಬಳಿಕ ಹೊಸ ವಿದ್ಯಾರ್ಥಿ ಸಂಘವನ್ನು ರಚಿಸಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶ್ರೀ ವಿರೂಪಾಕ್ಷ, ಉಪಾಧ್ಯಕ್ಷರಾಗಿ ಶ್ರೀಮತಿ ದೀಪಿಕಾ, ಕಾರ್ಯದರ್ಶಿಯಾಗಿ ಶ್ರೀ ವಿನೋದ್­ರವನ್ನು ಸರ್ವಾನುಮತದಿಂದ ನೇಮಿಸಲಾಯಿತು. ಈ ಹಿಂದಿನ ಅಧ್ಯಕ್ಷರಾದ ಶ್ರೀ ಅನೀಶ್ ಬಡೆಕ್ಕಿಲರವರನ್ನು ಗೌರವ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಅಚ್ಯುತ ನಾಯಕ್ ಮಾತನಾಡಿ ಹಿರಿಯ ವಿದ್ಯಾರ್ಥಿಗಳು ಶಾಲೆಯ ಪ್ರಗತಿಗೆ ಸಹಾಯಕರಾಗಿರುವವರು […]

ಗುರುವಂದನಾ ಕಾರ್ಯಕ್ರಮ

ಗುರುವಂದನಾ ಕಾರ್ಯಕ್ರಮ

Friday, July 14th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಬೌದ್ಧಿಕ್ ಅನ್ನು ನೀಡಲು ಮೈತ್ರೀಯಿ ಗುರುಕುಲದ ಪದ್ಮ ಮಾತಾಜಿಯವರು ಆಗಮಿಸಿದರು. ಇವರು ಕಥೆಯ ಮುಖಾಂತರ ಮಕ್ಕಳಿಗೆ ಗುರುಗಳ ಮಹತ್ವವನ್ನು ಸಾರುತ್ತಾ ನಮ್ಮ ಜೀವನದಲ್ಲಿ ಗುರುಗಳ ಪ್ರಾಮುಖ್ಯತೆಯನ್ನು ಮನಮುಟ್ಟುವಂತೆ ತಿಳಿಸಿದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯಗುರು ನಳಿನಿ ಮಾತಾಜಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ದೇಶಭಕ್ತಿಗೀತೆಯನ್ನು ಹಾಡಿದರು. ಶ್ರೀಮತಿ ಗೀತಾ ಮಾತಾಜಿಯವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಶ್ರೀಲತಾ ಮಾತಾಜಿಯವರು ಧನ್ಯವಾದ ಸಮರ್ಪಿಸಿದರು.

ಗುರುಪೂಜಾ ಕಾರ್ಯಕ್ರಮ

ಗುರುಪೂಜಾ ಕಾರ್ಯಕ್ರಮ

Friday, July 14th, 2017

ವಿದ್ಯಾರ್ಥಿ ಜೀವನದಲ್ಲಿ ಸಮರ್ಪಣಾ ಭಾವ ಬಂದಾಗ ದೇಶದ ಪ್ರಗತಿ ಸಾಧ್ಯ ಗುರುವೇದವ್ಯಾಸರ ಗುರುತ್ವ ನೆಲೆ ಸರ್ವವ್ಯಾಪ್ತಿಯಾದುದು ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮೆಯ ಪ್ರಯುಕ್ತ ಮಾತನಾಡುತ್ತಾ ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರು ನುಡಿದರು. ಗುರುಪೂಜಾ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಅಚ್ಚುತ ನಾಯಕ್, ಸಂಚಾಲಕರಾದ ಶ್ರೀ ವಿನೋದ್ ಕುಮಾರ್ ರೈಯವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಶ್ರೀ ಚಂದ್ರಶೇಖರ ಸುಳ್ಯಪದವುರವರು ನೆರವೇರಿಸಿದರು.

ಗುರುವಂದನೆ

ಗುರುವಂದನೆ

Friday, July 14th, 2017

ಗುರುಪೂರ್ಣಿಮೆಯ ಪ್ರಯುಕ್ತ ಕಾಡುಮನೆಯಲ್ಲಿ ಇರುವ ನಿವೃತ್ತ ಶಿಕ್ಷಕರಾದ ಶ್ರೀ ಯಶವಂತ ಬೇಕಲ್ ರವರ ಮನೆಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ಭೇಟಿಯಿತ್ತು ಅವರನ್ನು ಅಭಿನಂದಿಸಿ ಅವರ ಆಶೀರ್ವಾದ ಪಡೆದರು. ಕಾರ್ಯಕ್ರಮದಿಂದ ಸಂತೋಷರಾದ ಯಶವಂತ ಬೇಕಲ್ ರವರು ಗುರುಪೂರ್ಣಿಮೆಯ ಶ್ರೇಷ್ಠತೆಯ ಬಗ್ಗೆ ಮಾತನಾಡುತ್ತಾ ಹಿಂದಿನ ಗುರುಕುಲ ಶಿಕ್ಷಣದ ಶ್ರೇಷ್ಟತೆ ಹಾಗೂ ಈಗಿನ ಮೆಕಾಲೆ ಶಿಕ್ಷಣ ಪದ್ಧತಿಯ ಇತಿಮಿತಿಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಅಲ್ಲದೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಾ ಸನಾತನ […]

ಸಮಾಜಮುಖಿಯಾಗಿ ಬಾಳೋಣ -ಕಮಲಾಕ್ಷಿ ಟೀಚರ್

ಸಮಾಜಮುಖಿಯಾಗಿ ಬಾಳೋಣ -ಕಮಲಾಕ್ಷಿ ಟೀಚರ್

Wednesday, July 12th, 2017

ಗುರು ಪೂರ್ಣಿಮೆಯ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳು ಕರ್ಕುಂಜ ನಿವಾಸಿ ನಿವೃತ್ತ ಶಿಕ್ಷಕಿ ಶ್ರೀಮತಿ ಕಮಲಾಕ್ಷಿಯವರ ಮನೆಗೆ ತೆರಳಿ ಅವರನ್ನು ಅಭಿನಂದಿಸಿ ಅವರಿಂದ ಆಶೀರ್ವಾದವನ್ನು ಪಡೆದರು. ಶಾಲೆಯ ಮಕ್ಕಳಿಂದ ವಿಶಿಷ್ಟ ರೀತಿಯ ಗುರುಪೂರ್ಣಿಮೆ ಆಚರಣೆಯ ಬಗ್ಗೆ ಖುಷಿ ವ್ಯಕ್ತಪಡಿಸಿದ ಇವರು ನಾವು ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳೋಣ. ಸಮಾಜಕ್ಕೆ ಬೇಕಾದ ವ್ಯಕ್ತಿಯಾಗಿ ಬಾಳೋಣ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಮಲಾಕ್ಷಿಟೀಚರ್‌ರವರು ತಮ್ಮ ಅನುಭವವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಶ್ರೀಮತಿ ವೀಣಾ […]

ಗುರುಪೂರ್ಣಿಮೆ 2017

ಗುರುಪೂರ್ಣಿಮೆ 2017

Tuesday, July 11th, 2017

ಗುರುಗಳು ತಾಯಿಗೆ ಸಮಾನ. ಅಜ್ಞಾನವೆಂಬ ಅಂಧಕಾರವನ್ನು ಹೋಗಲಾಡಿಸಿ ಬೆಳಕಿನೆಡೆಗೆ ಸಾಗಿಸುವವನೇ ನಿಜವಾದ ಗುರು. ಇಂತಹ ಗುರುಗಳನ್ನು ಸದಾಸ್ಮರಿಸಿ, ಆರಾಧಿಸಬೇಕು ಎಂಬುದಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ’ಗುರುಪೂರ್ಣಿಮೆ’ ಆಚರಣೆಯ ಕುರಿತಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಶೈಕ್ಷಣಿಕ ಪರಿವೀಕ್ಷಕರಾದ ಶ್ರೀಯುತ ರಘುರಾಜ್ ಉಬರಡ್ಕ ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದು ಗುರು-ಶಿಷ್ಯ ಪರಂಪರೆಯನ್ನು ಕುರಿತು ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ದುರ್ಗಾ ಮಾತಾಜಿ ಉಪಸ್ಥಿತರಿದ್ದರು. ಶ್ರೀಮತಿ ನಮಿತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿಗಲು ಪ್ರಾರ್ಥಿಸಿದರು. […]

2017-18 ನೇ ಸಾಲಿನ ರಕ್ಷಕ - ಶಿಕ್ಷಕ ಸಂಘಕ್ಕೆ ಆಯ್ಕೆ

2017-18 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘಕ್ಕೆ ಆಯ್ಕೆ

Wednesday, July 5th, 2017

2017-18 ನೇ ಸಾಲಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ರಕ್ಷಕ – ಶಿಕ್ಷಕ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಶ್ರೀ ಸತ್ಯಪ್ರಸಾದ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ದಿವ್ಯಲಕ್ಷ್ಮೀ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಜಯಂತ್ ಹಾಗೂ ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಶಶಿಕಲಾ ಆಯ್ಕೆಯಾದರು. ಶಾಲಾ ಸಂಚಾಲಕರು, ಮುಖ್ಯೋಪಾಧ್ಯಾಯರ ಮತ್ತು ಆಯ್ದ ಪೋಷಕರ ಹಾಗೂ ನಿಕಟಪೂರ್ವ ಶಿಕ್ಷಕ -ರಕ್ಷಕ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಮಾತೃ ಭಾಷೆಯ ಸಂಸ್ಕಾರಯುತ ಶಿಕ್ಷಣದಿಂದ ಮಕ್ಕಳು ಸತ್ಪ್ರಜೆಗಳಾಗುವರು - ಶ್ರೀ ಅಚ್ಯುತ ನಾಯಕ್

ಮಾತೃ ಭಾಷೆಯ ಸಂಸ್ಕಾರಯುತ ಶಿಕ್ಷಣದಿಂದ ಮಕ್ಕಳು ಸತ್ಪ್ರಜೆಗಳಾಗುವರು – ಶ್ರೀ ಅಚ್ಯುತ ನಾಯಕ್

Wednesday, July 5th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಭಾಂಗಣದಲ್ಲಿ 8 ಮತ್ತು 9 ನೇ ತರಗತಿಯ ಮಕ್ಕಳ ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಅಚ್ಯುತ್ ನಾಯಕ್ ರವರು ಮಾತೃಭಾಷೆಯ  ಶಿಕ್ಷಣದ ಅಗತ್ಯ ಹಾಗೂ ಪ್ರಯೋಜನಗಳನ್ನು ವಿವರಿಸುತ್ತಾ ಈ ಮೇಲಿನ ಮಾತುಗಳನ್ನು ಹೇಳಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯ ರಮೇಶ್ಚಂದ್ರ ಮತ್ತು ಶಾಲಾ ಮುಖ್ಯಗುರುಗಳು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಶಾಲಾ ಚಟುವಟಿಕೆಗಳು ಮಕ್ಕಳ ಶೈಕ್ಷಣಿಕ ಹಾಗೂ ಆಟೋಟ ವಿಷಯಗಳ ಬಗ್ಗೆ […]

ವೃಕ್ಷೋ ರಕ್ಷತಿ ರಕ್ಷಿತಃ - ಡಾ. ಸುರೇಶ್ ಪುತ್ತೂರಾಯ

ವೃಕ್ಷೋ ರಕ್ಷತಿ ರಕ್ಷಿತಃ – ಡಾ. ಸುರೇಶ್ ಪುತ್ತೂರಾಯ

Monday, July 3rd, 2017

ಅನಾದಿ ಕಾಲದಿಂದಲೂ ನಮ್ಮ ಹಿರಿಯರು ಪರಿಸರದಲ್ಲಿ ಶುದ್ಧ ನೀರು, ಗಾಳಿ, ಮಣ್ಣಿನ ಅವಶ್ಯಕತೆ ಅರಿತವರಾಗಿದ್ದು ಗಿಡ ಮರಗಳನ್ನು ಆಯಾ ರಾಶಿ, ನಕ್ಷತ್ರಗಳಿಗೆ ಸಂಬಂಧ ಕಲ್ಪಿಸಿ ಆ ನೆಪದಲ್ಲಿ ಪ್ರಕೃತಿ ಆರಾಧನೆ ಮಾಡುತ್ತಿದ್ದರು. ಆದರೆ ಈಗ ಅಭಿವೃದ್ಧಿಯ ಹೆಸರಿನಲ್ಲಿ ಮಾನವ ನಡೆಸುವ ಚಟುವಟಿಕೆಗಳಿಂದ ಶೇಕಡಾ 73 ರಷ್ಟು ಇರಬೇಕಾದ ಕಾಡಿನ ಪ್ರಮಾಣವು ಶೇಕಡಾ 21 ಕ್ಕೆ ಇಳಿದಿದೆ. ಆದುದರಿಂದ ಪರಿಸರದ ಉಳಿವಿಗಾಗಿ ಭಾವೀ ಪ್ರಜೆಗಳಾದ ಮಕ್ಕಳಿಗೆ ಯಾವುದೇ ಗಿಡವಾದರೂ ಸರಿ ನೆಟ್ಟು ಬೆಳೆಸುವ ತಿಳಿವಳಿಕೆ ನೀಡಿ ಪ್ರಕೃತಿ ಮಾತೆಗೆ ಕೃತಜ್ಞತೆ ಸಲ್ಲಿಸೋಣ […]

Highslide for Wordpress Plugin