ಶಾಲಾ ಚುನಾವಣೆ
Friday, June 9th, 2017ವಿವೇಕಾನಂದಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ 2017-18 ನೇ ಸಾಲಿನ ಶಾಲಾ ಚುನಾವಣೆಯು ಮುಖ್ಯಗುರುಗಳ ಸಮ್ಮುಖದಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದ ನಾಯಕನಾಗಿ ಸಾತ್ವಿಕ್ ಶರ್ಮ ಬಿ.ಎಸ್ ಮತ್ತು ಉಪನಾಯಕನಾಗಿ ಆಶ್ರಯ್ ಪಿ.ವಿ. ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಆದಿತ್ಯ ನಾರಾಯಣ ಪಿ.ಎಸ್. ಮತ್ತು ಉಪನಾಯಕನಾಗಿ ಮುಖೇಶ್ ಕೃಷ್ಣ ಆಯ್ಕೆಯಾದರು. ಚುನಾವಣೆಯ ಉಸ್ತುವಾರಿಯನ್ನು ಶಿಕ್ಷಕರಾದ ಶ್ರೀಯುತ ವಿಶ್ವನಾಥ ಮುಡೂರು ವಹಿಸಿದರು ಎಲ್ಲಾ ಶಿಕ್ಷಕರು ಸಹಕರಿಸಿದರು.
















































